ಮೈಸೂರು : ದಸರಾ ಹಬ್ಬಕ್ಕೆ ಬೊಂಬೆ ಕೂರಿಸುವ ಪದ್ಧತಿ ಸುಮಾರು 18ನೇ ಶತಮಾನದಿಂದಲೂ ಜಾರಿಯಲ್ಲಿದೆ ಎನ್ನಲಾಗಿದೆ. ನವರಾತ್ರಿ ವೇಳೆಯಲಿ ವಿವಿಧ ಪರಿಕಲ್ಪನೆಗಳನ್ನು ಇಟ್ಟುಕೊಂಡು ಬೊಂಬೆ ಕೂರಿಸುವುದು ವಾಡಿಕೆ.
ಈ ರೀತಿಯಾಗಿ 25 ವರ್ಷಗಳಿಂದಲೂ ತಮ್ಮ ಮನೆಯಲ್ಲಿ ದಸರಾ ಬೊಂಬೆ ಕೂರಿಸುತ್ತಾ ಬಂದಿರುವ ಮೈಸೂರಿನ ಟೀಕೆ ಲೇಔಟ್ ನ ಸುಮಾ ಅವರು ಈ ಬಾರಿ ಸುಮಾರು 1500ಕ್ಕೂ ಹೆಚ್ಚು ಬೊಂಬೆಗಳನ್ನು ಕೂರಿಸಿದ್ದಾರೆ.
ನಮಗೆ ಮೈಸೂರಿನ ಮಹಾರಾಜರು ದೇವರ ಸಮಾನ, ಹೀಗಾಗಿ ಮಹಾರಾಜರು ಅಂಬಾರಿ ಏರುವ ವೇಳೆಗೆ, ಕುಶಾಲು ತೋಪು ಬರುವ ವೇಳೆಗೆ ಮಹಾರಾಜರ ಶಕ್ತಿ, ಶೌರ್ಯ ಪ್ರದರ್ಶನ ಮಾಡುವ ಬೊಂಬೆಗಳನ್ನು ಕೂರಿಸುತ್ತೇವೆ.
ಮಹಾರಾಜರು ಅಂಬಾರಿಯಿಂದ ಇಡಿಯುವ ವೇಳೆಗೆ ಬೊಂಬೆಗಳನ್ನು ಮಲಗಿಸಿ ಅವರಿಗೆ ಗೌರವ ಸೂಚಿಸುತ್ತೇವೆ ಎಂದು ತಮ್ಮ ಮನೆಯ ಬೊಂಬೆಗಳ ಬಗ್ಗೆ ಹೇಳುತ್ತಾರೆ ಸುಮಾ.
ಬೊಂಬೆಗಳನ್ನು ಸಾಮಾನ್ಯವಾಗಿ 9 7 5 ಹೀಗೆ ಹಲವು ಹಂತಗಳಲ್ಲಿ ಕೂರಿಸುತ್ತಾರೆ. ಸುಮಾ ಅವರು ಈ ಬಾರಿ 9 ಹಂತಗಳಲ್ಲಿ ಬೊಂಬೆ ಕೂರಿಸಿದ್ದಾರೆ.
ಗಮನ ಸೆಳೆಯುವ ಬೊಂಬೆಗಳು :
ಅರಮನೆ, ಪೌರಾಣಿಕ ಕಥೆಗಳನ್ನು ಬಿಂಬಿಸುವ ಬೊಂಬೆಗಳು, ನವರಾತ್ರಿ ಹಬ್ಬಕ್ಕೆ ಸಂಬಂಧಿಸಿದ ಬೊಂಬೆಗಳ ಪ್ರದರ್ಶನ ಇದ್ದೇ ಇರುತ್ತದೆ. ಇದರ ಜೊತೆಗೆ ಈ ಬಾರಿ ಕೊರೋನ ವಾರಿಯರ್ಸ್, ಕೋವಿಡ್ ಸಂಬಂಧಿತ ಬೊಂಬೆಗಳು, ಪುನೀತ್ ರಾಜಕುಮಾರ್, ಸ್ವಾತಂತ್ರ್ಯ ಅಮೃತ ಮಹೋತ್ಸವದ ಬೊಂಬೆಗಳು, ಪಟ್ಟದ ರಾಜಾರಾಣಿಯ ದರ್ಬಾರ್, ಈಶ್ವರ, ಕೃಷ್ಣ ದಂತಹ ಬೊಂಬೆಗಳು ಹೈಲೈಟ್ ಎನ್ನುತ್ತಾರೆ ಸುಮಾ.
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…