ಎಡಿಟೋರಿಯಲ್

ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯುವುದು ಹೇಗೆ?

ಗೌತಮ್ ಮೌರ್ಯ,

ಎನ್‌ಎಸ್‌ಯುಐ, ಮೈಸೂರು ಜಿಲ್ಲಾ ಉಪಾಧ್ಯಕ್ಷ .

ಇತ್ತೀಚೆಗೆ ಸರ್ಕಾರದಿಂದ ರೂಪಿತಗೊಳ್ಳುತ್ತಿರುವ ಸಾಕಷ್ಟು ಯೋಜನೆಗಳು ಜನರ ಬದುಕು ಕಟ್ಟಿಕೊಡುವ ಬದಲು ಸಂಕಷ್ಟಕ್ಕೆ ದೂಡುತ್ತಿವೆ. ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯನ್ನು ಏರಿಸಿ ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿರುವ ಸರ್ಕಾರ ಇದೀಗ ವಿದ್ಯಾರ್ಥಿ-ಗಳನ್ನೂ ಶಿಕ್ಷಣದಿಂದ ವಂಚಿಸಲು ಮುಂದಾಗಿದೆ ಎನಿಸುತ್ತದೆ.

ಸರ್ಕಾರ ೨೦೨೨-೨೩ನೇ ಸಾಲಿನ ೧ರಿಂದ ೮ನೇ ತರಗತಿವರೆಗಿನ ಪ.ಜಾತಿ ಮತ್ತು ಪ.ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವೇತನವನ್ನು ರದ್ದುಮಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಸರ್ಕಾರಕ್ಕೆ ವಿದ್ಯಾರ್ಥಿಗಳ ವೇತನವನ್ನು ನಿಲ್ಲಿಸುವ ಪ್ರಮೇಯವಾದರೂ ಏನಿದೆ? ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರ ಸರ್ವಾಽಕಾರಿ ಧೋರಣೆಯಿಂದ ಬಡವರ ಪರವಾಗಿದ್ದ ಯೋಜನೆಗಳೆಲ್ಲವನ್ನ್ನೂ ನಿಲ್ಲಿಸಲು ಮುಂದಾಗುತ್ತಿದೆ. ಇದೇ ಹಾದಿಯಲ್ಲಿ ಈಗ ವಿದ್ಯಾರ್ಥಿ ವೇತನವನ್ನೂ ಸ್ಥಗಿತಗೊಳಿಸಿದ್ದು, ಬಡ ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ. ಗ್ರಾಮೀಣ ಮಕ್ಕಳು ಆರ್ಥಿಕವಾಗಿ ಹಿಂದುಳಿದಿರುವುದರಿಂದ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅದಕ್ಕೇ ಕತ್ತರಿ ಹಾಕಿರುವ ಸರ್ಕಾರಕ್ಕೆ ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿದ್ಯಾರ್ಥಿವೇತನವೇ ಆರ್ಥಿಕ ಬೆನ್ನೆಲುಬು ಎಂಬುದು ತಿಳಿದಿಲ್ಲವೇ? ಬಡಮಕ್ಕಳು ಮೂಲ ಸೌಕರ್ಯಗಳನ್ನು ಕಂಡುಕೊಳ್ಳಲು ವಿದ್ಯಾರ್ಥಿ ವೇತನ ಆಸರೆ ಎಂಬುದರ ಅರಿವಿಲ್ಲವೇ? ಅವರ ಭವಿಷ್ಯಕ್ಕೆ ಸಹಾಯಕ ಎಂಬುದು ಸರ್ಕಾರದ ಗಮನದಲ್ಲಿಲ್ಲ್ಲವೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ.

