ಎಡಿಟೋರಿಯಲ್

ಸಾಂಸ್ಕೃತಿಕ ಮೈಸೂರಿನ ಘನತೆ ಉಳಿಸಿವುದು ಅಗತ್ಯ

ಆತಂಕ ಮೂಡಿಸುತ್ತಿರುವ ದುಷ್ಕೃತ್ಯಗಳು 

-ಅನಿಲ್ ಅಂತರಸಂತೆ

ಅರಮನೆಗಳ ನಗರ, ಸಾಂಸ್ಕೃತಿಕ ನಗರ ಎಂಬ ಖ್ಯಾತಿಯ ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ಸಾಹಿತಿಗಳು, ಪ್ರಜ್ಞಾವಂತರು, ಹೋರಾಟಗಾರರು ಇರುವ ಮೈಸೂರು ಎತ್ತ ಸಾಗುತ್ತಿದೆ ಎಂಬ ಅನುಮಾನ ಮೂಡುವಂತೆ ಇತ್ತೀಚೆಗೆ ಕೆಲ ಪ್ರಕರಣಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ಸದ್ಯದ ಉದಾಹರಣೆ ಎಂದರೆ ಭಾನುವಾರ ರಾತ್ರಿ ಯುವಕನೊಬ್ಬ ಮೂವರು ನಾಗರಿಕರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ.

ಅಷ್ಟಕ್ಕೂ ಅವರ ಮಾಡಿದ ತಪ್ಪು ಏನು? ಆ ಯುವಕನಿಗೆ ಕಾರನ್ನು ಎರ್ರಾಬಿರ್ರಿ ಓಡಿಸಬೇಡ ಎಂದು ಹಿತನುಡಿ ಹೇಳಿದ್ದಷ್ಟೆ ಅದನ್ನೇ ಆ ಯುವಕ ತಪ್ಪೆಂದು ಭಾವಿಸಿ ಕಾರನ್ನು ಅವರ ಮೇಲೆ ಹತ್ತಿಸಲು ಎಂಬುದು ವರದಿಯಾಗಿದೆ.

ನಾಗರಿಕ ಸಮಾಜದಲ್ಲಿ ಮನುಷ್ಯನು ಹಿರಿಯರಿಗೆ ಗೌರವ ಕೊಡುವುದಿರಲಿ ಕ್ಷುಲ್ಲಕ ಕಾರಣಗಳಿಗೆ ಅವರೊಂದಿಗೆ ಅವಾನವೀಯವಾಗಿ ನಡೆದುಕೊಳ್ಳುವುದು, ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವುದು, ಕೊಲ್ಲುವ ಪ್ರಕರಣಗಳೂ ಹೆಚ್ಚಾಗತೊಡಗಿವೆ. ಇವುಗಳಿಗೆ ಕಡಿವಾಣ ಹಾಕಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದೆ. ಆದರೆ, ಮತ್ತಷ್ಟು ಕಠಿಣ ಕ್ರಮಗಳನ್ನು ಅನುಸರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆಲ ವರ್ಷಗಳಿಂದ ಮೈಸೂರು ಸಾಕಷ್ಟು ಅಪರಾಧ ವಿಚಾರಗಳಿಂದಾಗಿ ಸದಾ ಸುದ್ದಿಯಲ್ಲಿದೆ. ಇಲ್ಲಿ ಆಗಾಗ ಕೊಲೆಗಳು, ಸುಲಿಗೆಗಳು, ಅತ್ಯಾಚಾರ, ಕಳ್ಳತನದಂತಹ ಪ್ರಕರಣಗಳು ಹೆಚ್ಚಾಗತೊಡಗಿವೆ. ಇದಕ್ಕೆ ಸ್ಪಷ್ಟ ಉದಾಹರಣೆ ಇತ್ತೀಚೆಗೆ ಮೈಸೂರಿನ ಮಾನಸಗಂಗೋತ್ರಿಯ ಆವರಣದಲ್ಲಿ ನಡೆದ ಇಡಿ ನಿವೃತ್ತ ಅಧಿಕಾರಿ ಆರ್.ಎಸ್.ಕುಲಕರ್ಣಿಯವರ ಕೊಲೆ ಪ್ರಕರಣ. ಕೇವಲ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಅವರನ್ನು ಕೊಲ್ಲುವ ಮಟ್ಟಕ್ಕೆ ದುಷ್ಕರ್ಮಿಗಳು ಮುಂದಾಗಿದ್ದದ್ದು, ಮೈಸೂರಿನಲ್ಲಿ ಭಯದ ವಾತಾವರಣವನ್ನೇ ನಿರ್ಮಿಸಿದೆ. ಇದೀಗ ಕೇವಲ ಬೇಕಾಬಿಟ್ಟಿ ಕಾರುಚಾಲನೆ ಮಾಡದಂತೆ ಬುದ್ದಿವಾದ ಹೇಳಿದ್ದಕ್ಕೆ ೨೪ರ ಹರಯದ ಯುವಕನೊಬ್ಬ ತನ್ನ ತಂದೆ ತಾಯಿ ಜೊತೆಯಲ್ಲಿದ್ದರೂ, ಮೂವರು ಯುವಕರ ಮೇಲೆ ಕಾರು ಹತ್ತಿಸಿ ಅಟ್ಟಹಾಸ ಮೆರೆದಿರುವುದು ಜನರು ನೆಮ್ಮದಿಯಾಗಿ ಓಡಾಡುವುದೂ ಕಷ್ಟ ಎಂಬಂತಾಗಿದೆ.

