ಎಡಿಟೋರಿಯಲ್

ಇದು ನಮ್ಮ ಬೊಂಬೆ ಮನೆ : ದಸರಾ ಮೆರುಗು ಹೆಚ್ಚಿಸುವ ಮನೆ ಮನೆ ಬೊಂಬೆ

ಮೈಸೂರು :  ದಸರಾ ಹಬ್ಬಕ್ಕೆ ಬೊಂಬೆ ಕೂರಿಸುವ ಪದ್ಧತಿ ಸುಮಾರು 18ನೇ ಶತಮಾನದಿಂದಲೂ ಜಾರಿಯಲ್ಲಿದೆ ಎನ್ನಲಾಗಿದೆ. ನವರಾತ್ರಿ ವೇಳೆಯಲಿ ವಿವಿಧ ಪರಿಕಲ್ಪನೆಗಳನ್ನು ಇಟ್ಟುಕೊಂಡು ಬೊಂಬೆ ಕೂರಿಸುವುದು ವಾಡಿಕೆ.

ಈ ರೀತಿಯಾಗಿ 25 ವರ್ಷಗಳಿಂದಲೂ ತಮ್ಮ ಮನೆಯಲ್ಲಿ ದಸರಾ ಬೊಂಬೆ ಕೂರಿಸುತ್ತಾ ಬಂದಿರುವ ಮೈಸೂರಿನ ಟೀಕೆ ಲೇಔಟ್ ನ ಸುಮಾ ಅವರು ಈ ಬಾರಿ ಸುಮಾರು 1500ಕ್ಕೂ ಹೆಚ್ಚು ಬೊಂಬೆಗಳನ್ನು ಕೂರಿಸಿದ್ದಾರೆ.

ನಮಗೆ ಮೈಸೂರಿನ ಮಹಾರಾಜರು ದೇವರ ಸಮಾನ, ಹೀಗಾಗಿ ಮಹಾರಾಜರು ಅಂಬಾರಿ ಏರುವ ವೇಳೆಗೆ, ಕುಶಾಲು ತೋಪು ಬರುವ ವೇಳೆಗೆ ಮಹಾರಾಜರ ಶಕ್ತಿ, ಶೌರ್ಯ ಪ್ರದರ್ಶನ ಮಾಡುವ ಬೊಂಬೆಗಳನ್ನು ಕೂರಿಸುತ್ತೇವೆ.

ಮಹಾರಾಜರು ಅಂಬಾರಿಯಿಂದ ಇಡಿಯುವ ವೇಳೆಗೆ ಬೊಂಬೆಗಳನ್ನು ಮಲಗಿಸಿ ಅವರಿಗೆ ಗೌರವ ಸೂಚಿಸುತ್ತೇವೆ ಎಂದು ತಮ್ಮ ಮನೆಯ ಬೊಂಬೆಗಳ ಬಗ್ಗೆ ಹೇಳುತ್ತಾರೆ ಸುಮಾ.

 

ಬೊಂಬೆಗಳನ್ನು ಸಾಮಾನ್ಯವಾಗಿ 9 7 5 ಹೀಗೆ ಹಲವು ಹಂತಗಳಲ್ಲಿ ಕೂರಿಸುತ್ತಾರೆ. ಸುಮಾ ಅವರು ಈ ಬಾರಿ 9 ಹಂತಗಳಲ್ಲಿ ಬೊಂಬೆ ಕೂರಿಸಿದ್ದಾರೆ.

ಗಮನ ಸೆಳೆಯುವ ಬೊಂಬೆಗಳು : 

ಅರಮನೆ, ಪೌರಾಣಿಕ ಕಥೆಗಳನ್ನು ಬಿಂಬಿಸುವ ಬೊಂಬೆಗಳು, ನವರಾತ್ರಿ ಹಬ್ಬಕ್ಕೆ ಸಂಬಂಧಿಸಿದ ಬೊಂಬೆಗಳ ಪ್ರದರ್ಶನ ಇದ್ದೇ ಇರುತ್ತದೆ. ಇದರ ಜೊತೆಗೆ ಈ ಬಾರಿ ಕೊರೋನ ವಾರಿಯರ್ಸ್, ಕೋವಿಡ್ ಸಂಬಂಧಿತ ಬೊಂಬೆಗಳು, ಪುನೀತ್ ರಾಜಕುಮಾರ್, ಸ್ವಾತಂತ್ರ್ಯ ಅಮೃತ ಮಹೋತ್ಸವದ ಬೊಂಬೆಗಳು, ಪಟ್ಟದ ರಾಜಾರಾಣಿಯ ದರ್ಬಾರ್, ಈಶ್ವರ, ಕೃಷ್ಣ ದಂತಹ ಬೊಂಬೆಗಳು ಹೈಲೈಟ್ ಎನ್ನುತ್ತಾರೆ ಸುಮಾ.

 

andolanait

Recent Posts

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

33 mins ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

57 mins ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

2 hours ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

5 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

5 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

5 hours ago