ಅಷ್ಟಕ್ಕೂ ಸರ್ಕಾರ ಪ.ಜಾತಿ, ಪ.ಪಂಗಡಗಳ ವಿದ್ಯಾರ್ಥಿಗಳ ವೇತನ ನಿಲ್ಲಿಸುವುದರ ಉದ್ದೇಶವಾದರೂ ಏನು? ಈ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದು, ಮುಖ್ಯವಾಹಿನಿಗೆ ಬರುವುದನ್ನು ತಡೆಯಲು ಸರ್ಕಾರ ಹೀಗೆ ಮಾಡಿರಬಹುದೇ? ಜೊತೆಗೆ ಹಿಂದುಳಿದ ಸಮುದಾಯಗಳ ಮಕ್ಕಳನ್ನು ಆರ್ಥಿಕವಾಗಿ ದುರ್ಬಲರನ್ನಾಗಿಸುವ, ಆರ್ಥಿಕ ಕೊರತೆ ಉಂಟಾಗಿ ಶಿಕ್ಷಣದಿಂದ ಮಕ್ಕಳು ದೂರ ಉಳಿಯುವಂತೆ ಮಾಡುವ ಉದ್ದೇಶ ಸರ್ಕಾರದ್ದೇ ಎನ್ನುವ ಅನುಮಾನಗಳನ್ನು ಸೃಷ್ಟಿಸಿದೆ.

ಹೌದು..! ಸರ್ಕಾರ ಈ ರೀತಿಯ ನಡೆ ಅನುಸರಿಸಿದಾಗಲೆಲ್ಲ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸಿ ಶಿಕ್ಷಣ ಬಿಟ್ಟು ದುಡಿಮೆಯ ಹಾದಿ ಹಿಡಿಯುತ್ತಾರೆ. ಈ ಬೆಳವಣಿಗೆ ಮಕ್ಕಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಕುಗ್ಗುವಂತೆ ಮಾಡುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಸರ್ಕಾರಗಳು ಮಕ್ಕಳಿಗೆ ಆರಂಭಿಕ ಹಂತದಲ್ಲೇ ಉಚಿತ ಶಿಕ್ಷಣ, ಹೆಚ್ಚಿನ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಬೇಕಿತ್ತು. ಆದರೆ ಈಗಿನ ಸರ್ಕಾರ ಮಕ್ಕಳ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿ, ಅವರನ್ನು ಶಾಲೆ ಬಿಡಿಸುವ ಪ್ರಯತ್ನಕ್ಕೆ ಮುಂದಾಗಿದೆ.

ಪ್ರಸ್ತುತ ಸರ್ಕಾರ ತನ್ನ ದುರಾಡಳಿತವನ್ನು ಮರೆಮಾಚಲು ಧರ್ಮಗಳ ನಡುವೆ ಭಿನ್ನ್ನಾಭಿಪ್ರಾಯ ಮೂಡಿಸುವುದು, ಗಡಿ ವಿವಾದ ಸೃಷ್ಟಿಸುವುದು, ಗುಂಬಜ್‌ವಿವಾದ, ಟಿಪ್ಪು ಹೆಸರಿನ ಬದಲಾವಣೆ ಇಂತಹ ಕೆಲಸಗಳಿಗೆ ಹೆಚ್ಚು ಆಸಕ್ತಿ ತೋರುತ್ತಿದೆ. ಶಿಕ್ಷಣ, ಆರೋಗ್ಯ, ನಾಗರಿಕ ಸೇವೆಗಳಿಗೆ ಆದತೆ ನೀಡಬೇಕಾದ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಹಾದಿ ಹಿಡಿಯುತ್ತಿದೆಯೇ ಎನಿಸುತ್ತದೆ. ರಾಜ್ಯ ಸರ್ಕಾರ ಇನ್ನಾದರೂ ಬಡವರು, ರೈತರು, ಜನ ಸಾಮಾನ್ಯರು ಹಾಗೂ ವಿದ್ಯಾರ್ಥಿಗಳ ಪರವಾಗಿ ಯೋಜನೆಗಳನ್ನು ರೂಪಿಸುವಂತಾಗಲಿ.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

48 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

50 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

53 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

55 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

1 hour ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

1 hour ago