ಮಹಾಪುರುಷರ ಪ್ರತಿಮೆ ಅನಾವರಣಕ್ಕೆ ಯಾರೂ ಅಡ್ಡಬರುವುದಿಲ್ಲ. ಆದರೆ ಓಟಿನ ರಾಜಕಾರಣವನ್ನು ಆಧರಿಸಿದ ಪ್ರತಿಮೆ ಆನಾವರಣ ನಿರೀಕ್ಷಿತ ಫಲ ನೀಡುವುದಿಲ್ಲ!
ಡಾ.ಬಿ.ಪಿ.ಮಹೇಶ ಚಂದ್ರ ಗುರು
ಸ್ಮಾರ್ಟ್ ಸಿಟಿಗಿಂತ ಸ್ಮಾರ್ಟ್ ಪ್ರಜೆಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯವಶ್ಯಕ. ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳ ಅಭಿವೃದ್ಧಿಯಿಂದಲೇ ಭಾರತೀಯರ ಬದುಕು ಹಸನಾಗುತ್ತದೆಂಬ ಸತ್ಯದರ್ಶನ ನಮ್ಮನ್ನು ಆಳುವವರಿಗೆ ಶೀಘ್ರದಲ್ಲೇ ಆಗಬೇಕು. ಬಹುಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ, ಕನಿಷ್ಟ ಅಗತ್ಯತೆಗಳ ಪೂರೈಕೆ ಮತ್ತು ದುರ್ಬಲ ವರ್ಗಗಳ ಒಳಗೊಳ್ಳುವ ಅಭಿವೃದ್ಧಿಯಿಂದ ಮಾತ್ರ ರಾಮರಾಜ್ಯ ನಿರ್ಮಿಸಬಹುದೇ ಹೊರತು ರಾಮಮಂದಿರ ನಿರ್ಮಾಣದಿಂದಲ್ಲ ಎಂಬ ಸತ್ಯವನ್ನು ಇಂದು ನಮ್ಮನ್ನಾಳುತ್ತಿರುವ ರ್ಆಎಸ್ಎಸ್ ಪ್ರಾಯೋಜಿತ ಸರ್ಕಾರಿ ಬಾಂಧವರು ಮನಗಾಣಬೇಕು.
ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ನಿರ್ಮಿಸಿರುವ ೧೦೮ಅಡಿ ಎತ್ತರದ ೬೪ ಕೋಟಿ ರೂ. ಮೌಲ್ಯದ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ಪ್ರತಿಮೆ ಅನಾವರಣ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುಸಜ್ಜಿತ ೨ನೇ ಟರ್ಮಿನಲ್ ಲೋಕಾರ್ಪಣೆ, ಮೈಸೂರು – ಬೆಂಗಳೂರು – ಚೆನ್ನೈ ನಡುವಿನ ವಂದೇಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ಮತ್ತು ಭಾರತ್ ಗೌರವ್ ದರ್ಶನ ರೈಲಿನ ಉದ್ಘಾಟನೆ ಸೇರಿದಂತೆ ಕೆಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಡಿನ ಜನರ ಗಮನ ಸೆಳೆದರು.
ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಬಹಳ ಹಿಂದೆಯೇ ಮುನ್ನುಡಿ ಬರೆದ ಅಪೂರ್ವ ಆಡಳಿತಗಾರ ಮತ್ತು ಅಭಿವೃದ್ಧಿಶಿಲ್ಪಿ ಎಂಬುದು ಹೆಮ್ಮೆಯ ಸಂಗತಿ. ಮೋದಿಯವರು ಪ್ರಗತಿ ಪ್ರತಿಮೆಯನ್ನು ಅನಾವರಣಗೊಳಿಸುವುದರ ಹಿಂದೆ ಇರುವ ರಾಜಕೀಯ ಲೆಕ್ಕಾಚಾರಗಳನ್ನು ನಾಡಿನ ಜನತೆ ಅರಿಯಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಒಕ್ಕಲಿಗರ ಮತದ ಮೇಲೆ ಕಣ್ಣಿಟ್ಟು ಈ ಕಾರ್ಯಕ್ರಮ ಆಯೋಜಿಸಿದ್ದಲ್ಲಿ ಮೋದಿಯವರಿಗೆ ಹೆಚ್ಚಿನ ಭ್ರಮನಿರಸನ ಉಂಟಾಗುವುದರಲ್ಲಿ ಆಶ್ಚರ್ಯವಿಲ್ಲ.
ಬಹುತೇಕ ಒಕ್ಕಲಿಗರು ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಬೆಂಬಲ ನೀಡುವುದು ಖಚಿತ. ಇನ್ನೊಂದೆಡೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯೆಂದು ಘೋಷಿಸಿ ಒಕ್ಕಲಿಗರ ಮತ ಸೆಳೆಯುವಲ್ಲಿ ಭಾರತೀಯ ಜನತಾಪಕ್ಷ ಖಂಡಿತ ಯಶಸ್ಸು ಗಳಿಸುವುದಿಲ್ಲ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯಾನಂದರನ್ನು ಮುಖ್ಯಮಂತ್ರಿ ಮಾಡಿದಂತೆ ಕರ್ನಾಟಕದ ರಾಜಕಾರಣವನ್ನು ಧರ್ಮ ಕಾರಣವನ್ನಾಗಿ ಪರಿವರ್ತಿಸುವುದಕ್ಕೆ ಬುದ್ಧ, ಬಸವ, ಅಂಬೇಡ್ಕರ್, ದೇವರಾಜ ಅರಸ್, ರಾಮಕೃಷ್ಣ ಹೆಗ್ಗಡೆ, ಕುವೆಂಪು ಮೊದಲಾದ ದಾರ್ಶನಿಕರು ಮತ್ತು ಬೆಂಬಲಿಗರು ಅವಕಾಶ ನೀಡುವುದಿಲ್ಲ.
ಮಹಾಪುರುಷರ ಪ್ರತಿಮೆ ಅನಾವರಣಕ್ಕೆ ಯಾರೂ ಅಡ್ಡಬರುವುದಿಲ್ಲ. ಆದರೆ ಓಟಿನ ರಾಜಕಾರಣವನ್ನು ಆಧರಿಸಿದ ಪ್ರತಿಮೆ ಆನಾವರಣ ನಿರೀಕ್ಷಿತ ಫಲ ನೀಡುವುದಿಲ್ಲ. ಬಡತನ ಮುಕ್ತ ಭಾರತ, ನಿರುದ್ಯೋಗ ಮುಕ್ತ ಭಾರತ, ಹಸಿವು ಮುಕ್ತ ಭಾರತ, ಅನಾರೋಗ್ಯ ಮುಕ್ತ ಭಾರತ, ಹಿಂದುತ್ವ ಮುಕ್ತ ಭಾರತ, ಶೋಷಣಾ ಮುಕ್ತ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿಜಿಯವರ ಕೊಡುಗೆ ನಗಣ್ಯವೆಂದೇ ಹೇಳಬಹುದು. ಮೋದಿ ಸರ್ಕಾರದ ಬಹಳಷ್ಟು ಅಭಿವೃದ್ಧಿ ಯೋಜನೆಗಳು ಬಡವರ ಕಣ್ಣೀರು ಒರೆಸುವಲ್ಲಿ ವಿಫಲವಾಗಿವೆ.
ಸುಳ್ಳು ಭರವಸೆಗಳ ಮೂಲಕ ದೇಶ ಬಾಂಧವರನ್ನು ದಾರಿತಪ್ಪಿಸುವುದನ್ನು ಮೋದಿಜಿ ನಿರಂತರವಾಗಿ ಮುಂದುವರೆಸಲು ಸಾಧ್ಯವಿಲ್ಲ.
ಶ್ರೀಮಂತರ ಅಭಿವೃದ್ಧಿ ಮತ್ತು ಶ್ರೀಮಂತರ ಸಹವಾಸದಿಂದ ಮೋದಿಜಿ ಪ್ರಬುದ್ಧ ಭಾರತ ನಿರ್ಮಿಸುವುದು ಮತ್ತು ವಿಶ್ವಗುರುವಾಗುವುದು ಸಾಧ್ಯವಿಲ್ಲ. ಇಂದು ಭಾರತದ ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ಮಹಿಳೆಯರು ಮೊದಲಾದ ಅಂಚಿಗೆ ನೂಕಲ್ಪಟ್ಟ ಜನವರ್ಗಗಳನ್ನು ಅಪ್ಪಿಕೊಳ್ಳುವ, ಒಪ್ಪಿಕೊಳ್ಳುವ ಮತ್ತು ಅಭಿವೃದ್ಧಿಪಥದಲ್ಲಿ ಸಾಂವಿಧಾನಿಕ ಆಶಯಗಳಿಗೆ ಅನುಗುಣವಾಗಿ ಮುನ್ನಡೆಸುವ ಉದಾತ್ತ ಗುಣ ಮತ್ತು ಸಾಮಥ್ರ್ಯಗಳನ್ನು ನರೇಂದ್ರಮೋದಿಯವರು ಬೆಳೆಸಿಕೊಳ್ಳಬೇಕು.
ಸ್ಮಾರ್ಟ್ ಸಿಟಿಗಿಂತ ಸ್ಮಾರ್ಟ್ ಪ್ರಜೆಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯವಶ್ಯಕ. ಕೃಷಿ ಮತ್ತು ಗ್ರಾಮೀಣ ಕ್ಷೇತ್ರಗಳ ಅಭಿವೃದ್ಧಿಯಿಂದಲೇ ಭಾರತೀಯರ ಬದುಕು ಹಸನಾಗುತ್ತದೆಂಬ ಸತ್ಯದರ್ಶನ ನಮ್ಮನ್ನು ಆಳುವವರಿಗೆ ಶೀಘ್ರದಲ್ಲೇ ಆಗಬೇಕು. ಬಹುಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ, ಕನಿಷ್ಟ ಅಗತ್ಯತೆಗಳ ಪೂರೈಕೆ ಮತ್ತು ದುರ್ಬಲ ವರ್ಗಗಳ ಒಳಗೊಳ್ಳುವ ಅಭಿವೃದ್ಧಿಯಿಂದ ಮಾತ್ರ ರಾಮರಾಜ್ಯ ನಿರ್ಮಿಸಬಹುದೇ ಹೊರತು ರಾಮಮಂದಿರ ನಿರ್ಮಾಣದಿಂದಲ್ಲ ಎಂಬ ಸತ್ಯವನ್ನು ಇಂದು ನಮ್ಮನ್ನಾಳುತ್ತಿರುವ ರ್ಆಎಸ್ಎಸ್ ಪ್ರಾಯೋಜಿತ ಸರ್ಕಾರಿ ಬಾಂಧವರು ಮನಗಾಣಬೇಕು. ಹಿಂದುತ್ವದಿಂದ ಭಾರತದ ಉದ್ಧಾರ ಸಾಧ್ಯವಿಲ್ಲ. ಬಹುತ್ವ, ಧರ್ಮ ನಿರಪೇಕ್ಷತೆ, ಸಾಮಾಜಿಕ ಪ್ರಜಾಸತ್ತೆ, ಆರ್ಥಿಕ ಸಮಾನತೆ, ಸುಸ್ಥಿರ ಅಭಿವೃದ್ಧಿ ಮೊದಲಾದವುಗಳಿಂದ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಪ್ರಗತಿಶೀಲ ರಾಜ್ಯಧರ್ಮ ಅನಾವರಣ ಪ್ರಧಾನಿಯ ಪರಮ ಕರ್ತವ್ಯ ಎಂಬುದನ್ನು ಪ್ರಜ್ಞಾವಂತ ಪ್ರಜೆಗಳು ಮನವರಿಕೆ ಮಾಡಿಕೊಡಬೇಕು.
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…