ಎಡಿಟೋರಿಯಲ್

ಕೆಪಿಎಸ್‌ಸಿ: ಉದ್ಯೋಗಾಕಾಂಕ್ಷಿಗಳ ವಿಶ್ವಾಸಾರ್ಹತೆಗೆ ಧಕ್ಕೆ

ಆಯೋಗಕ್ಕೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು

ಜಿ. ಎಂ. ಪ್ರಸಾದ್
ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗವು ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ೨೦೨೪ರ ಫೆಬ್ರವರಿ ಯಲ್ಲಿ ಅಽಸೂಚನೆ ಹೊರಡಿಸಿ, ಆಗಸ್ಟ್ ೨೯ರಂದು ಪೂರ್ವಭಾವಿ ಪರೀಕ್ಷೆ ಯನ್ನು ಆಯೋಜಿಸಿತ್ತು. ಅಂದು ನಡೆದ ಪರೀಕ್ಷೆಯಲ್ಲಿ ಕೇಳ ಲಾದ ಪ್ರಶ್ನೆಗಳ ಭಾಷಾಂತರದಲ್ಲಿ ಸಾಕಷ್ಟು ಗೊಂದಲ ಉಂಟಾದ ಪರಿಣಾಮವಾಗಿ ಪರೀಕ್ಷೆಯನ್ನು ರದ್ದುಪಡಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುನಃ ಪರೀಕ್ಷೆ ನಡೆಸಲು ಸೂಚಿಸಿದ್ದರ ಮೇರೆಗೆ ಕೆಪಿಎಸ್‌ಸಿ ಕಳೆದ ಡಿಸೆಂಬರ್ ೨೯ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಿತು. ಈ ಪರೀಕ್ಷೆಯಲ್ಲಿಯೂ ೪-೫ ಪ್ರಶ್ನೆಗಳಲ್ಲಿ ಗೊಂದಲಗಳಿದ್ದ ಪರಿಣಾಮ ಕೆಪಿಎಸ್‌ಸಿ ನಡವಳಿಕೆ ಬಗ್ಗೆ ಸಾರ್ವಜನಿಕರಲ್ಲಿ ವಿಶೇಷವಾಗಿ ಅಭ್ಯರ್ಥಿಗಳಲ್ಲಿ ಅನುಮಾನ ಮೂಡುವುದು ಸಹಜ.

ಕಳೆದ ವರ್ಷ ಲೋಕಸೇವಾ ಆಯೋಗದ ಕಾನೂನು ಕೋಶದ ಮುಖ್ಯಸ್ಥರ ನೇಮಕದ ಸಂದರ್ಭದಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯ ದರ್ಶಿಗಳ ನಡುವೆ ಶೀತಲ ಸಮರ ಏರ್ಪಟ್ಟಿದ್ದನ್ನು ಜನರು ಗಮನಿಸಿದ್ದಾರೆ. ಹೀಗೆ ಸದಾ ಒಂದಿಲ್ಲೊಂದು ಕಾರಣ ದಿಂದ ಆಯೋಗವು ಅನಗತ್ಯವಾದ ಸುದ್ದಿಯಲ್ಲಿದೆ. ಇದರಿಂದ ಸರ್ಕಾರಿ ಹುದ್ದೆಪಡೆಯಬೇಕೆಂಬ ಅಸಂಖ್ಯಾತ ಉದ್ಯೋಗಕಾಂಕ್ಷಿಗಳಿಗೆ ಭ್ರಮನಿರಸನವಾಗಿದೆ. ಕಾರಣ ಗಳೇನೇ ಇರಲಿ, ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬವಾಗುತ್ತಿದೆ. ಇತ್ತ ಕರ್ನಾಟಕ ಪರೀಕ್ಷಾ ಪ್ರಾಽ ಕಾರವೂ (ಕೆಇಎ) ಒಂದು ನೇಮಕಾತಿ ಸಂಸ್ಥೆಯಾಗಿದ್ದು, ೨೦೨೪ರಲ್ಲಿ ಎರಡು ಪಿಎಸ್‌ಐ ಪರೀಕ್ಷೆ, ವಿವಿಧ ನಿಗಮ- ಮಂಡಳಿಗಳಲ್ಲಿ ಹುದ್ದೆಗಳ ನೇಮಕಾತಿ ಪರೀಕ್ಷೆ, ಗ್ರಾಮ ಆಡಳಿತಾಽಕಾರಿಗಳ ನೇಮಕಾತಿ ಪರೀಕ್ಷೆ, ಕೆ-ಸೆಟ್ ಪರೀಕ್ಷೆ ಸೇರಿದಂತೆ ೧೭ ನೇಮಕಾತಿ ಪ್ರಕ್ರಿಯೆಗಳನ್ನು ಯಾವುದೇ ದುರಾಚಾರಗಳಿಲ್ಲದೆ, ಪ್ರಾಮಾಣಿಕವಾಗಿ ನಿರ್ವಹಿಸಿದೆ. ಆದರೆ ಸಾಂವಿಧಾನಿಕ ಸಂಸ್ಥೆಯಾದ ಕೆಪಿಎಸ್‌ಸಿಗೆ ಏಕೆ ಇದು ಸಾಧ್ಯವಾಗುತ್ತಿಲ್ಲ?

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಣಕಾಸು ಇಲಾಖೆಯ ಒಪ್ಪಿಗೆ ಪಡೆದು, ಭರ್ತಿ ಮಾಡುವುದು ನಿಯಮಾವಳಿಯಾಗಿದೆ. ಸಾಮಾನ್ಯವಾಗಿ ಈ ಕೆಲಸವನ್ನು ಆಯೋಗವು ಮಾಡುತ್ತದೆ. ರಾಷ್ಟ್ರ ಮಟ್ಟದಲ್ಲಿ ಕೇಂದ್ರ ಲೋಕ ಸೇವಾ ಆಯೋಗವು ಕಾರ್ಯ ನಿರ್ವಹಿಸುವ ರೀತಿಯಲ್ಲಿ, ರಾಜ್ಯಗಳಲ್ಲಿ ರಾಜ್ಯ ಲೋಕ ಸೇವಾ ಆಯೋಗ ಕೆಲಸ ಮಾಡುತ್ತದೆ. ಇವು ಸಾಂವಿಧಾ ನಿಕ ಸಂಸ್ಥೆಗಳಾಗಿದ್ದು, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತವೆ. ಅಖಿಲ ಭಾರತ ಮಟ್ಟದ ನಾಗರಿಕ ಸೇವೆಗಳಾದ ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಇನ್ನಿತರ ಸೇವೆಗಳಿಗೆ ಯುಪಿಎಸ್‌ಸಿ ಪ್ರತಿವರ್ಷವೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಮಾಡುತ್ತದೆ. ಪಾರದರ್ಶಕತೆ ಮತ್ತು ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ಮುಕ್ತಾಯಗೊಳಿಸುವುದು ಮತ್ತಿತರ ವಿಷಯಗಳಲ್ಲಿ ಇಂದಿಗೂ ಯುಪಿಎಸ್‌ಸಿ ಕಾರ್ಯದಕ್ಷತೆಯನ್ನು ಮೆರೆದಿದೆ. ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ ಸುಮಾರು ಒಂದು ವರ್ಷದೊಳಗೆ ಇಡೀ ಪ್ರಕ್ರಿಯೆ ಸುಸೂತ್ರವಾಗಿ ಮುಗಿದುಬಿಡುತ್ತದೆ. ಯುಪಿಎಸ್‌ಸಿ ಇದುವರೆಗೂ ಒಂದೇ ಒಂದು ಪ್ರಮಾದವನ್ನೂ ಮಾಡಿಲ್ಲವೆನ್ನುವುದು ಗಮನಾರ್ಹ.

ಯುಪಿಎಸ್‌ಸಿ ಕಾರ್ಯನಿರ್ವಹಣೆಗೆ ಹೋಲಿಸಿದರೆ, ಕೆಪಿಎಸ್‌ಸಿ ಕಾರ್ಯನಿರ್ವಹಣೆ ಅತ್ಯಂತ ಕಳಪೆಯಾಗಿದೆ. ಅದರ ಕರ್ಮಕಾಂಡ ಹೇಳತೀರದು. ಎಲ್ಲರಿಗೂ ಗೊತ್ತಿರುವ ಹಾಗೆ ರಾಜ್ಯದಲ್ಲಿ ಈ ಹಿಂದೆ ಕೆಪಿಎಸ್‌ಸಿ ನಡೆಸಿದ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ. ಇಂದಿಗೂ ಕೆಪಿಎಸ್‌ಸಿ ನಡೆಸುವ ನೇಮಕಾತಿ ಪರೀಕ್ಷೆಗಳು ಅಽಸೂಚನೆ ಪ್ರಕಟಗೊಂಡ ದಿನದಿಂದ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗುವವರೆಗೆ ಹಲವಾರು ವರ್ಷಗಳೇ ಕಳೆದುಹೋಗಿರುತ್ತದೆ. ಈ ವಿಳಂಬದಿಂದ ಸಹಸ್ರಾರು ಅಭ್ಯರ್ಥಿಗಳು ಅನುಭವಿಸುವ ಪಾಡು ಹೇಳತೀರದು. ಪಾರದರ್ಶಕವಾಗಿ, ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ಮುಗಿಸುವ ಸಂಸ್ಥೆಯಾಗಿ ಈಗಿರುವ ಕೆಪಿಎಸ್‌ಸಿ ರೂಪುಗೊಳ್ಳಲು ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಸರ್ಕಾರ ಕ್ಷಿಪ್ರವಾಗಿ ಕ್ರಮಕೈಗೊಳ್ಳಬೇಕು.

ಯುವಪೀಳಿಗೆ ಸರ್ಕಾರಿ ಹುದ್ದೆ ಪಡೆಯುವ ಸಲುವಾಗಿ, ಪರೀಕ್ಷೆ ಪಾಸು ಮಾಡಬೇಕೆಂದು ತಯಾರಿ ನಡೆಸುತ್ತಿರುತ್ತಾರೆ. ಈ ಪ್ರಕ್ರಿಯೆಗೆ ಸಾಕಷ್ಟು ಹಣ ಮತ್ತು ಸಂಪನ್ಮೂಲವನ್ನು ವಿನಿಯೋಗಿಸಿರುತ್ತಾರೆ. ಪರೀಕ್ಷೆಯ ಗೊಂದಲಗಳಿಂದಾಗಿ ಅವರ ಅಭ್ಯಾಸ ಮತ್ತು ಭವಿಷ್ಯ ಹಳಿ ತಪ್ಪುವ ಅಪಾಯವೂ ಇರುತ್ತದೆ. ಹೀಗಾಗಿ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿರುವುದು ಇಂದಿನ ತುರ್ತು ಅಗತ್ಯ.

ಸರ್ಕಾರದ ಕೆಲಸ ಕಾರ್ಯಗಳು ಸುಗಮವಾಗಿ ಸಾಗಬೇಕೆಂದರೆ ಸಾಕಷ್ಟು ಮಾನವ ಸಂಪನ್ಮೂಲ ಅಗತ್ಯ. ಹುದ್ದೆಗಳನ್ನು ಭರ್ತಿ ಮಾಡದೆ ಖಾಲಿ ಉಳಿಸಿಕೊಂಡರೆ, ಇರುವ ಅಧಿಕಾರಿ, ನೌಕರರುಗಳ ಮೇಲೆ ಒತ್ತಡ ಹೆಚ್ಚಾಗಿ, ಅವರ ವೈಯಕ್ತಿಕ ಜೀವನ ಮತ್ತು ಕಚೇರಿ ಕೆಲಸ – ಎರಡರ ಮೇಲೂ ಕೆಟ್ಟ ಪರಿಣಾಮಗಳು ಉಂಟಾಗುತ್ತವೆ. ಅತಿಯಾದ ಕೆಲಸದೊತ್ತಡದಿಂದ ಆತ್ಮಹತ್ಯೆ ಮಾಡಿಕೊಂಡವರ ಸುದ್ದಿಗಳೂ ನಮ್ಮ ಮುಂದಿವೆ. ಹೀಗಾಗಿ ಖಾಲಿ ಇರುವ ಎಲ್ಲ ಹುದ್ದೆಗಳನ್ನೂ ಭರ್ತಿ ಮಾಡಬೇಕು; ಸರ್ಕಾರಿ ಆಡಳಿತಯಂತ್ರ ಸುಗಮವಾಗಿ ಸಾಗಬೇಕು. ಇದಕ್ಕೆ ಪೂರಕವಾಗಿ ಕೆಪಿಎಸ್‌ಸಿಗೆ ಕಾಯಕಲ್ಪ ನೀಡುವ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕು. ಆ ಮೂಲಕ ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವ ಯುವಸಮೂಹದಲ್ಲಿ ಕೆಪಿಎಸ್‌ಸಿ ಬಗ್ಗೆ ವಿಶ್ವಾಸಾರ್ಹತೆ ಮೂಡಿಸಬೇಕಾಗಿದೆ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

48 mins ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

58 mins ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

1 hour ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

2 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

2 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

2 hours ago