ಎಡಿಟೋರಿಯಲ್

ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯುವುದು ಹೇಗೆ?

ಗೌತಮ್ ಮೌರ್ಯ,

ಎನ್‌ಎಸ್‌ಯುಐ, ಮೈಸೂರು ಜಿಲ್ಲಾ ಉಪಾಧ್ಯಕ್ಷ .

ಇತ್ತೀಚೆಗೆ ಸರ್ಕಾರದಿಂದ ರೂಪಿತಗೊಳ್ಳುತ್ತಿರುವ ಸಾಕಷ್ಟು ಯೋಜನೆಗಳು ಜನರ ಬದುಕು ಕಟ್ಟಿಕೊಡುವ ಬದಲು ಸಂಕಷ್ಟಕ್ಕೆ ದೂಡುತ್ತಿವೆ. ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯನ್ನು ಏರಿಸಿ ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿರುವ ಸರ್ಕಾರ ಇದೀಗ ವಿದ್ಯಾರ್ಥಿ-ಗಳನ್ನೂ ಶಿಕ್ಷಣದಿಂದ ವಂಚಿಸಲು ಮುಂದಾಗಿದೆ ಎನಿಸುತ್ತದೆ.

ಸರ್ಕಾರ ೨೦೨೨-೨೩ನೇ ಸಾಲಿನ ೧ರಿಂದ ೮ನೇ ತರಗತಿವರೆಗಿನ ಪ.ಜಾತಿ ಮತ್ತು ಪ.ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವೇತನವನ್ನು ರದ್ದುಮಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಸರ್ಕಾರಕ್ಕೆ ವಿದ್ಯಾರ್ಥಿಗಳ ವೇತನವನ್ನು ನಿಲ್ಲಿಸುವ ಪ್ರಮೇಯವಾದರೂ ಏನಿದೆ? ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರ ಸರ್ವಾಽಕಾರಿ ಧೋರಣೆಯಿಂದ ಬಡವರ ಪರವಾಗಿದ್ದ ಯೋಜನೆಗಳೆಲ್ಲವನ್ನ್ನೂ ನಿಲ್ಲಿಸಲು ಮುಂದಾಗುತ್ತಿದೆ. ಇದೇ ಹಾದಿಯಲ್ಲಿ ಈಗ ವಿದ್ಯಾರ್ಥಿ ವೇತನವನ್ನೂ ಸ್ಥಗಿತಗೊಳಿಸಿದ್ದು, ಬಡ ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ. ಗ್ರಾಮೀಣ ಮಕ್ಕಳು ಆರ್ಥಿಕವಾಗಿ ಹಿಂದುಳಿದಿರುವುದರಿಂದ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅದಕ್ಕೇ ಕತ್ತರಿ ಹಾಕಿರುವ ಸರ್ಕಾರಕ್ಕೆ ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿದ್ಯಾರ್ಥಿವೇತನವೇ ಆರ್ಥಿಕ ಬೆನ್ನೆಲುಬು ಎಂಬುದು ತಿಳಿದಿಲ್ಲವೇ? ಬಡಮಕ್ಕಳು ಮೂಲ ಸೌಕರ್ಯಗಳನ್ನು ಕಂಡುಕೊಳ್ಳಲು ವಿದ್ಯಾರ್ಥಿ ವೇತನ ಆಸರೆ ಎಂಬುದರ ಅರಿವಿಲ್ಲವೇ? ಅವರ ಭವಿಷ್ಯಕ್ಕೆ ಸಹಾಯಕ ಎಂಬುದು ಸರ್ಕಾರದ ಗಮನದಲ್ಲಿಲ್ಲ್ಲವೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ.

ಅಷ್ಟಕ್ಕೂ ಸರ್ಕಾರ ಪ.ಜಾತಿ, ಪ.ಪಂಗಡಗಳ ವಿದ್ಯಾರ್ಥಿಗಳ ವೇತನ ನಿಲ್ಲಿಸುವುದರ ಉದ್ದೇಶವಾದರೂ ಏನು? ಈ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದು, ಮುಖ್ಯವಾಹಿನಿಗೆ ಬರುವುದನ್ನು ತಡೆಯಲು ಸರ್ಕಾರ ಹೀಗೆ ಮಾಡಿರಬಹುದೇ? ಜೊತೆಗೆ ಹಿಂದುಳಿದ ಸಮುದಾಯಗಳ ಮಕ್ಕಳನ್ನು ಆರ್ಥಿಕವಾಗಿ ದುರ್ಬಲರನ್ನಾಗಿಸುವ, ಆರ್ಥಿಕ ಕೊರತೆ ಉಂಟಾಗಿ ಶಿಕ್ಷಣದಿಂದ ಮಕ್ಕಳು ದೂರ ಉಳಿಯುವಂತೆ ಮಾಡುವ ಉದ್ದೇಶ ಸರ್ಕಾರದ್ದೇ ಎನ್ನುವ ಅನುಮಾನಗಳನ್ನು ಸೃಷ್ಟಿಸಿದೆ.

ಹೌದು..! ಸರ್ಕಾರ ಈ ರೀತಿಯ ನಡೆ ಅನುಸರಿಸಿದಾಗಲೆಲ್ಲ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸಿ ಶಿಕ್ಷಣ ಬಿಟ್ಟು ದುಡಿಮೆಯ ಹಾದಿ ಹಿಡಿಯುತ್ತಾರೆ. ಈ ಬೆಳವಣಿಗೆ ಮಕ್ಕಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಕುಗ್ಗುವಂತೆ ಮಾಡುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಸರ್ಕಾರಗಳು ಮಕ್ಕಳಿಗೆ ಆರಂಭಿಕ ಹಂತದಲ್ಲೇ ಉಚಿತ ಶಿಕ್ಷಣ, ಹೆಚ್ಚಿನ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಬೇಕಿತ್ತು. ಆದರೆ ಈಗಿನ ಸರ್ಕಾರ ಮಕ್ಕಳ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿ, ಅವರನ್ನು ಶಾಲೆ ಬಿಡಿಸುವ ಪ್ರಯತ್ನಕ್ಕೆ ಮುಂದಾಗಿದೆ.

ಪ್ರಸ್ತುತ ಸರ್ಕಾರ ತನ್ನ ದುರಾಡಳಿತವನ್ನು ಮರೆಮಾಚಲು ಧರ್ಮಗಳ ನಡುವೆ ಭಿನ್ನ್ನಾಭಿಪ್ರಾಯ ಮೂಡಿಸುವುದು, ಗಡಿ ವಿವಾದ ಸೃಷ್ಟಿಸುವುದು, ಗುಂಬಜ್‌ವಿವಾದ, ಟಿಪ್ಪು ಹೆಸರಿನ ಬದಲಾವಣೆ ಇಂತಹ ಕೆಲಸಗಳಿಗೆ ಹೆಚ್ಚು ಆಸಕ್ತಿ ತೋರುತ್ತಿದೆ. ಶಿಕ್ಷಣ, ಆರೋಗ್ಯ, ನಾಗರಿಕ ಸೇವೆಗಳಿಗೆ ಆದತೆ ನೀಡಬೇಕಾದ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಹಾದಿ ಹಿಡಿಯುತ್ತಿದೆಯೇ ಎನಿಸುತ್ತದೆ. ರಾಜ್ಯ ಸರ್ಕಾರ ಇನ್ನಾದರೂ ಬಡವರು, ರೈತರು, ಜನ ಸಾಮಾನ್ಯರು ಹಾಗೂ ವಿದ್ಯಾರ್ಥಿಗಳ ಪರವಾಗಿ ಯೋಜನೆಗಳನ್ನು ರೂಪಿಸುವಂತಾಗಲಿ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago