ಎಡಿಟೋರಿಯಲ್

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು,  ಸಚಿವ ಸಂಪುಟ ಸಭೆಯಲ್ಲಿ ೫೦,೦೦೦ ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಆದರೆ, ನಿರುದ್ಯೋಗಿಗಳಿಗೆ ಒಂದು ಸ್ಪಷ್ಟತೆ ಬೇಕಿದೆ. ಯಾವ್ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂಬ ವಿಷಯದಲ್ಲಿ ಗೊಂದಲ ಇದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆ ಗಳಲ್ಲಿ ಒಟ್ಟಾರೆ ೨.೮೪ ಲಕ್ಷ ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ. ಆದರೆ ಸರ್ಕಾರ ಆರ್ಥಿಕ ಶಕ್ತಿ ಅವಂಬಿಸಿ ನೇಮಕಾತಿ ಮಾಡಬೇಕಾಗುತ್ತದೆ. ಸದ್ಯದ ಪರಿಸ್ಥಿಯಲ್ಲಿ ಸರ್ಕಾರವೇ ಘೋಷಿಸಿರುವಂತೆ ೫೦,೦೦೦ ಹುದ್ದೆಗಳನ್ನು ಭರ್ತಿ ಮಾಡು ವುದೂ ದುಸ್ತರ ಅನಿಸುತ್ತದೆ.

ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹಣಕಾಸಿನ ಕೊರತೆ ಮಾತ್ರವಲ್ಲ,  ಮೀಸಲಾತಿ ಗೊಂದಲ ಕೂಡ ಅಡ್ಡಿಯಾಗಿದೆ. ರಾಜ್ಯ ಸರ್ಕಾರ ಸದ್ಯಕ್ಕೆ ಒಳ ಮೀಸಲಾ ತಿಯನ್ನು  ಅನುಸರಿಸುವುದಿಲ್ಲ.  ಹಿಂದಿನ ಮೀಸಲಾತಿಯನ್ನೇ ಅಳವಡಿಸಿಕೊಂಡು ನೇಮಕಾತಿ ಪ್ರಕ್ರಿಯೆ  ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದಕ್ಕೂ ಕಾನೂನು ತೊಡಕು ಎದುರಾಗುವ ಅಪಾಯವಿದೆ. ಅತ್ತ ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿದ್ದಾರೆ. ಆದರೆ, ಒಳ ಮೀಸಲಾತಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ.

ಹಾಗಾಗಿ ಹಿಂದಿನ ಮೀಸಲಾತಿ ಅನುಸಾರ ನೇಮಕಾತಿ ಸಾಧ್ಯವೇ ಎಂಬುದು ಪ್ರಶ್ನೆಯಾಗಿದೆ.  ರಾಜ್ಯ ಸರ್ಕಾರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸಂದರ್ಭದಲ್ಲಿ  ‘ಒಳ ಮೀಸಲಾತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡುವ ಆದೇಶವನ್ನು ಪಾಲಿಸುವುದು ಕಡ್ಡಾಯ’ ಎಂಬ ಷರತ್ತನ್ನು ಅನ್ವಯಿಸಲಿದೆ ಎಂದು ಹೇಳಲಾಗಿದೆ.

ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಕಳೆದ ವಾರ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನಡೆದ ಭಾರಿ ಪ್ರತಿಭಟನೆಯಲ್ಲಿ ಸಹಸ್ರಾರು ನಿರುದ್ಯೋಗಿಗಳು,  ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಯುವಜನರಲ್ಲಿ ಸಂಚಲನ ಮೂಡಿಸಿದ್ದು,  ಪ್ರತಿಭಟನಾಕಾರರು ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದ್ದಾರೆ. ಬಾಕಿ ಇರುವ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಬೇಕು. ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸಬೇಕು.

ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.  ಉದ್ಯೋಗಾಕಾಂಕ್ಷಿಗಳ ಬೇಡಿಕೆಯಲ್ಲಿಯೂ ವಾಸ್ತವತೆ  ಇದೆ. ದಶಕಗಳಿಂದಲೂ ದೊಡ್ಡ ಮಟ್ಟದಲ್ಲಿ ನೇಮಕಾತಿ ನಡೆದೇ ಇಲ್ಲ. ಸಾಮಾನ್ಯ ಪದವಿಗಳು ಇರಲಿ, ವೃತ್ತಿಪರ ಶಿಕ್ಷಣ ತರಬೇತಿ ಪಡೆದವರಿಗೂ ಸರ್ಕಾರಿ ಹುದ್ದೆ ಕೈಗೆಟುಕದಂತಾ ಗಿದೆ. ಅಲ್ಲೊಂದು, ಇಲ್ಲೊಂದು ಹುದ್ದೆಗಳನ್ನು ಭರ್ತಿ ಮಾಡಿದರೆ ಅದೇ ದೊಡ್ಡದು. ಅಲ್ಲದೆ, ಬಹುತೇಕ ಇಲಾಖೆ ಗಳಲ್ಲಿ ಗುತ್ತಿಗೆ ಆಧಾರಿತ ನೌಕರರ ಸಂಖ್ಯೆಯೇ ಹೆಚ್ಚಾಗಿದೆ.

ಸರ್ಕಾರವು ಕನಿಷ್ಠ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವುದರತ್ತ ವಾದರೂ ಗಮನಹರಿ ಸಬೇಕು. ಖಾಸಗಿ ಸಂಸ್ಥೆಗಳು, ಕೈಗಾರಿಕೆಗಳಿಗೆ ಒಪ್ಪಂದದಂತೆ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳನ್ನು ಸಕಾಲದಲ್ಲಿ ಒದಗಿಸ ಬೇಕು. ಅಲ್ಲದೇ, ಅವು ಬಯಸುವ ವಿದ್ಯಾರ್ಹತೆ ಉಳ್ಳವರನ್ನು ಸರ್ಕಾರದ ಮೂಲಕವೇ ನೇಮಕ ಮಾಡಿಕೊಳ್ಳಲು ತಾಕೀತು ಮಾಡಬೇಕು. ಇಲ್ಲದಿದ್ದರೆ, ಖಾಸಗಿ ಸಂಸ್ಥೆಗಳು ಹೊರ ರಾಜ್ಯದವರನ್ನು ನೇಮಕ ಮಾಡಿಕೊಳ್ಳಬಹುದು ಅಥವಾ ಕಡಿಮೆ ಜನರನ್ನು ತೆಗೆದುಕೊಂಡು ಹೆಚ್ಚು ಕೆಲಸ ಮಾಡಿಸಬಹುದು. ಉದಾಹರಣೆಗೆ ೧೦೦ ಮಂದಿ ಕಾರ್ಮಿಕರ ಅಗತ್ಯ ಇದ್ದರೆ,  ಕೇವಲ ೫೦ ಜನರಿಂದ ಅಷ್ಟೂ ಕೆಲಸ ಮಾಡಿಸುವ ಸಾಧ್ಯತೆಯೂ ಇದೆ. ಅಲ್ಲದೆ,  ಕೆಲಸದ ಅವಧಿಯನ್ನು ಹೆಚ್ಚು ಮಾಡುವ ಬಗ್ಗೆ ವಿಶ್ವ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.

ಸರ್ಕಾರ ನಡೆಸುವ ಉದ್ಯೋಗ ಮೇಳಗಳು ನಿರೀಕ್ಷೆಯಷ್ಟು ಫಲಪ್ರದ ವಾಗಿಲ್ಲ. ಹಾಗೆ ನಿರೀಕ್ಷಿಸುವುದೂ ಅಷ್ಟು ಸಮಂಜಸವಾಗಿ ಕಾಣುತ್ತಿಲ್ಲ. ಹಿಂದೆ ರಾಜ್ಯ ಸರ್ಕಾರವೇ ಕಾರ್ಮಿಕ ಇಲಾಖೆಯಡಿ ‘ಉದ್ಯೋಗ ವಿನಿಮಯ ಕೇಂದ್ರ’  ವಿಭಾಗವನ್ನು ತೆರೆದಿತ್ತು. ೧೮ ವರ್ಷ ವಯಸ್ಸಾದ, ಎಸ್‌ಎಸ್‌ಎಲ್‌ಸಿ ಪಾಸಾದ ಯುವಜನರು ಆ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದರು.

ಸರ್ಕಾರದ ಯಾವುದೇ ಇಲಾಖೆಯಲ್ಲಿ ಹುದ್ದೆ ಖಾಲಿಯಾದರೆ, ಈ ಕೇಂದ್ರದ ಮೂಲಕ ಅರ್ಹರ ಪಟ್ಟಿಯನ್ನು ಪರಿಶೀಲಿಸಿ, ಸಂದರ್ಶನಕ್ಕೆ ಕರೆ ನೀಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಯೇ ಮರೀಚಿಕೆಯಾಗಿದ್ದು,  ‘ಒಂದಾನೊಂದು ಕಾಲದಲ್ಲಿ…’  ಎಂಬಂತಹ ಸ್ಥಿತಿಗೆ ತಲುಪಿತು.  ಉದ್ಯೋಗಾಕಾಂಕ್ಷಿಗಳ ಮನಸ್ಥಿತಿಯನ್ನು ಸರ್ಕಾರ ಸೂಕ್ಷ ವಾಗಿ ಅವಲೋಕಿಸಬೇಕಿದೆ. ಯುವಶಕ್ತಿಯನ್ನು ಅಭಿವೃದ್ಧಿಗೆ ಪೂರಕವಾಗಿ ಬಳಸುವ ನಿಟ್ಟಿನಲ್ಲಿ ಉದ್ಯೋಗ ನೇಮಕಾತಿ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಪ್ರತಿವರ್ಷ ಬಜೆಟ್ ಮಾದರಿಯಲ್ಲೇ ಹುದ್ದೆಗಳ ಭರ್ತಿಗೂ ಕ್ರಮವಹಿಸಬೇಕು. ಖಾಲಿ ಇರುವ ಎಲ್ಲ ಹುದ್ದೆಗಳನ್ನೂ ಏಕಕಾಲದಲ್ಲಿ ತುಂಬಬೇಕು ಎಂಬ ನಿರೀಕ್ಷೆ ಸಾಧುವಲ್ಲ.  ಆದರೆ, ಪ್ರತಿವರ್ಷ ಕನಿಷ್ಠ ಪ್ರಮಾಣದಲ್ಲಿ ನೌಕರಿಗಳನ್ನು ಭರ್ತಿ ಮಾಡಿದ್ದರೆ,  ನಿರುದ್ಯೋಗಿಗಳ ಪ್ರತಿಭಟನೆಗೆ ಅವಕಾಶ ಇರುತ್ತಿರಲಿಲ್ಲ. ಸರ್ಕಾರ ಪೂರ್ವಗ್ರಹಗಳಿಲ್ಲದೆ ಹುದ್ದೆಗಳನೇಮಕಾತಿಗೆ ಕ್ರಮ ಕೈಗೊಳ್ಳಬೇಕಿರುವುದು ಅತ್ಯಗತ್ಯ.

” ಸರ್ಕಾರವು ಕನಿಷ್ಠ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವುದರತ್ತವಾದರೂ ಗಮನಹರಿಸಬೇಕು. ಖಾಸಗಿ ಸಂಸ್ಥೆಗಳು, ಕೈಗಾರಿಕೆಗಳಿಗೆ ಒಪ್ಪಂದದಂತೆ ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ಸಕಾಲದಲ್ಲಿಒದಗಿಸಬೇಕು ಅಲ್ಲದೆ, ಅವು ಬಯಸುವ ವಿದ್ಯಾರ್ಹತೆ ಉಳ್ಳವರನ್ನು ಸರ್ಕಾರದಮೂಲಕವೇ ನೇಮಕ ಮಾಡಿಕೊಳ್ಳಲು ತಾಕೀತು ಮಾಡಬೇಕು.”

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು…

26 mins ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…

45 mins ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ…

1 hour ago

ಅಮೇರಿಕಾ-ಇಸ್ರೇಲ್‌ ಜಂಟಿ ದಾಳಿ: ಒಂದೇ ಬಾರಿಗೆ ಇರಾನಿನ 48 ನಾಯಕರು ಸಾವು

ಟೆಹರಾನ್:‌ ಇರಾನ್‌ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು…

1 hour ago

ಹನೂರು: ನಾಳೆ ಚಂದ್ರಗಹಣವಿದ್ದರೂ ಭಕ್ತರಿಗೆ ಮಹದೇಶ್ವರನ ದರ್ಶನಕ್ಕಿಲ್ಲ ತೊಂದರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಬಿಜೆಪಿ-ಜಾ.ದಳ ಪಾಳೆಯಗಳಿಗೆ  ಹರ್ಷ ತಂದಿರುವ ರಾಜ್ಯ ರಾಜಕಾರಣ

ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…

3 hours ago