ಮೈಸೂರು ವ್ಯಾಪ್ತಿಯಲ್ಲಿ ಈ ಮಾದರಿಯ ಪ್ರಕರಣಗಳು ಹೊಸದೇನಲ್ಲ. ಗ್ರಾಮಾಂತರ ಭಾಗಗಳಲ್ಲಿಯೂ ಆಗಾಗ ಕೊಲೆ, ಗಲಾಟೆಗಳು, ಮಾರಣಾಂತಿಕ ಹಲ್ಲೆಗಳು ಹೆಚ್ಚಾಗಿವೆ. ೨೦೨೧ರಲ್ಲಿಯೂ ಬೋಗಾದಿಯ ಸಮೀಪ ಕ್ಷುಲಕ್ಷ ಕಾರಣಕ್ಕೆ ಕುಡಿದ ಅಮಲಿನಲ್ಲಿ ಜೋಡಿ ಕೊಲೆ ನಡೆದ ಪ್ರಕರಣ, ಅಲ್ಲದೇ ಚಾಮುಂಡಿಬೆಟ್ಟದ ತಪ್ಪಲಿನಲ್ಲಿಯೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಈ ಸಂದರ್ಭದಲ್ಲಿಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಆದರೆ, ಇಂತಹ ಅಪರಾಧ ಕೃತ್ಯಗಳನ್ನು ತಡೆಯಲು ದೂರದೃಷ್ಟಿಯ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಳ್ಳುವ ಅಗತ್ಯ ಇದೆ.

ಮೈಸೂರಿನ ವಿವಿಧೆಡೆ ರಾತ್ರಿ ವೇಳೆ ತೆರೆದಿರುವ ಅಂಗಡಿ ಮುಂಗಟ್ಟುಗಳ ಮುಂದೆ ಯುವಕರು ಹೆಚ್ಚಾಗಿ ಸೇರುತ್ತಿರುತ್ತಾರೆ. ಜೊತೆಗೆ ಅಲ್ಲಿ ಮದ್ಯವ್ಯಸನಿಗಳು ಬರುವುದರಿಂದ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳಾಗಿ ಅದು ಕೊಲೆಯ ಹಂತಕ್ಕೆ ತಲುಪುವ ಸಾಧ್ಯತೆಗಳೂ ಇರುತ್ತವೆ. ಅಂತಹ ಅಡ್ಡೆಗಳ ಮೇಲೆ ಪೊಲೀಸರು ಕಣ್ಣಿಡುವುದು ಅಗತ್ಯ. ಹೆಚ್ಚಿನ ಸಿಬ್ಬಂದಿಗಳನ್ನು ಅಂತಹ ಸ್ಥಳದ ಕಡೆ ನಿಯೋಜನೆ ಮಾಡಬೇಕು. ಅಪರಾಧ ಪ್ರಕರಣಗಳು ಸುಳಿವು ಪಡೆಯುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾತ್ಮಿದಾರರನ್ನು ಪೊಲೀಸರು ಗುರುತಿಸಿಕೊಳ್ಳುವುದು ಸೂಕ್ತ. ಒಟ್ಟಾರೆ ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ಪೊಲೀಸರು ಕಟ್ಟೆಚ್ಚರವಹಿಸಬೇಕು. ಅದಕ್ಕೆ ಸಾಧ್ಯವಾದಷ್ಟು ನಾಗರಿಕರೂ ಕೈಜೋಡಿಸಬೇಕು. ತಮ್ಮಕಣ್ಣೆದುರು ನಡೆಯುವು ಅನಾಹುತ, ಅಪಘಾತಗಳ ಬಗ್ಗೆ ಪೊಲೀಸರ ಗಮನಕ್ಕೆ ತರಬೇಕು.

ಮೈಸೂರಿನ ಸಂಸ್ಕೃತಿ, ಪರಂಪರೆಗೆ ಮಸಿ ಬಳಿಯುವಂತಹ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಮತ್ತಷ್ಟು ಬಿಗಿಯಾಗಬೇಕಿದೆ. ನಗರ ಪ್ರದೇಶ ವ್ಯಾಪ್ತಿಯಲ್ಲಿ ಮತ್ತಷ್ಟು ಹೆಚ್ಚಿನ ಪ್ರಮಾಣದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಪ್ರತಿಭಾಗದ ಚಲನವಲನದ ಮೇಲೆ ಇಲಾಖೆಯು ನಿಗಾ ವಹಿಸಬೇಕಿದೆ. ಇದರೊಂದಿಗೆ ನಿರ್ಜನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳ ನಿಯೋಜನೆಯ ಜೊತೆಗೆ ಗಸ್ತು ಸುತ್ತುಗಳನ್ನು ಹೆಚ್ಚಿಸಬೇಕಾಗಿದೆ.

andolana

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago