ಎಡಿಟೋರಿಯಲ್

ಕೆಪಿಎಸ್‌ಸಿ: ಉದ್ಯೋಗಾಕಾಂಕ್ಷಿಗಳ ವಿಶ್ವಾಸಾರ್ಹತೆಗೆ ಧಕ್ಕೆ

ಆಯೋಗಕ್ಕೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು

ಜಿ. ಎಂ. ಪ್ರಸಾದ್
ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗವು ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ೨೦೨೪ರ ಫೆಬ್ರವರಿ ಯಲ್ಲಿ ಅಽಸೂಚನೆ ಹೊರಡಿಸಿ, ಆಗಸ್ಟ್ ೨೯ರಂದು ಪೂರ್ವಭಾವಿ ಪರೀಕ್ಷೆ ಯನ್ನು ಆಯೋಜಿಸಿತ್ತು. ಅಂದು ನಡೆದ ಪರೀಕ್ಷೆಯಲ್ಲಿ ಕೇಳ ಲಾದ ಪ್ರಶ್ನೆಗಳ ಭಾಷಾಂತರದಲ್ಲಿ ಸಾಕಷ್ಟು ಗೊಂದಲ ಉಂಟಾದ ಪರಿಣಾಮವಾಗಿ ಪರೀಕ್ಷೆಯನ್ನು ರದ್ದುಪಡಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುನಃ ಪರೀಕ್ಷೆ ನಡೆಸಲು ಸೂಚಿಸಿದ್ದರ ಮೇರೆಗೆ ಕೆಪಿಎಸ್‌ಸಿ ಕಳೆದ ಡಿಸೆಂಬರ್ ೨೯ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಿತು. ಈ ಪರೀಕ್ಷೆಯಲ್ಲಿಯೂ ೪-೫ ಪ್ರಶ್ನೆಗಳಲ್ಲಿ ಗೊಂದಲಗಳಿದ್ದ ಪರಿಣಾಮ ಕೆಪಿಎಸ್‌ಸಿ ನಡವಳಿಕೆ ಬಗ್ಗೆ ಸಾರ್ವಜನಿಕರಲ್ಲಿ ವಿಶೇಷವಾಗಿ ಅಭ್ಯರ್ಥಿಗಳಲ್ಲಿ ಅನುಮಾನ ಮೂಡುವುದು ಸಹಜ.

ಕಳೆದ ವರ್ಷ ಲೋಕಸೇವಾ ಆಯೋಗದ ಕಾನೂನು ಕೋಶದ ಮುಖ್ಯಸ್ಥರ ನೇಮಕದ ಸಂದರ್ಭದಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯ ದರ್ಶಿಗಳ ನಡುವೆ ಶೀತಲ ಸಮರ ಏರ್ಪಟ್ಟಿದ್ದನ್ನು ಜನರು ಗಮನಿಸಿದ್ದಾರೆ. ಹೀಗೆ ಸದಾ ಒಂದಿಲ್ಲೊಂದು ಕಾರಣ ದಿಂದ ಆಯೋಗವು ಅನಗತ್ಯವಾದ ಸುದ್ದಿಯಲ್ಲಿದೆ. ಇದರಿಂದ ಸರ್ಕಾರಿ ಹುದ್ದೆಪಡೆಯಬೇಕೆಂಬ ಅಸಂಖ್ಯಾತ ಉದ್ಯೋಗಕಾಂಕ್ಷಿಗಳಿಗೆ ಭ್ರಮನಿರಸನವಾಗಿದೆ. ಕಾರಣ ಗಳೇನೇ ಇರಲಿ, ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬವಾಗುತ್ತಿದೆ. ಇತ್ತ ಕರ್ನಾಟಕ ಪರೀಕ್ಷಾ ಪ್ರಾಽ ಕಾರವೂ (ಕೆಇಎ) ಒಂದು ನೇಮಕಾತಿ ಸಂಸ್ಥೆಯಾಗಿದ್ದು, ೨೦೨೪ರಲ್ಲಿ ಎರಡು ಪಿಎಸ್‌ಐ ಪರೀಕ್ಷೆ, ವಿವಿಧ ನಿಗಮ- ಮಂಡಳಿಗಳಲ್ಲಿ ಹುದ್ದೆಗಳ ನೇಮಕಾತಿ ಪರೀಕ್ಷೆ, ಗ್ರಾಮ ಆಡಳಿತಾಽಕಾರಿಗಳ ನೇಮಕಾತಿ ಪರೀಕ್ಷೆ, ಕೆ-ಸೆಟ್ ಪರೀಕ್ಷೆ ಸೇರಿದಂತೆ ೧೭ ನೇಮಕಾತಿ ಪ್ರಕ್ರಿಯೆಗಳನ್ನು ಯಾವುದೇ ದುರಾಚಾರಗಳಿಲ್ಲದೆ, ಪ್ರಾಮಾಣಿಕವಾಗಿ ನಿರ್ವಹಿಸಿದೆ. ಆದರೆ ಸಾಂವಿಧಾನಿಕ ಸಂಸ್ಥೆಯಾದ ಕೆಪಿಎಸ್‌ಸಿಗೆ ಏಕೆ ಇದು ಸಾಧ್ಯವಾಗುತ್ತಿಲ್ಲ?

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಣಕಾಸು ಇಲಾಖೆಯ ಒಪ್ಪಿಗೆ ಪಡೆದು, ಭರ್ತಿ ಮಾಡುವುದು ನಿಯಮಾವಳಿಯಾಗಿದೆ. ಸಾಮಾನ್ಯವಾಗಿ ಈ ಕೆಲಸವನ್ನು ಆಯೋಗವು ಮಾಡುತ್ತದೆ. ರಾಷ್ಟ್ರ ಮಟ್ಟದಲ್ಲಿ ಕೇಂದ್ರ ಲೋಕ ಸೇವಾ ಆಯೋಗವು ಕಾರ್ಯ ನಿರ್ವಹಿಸುವ ರೀತಿಯಲ್ಲಿ, ರಾಜ್ಯಗಳಲ್ಲಿ ರಾಜ್ಯ ಲೋಕ ಸೇವಾ ಆಯೋಗ ಕೆಲಸ ಮಾಡುತ್ತದೆ. ಇವು ಸಾಂವಿಧಾ ನಿಕ ಸಂಸ್ಥೆಗಳಾಗಿದ್ದು, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತವೆ. ಅಖಿಲ ಭಾರತ ಮಟ್ಟದ ನಾಗರಿಕ ಸೇವೆಗಳಾದ ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಇನ್ನಿತರ ಸೇವೆಗಳಿಗೆ ಯುಪಿಎಸ್‌ಸಿ ಪ್ರತಿವರ್ಷವೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಮಾಡುತ್ತದೆ. ಪಾರದರ್ಶಕತೆ ಮತ್ತು ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ಮುಕ್ತಾಯಗೊಳಿಸುವುದು ಮತ್ತಿತರ ವಿಷಯಗಳಲ್ಲಿ ಇಂದಿಗೂ ಯುಪಿಎಸ್‌ಸಿ ಕಾರ್ಯದಕ್ಷತೆಯನ್ನು ಮೆರೆದಿದೆ. ನೇಮಕಾತಿ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ ಸುಮಾರು ಒಂದು ವರ್ಷದೊಳಗೆ ಇಡೀ ಪ್ರಕ್ರಿಯೆ ಸುಸೂತ್ರವಾಗಿ ಮುಗಿದುಬಿಡುತ್ತದೆ. ಯುಪಿಎಸ್‌ಸಿ ಇದುವರೆಗೂ ಒಂದೇ ಒಂದು ಪ್ರಮಾದವನ್ನೂ ಮಾಡಿಲ್ಲವೆನ್ನುವುದು ಗಮನಾರ್ಹ.

ಯುಪಿಎಸ್‌ಸಿ ಕಾರ್ಯನಿರ್ವಹಣೆಗೆ ಹೋಲಿಸಿದರೆ, ಕೆಪಿಎಸ್‌ಸಿ ಕಾರ್ಯನಿರ್ವಹಣೆ ಅತ್ಯಂತ ಕಳಪೆಯಾಗಿದೆ. ಅದರ ಕರ್ಮಕಾಂಡ ಹೇಳತೀರದು. ಎಲ್ಲರಿಗೂ ಗೊತ್ತಿರುವ ಹಾಗೆ ರಾಜ್ಯದಲ್ಲಿ ಈ ಹಿಂದೆ ಕೆಪಿಎಸ್‌ಸಿ ನಡೆಸಿದ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ. ಇಂದಿಗೂ ಕೆಪಿಎಸ್‌ಸಿ ನಡೆಸುವ ನೇಮಕಾತಿ ಪರೀಕ್ಷೆಗಳು ಅಽಸೂಚನೆ ಪ್ರಕಟಗೊಂಡ ದಿನದಿಂದ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗುವವರೆಗೆ ಹಲವಾರು ವರ್ಷಗಳೇ ಕಳೆದುಹೋಗಿರುತ್ತದೆ. ಈ ವಿಳಂಬದಿಂದ ಸಹಸ್ರಾರು ಅಭ್ಯರ್ಥಿಗಳು ಅನುಭವಿಸುವ ಪಾಡು ಹೇಳತೀರದು. ಪಾರದರ್ಶಕವಾಗಿ, ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆ ಮುಗಿಸುವ ಸಂಸ್ಥೆಯಾಗಿ ಈಗಿರುವ ಕೆಪಿಎಸ್‌ಸಿ ರೂಪುಗೊಳ್ಳಲು ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಸರ್ಕಾರ ಕ್ಷಿಪ್ರವಾಗಿ ಕ್ರಮಕೈಗೊಳ್ಳಬೇಕು.

ಯುವಪೀಳಿಗೆ ಸರ್ಕಾರಿ ಹುದ್ದೆ ಪಡೆಯುವ ಸಲುವಾಗಿ, ಪರೀಕ್ಷೆ ಪಾಸು ಮಾಡಬೇಕೆಂದು ತಯಾರಿ ನಡೆಸುತ್ತಿರುತ್ತಾರೆ. ಈ ಪ್ರಕ್ರಿಯೆಗೆ ಸಾಕಷ್ಟು ಹಣ ಮತ್ತು ಸಂಪನ್ಮೂಲವನ್ನು ವಿನಿಯೋಗಿಸಿರುತ್ತಾರೆ. ಪರೀಕ್ಷೆಯ ಗೊಂದಲಗಳಿಂದಾಗಿ ಅವರ ಅಭ್ಯಾಸ ಮತ್ತು ಭವಿಷ್ಯ ಹಳಿ ತಪ್ಪುವ ಅಪಾಯವೂ ಇರುತ್ತದೆ. ಹೀಗಾಗಿ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿರುವುದು ಇಂದಿನ ತುರ್ತು ಅಗತ್ಯ.

ಸರ್ಕಾರದ ಕೆಲಸ ಕಾರ್ಯಗಳು ಸುಗಮವಾಗಿ ಸಾಗಬೇಕೆಂದರೆ ಸಾಕಷ್ಟು ಮಾನವ ಸಂಪನ್ಮೂಲ ಅಗತ್ಯ. ಹುದ್ದೆಗಳನ್ನು ಭರ್ತಿ ಮಾಡದೆ ಖಾಲಿ ಉಳಿಸಿಕೊಂಡರೆ, ಇರುವ ಅಧಿಕಾರಿ, ನೌಕರರುಗಳ ಮೇಲೆ ಒತ್ತಡ ಹೆಚ್ಚಾಗಿ, ಅವರ ವೈಯಕ್ತಿಕ ಜೀವನ ಮತ್ತು ಕಚೇರಿ ಕೆಲಸ – ಎರಡರ ಮೇಲೂ ಕೆಟ್ಟ ಪರಿಣಾಮಗಳು ಉಂಟಾಗುತ್ತವೆ. ಅತಿಯಾದ ಕೆಲಸದೊತ್ತಡದಿಂದ ಆತ್ಮಹತ್ಯೆ ಮಾಡಿಕೊಂಡವರ ಸುದ್ದಿಗಳೂ ನಮ್ಮ ಮುಂದಿವೆ. ಹೀಗಾಗಿ ಖಾಲಿ ಇರುವ ಎಲ್ಲ ಹುದ್ದೆಗಳನ್ನೂ ಭರ್ತಿ ಮಾಡಬೇಕು; ಸರ್ಕಾರಿ ಆಡಳಿತಯಂತ್ರ ಸುಗಮವಾಗಿ ಸಾಗಬೇಕು. ಇದಕ್ಕೆ ಪೂರಕವಾಗಿ ಕೆಪಿಎಸ್‌ಸಿಗೆ ಕಾಯಕಲ್ಪ ನೀಡುವ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕು. ಆ ಮೂಲಕ ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವ ಯುವಸಮೂಹದಲ್ಲಿ ಕೆಪಿಎಸ್‌ಸಿ ಬಗ್ಗೆ ವಿಶ್ವಾಸಾರ್ಹತೆ ಮೂಡಿಸಬೇಕಾಗಿದೆ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

17 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

17 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

17 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

17 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

17 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

17 hours ago