ಎಡಿಟೋರಿಯಲ್

ಬೆಳೆಯಲು ಬೇಕಾದ ಜೀವನ ಪಾಠಗಳು

ಮಕ್ಕಳನ್ನು ತಿದ್ದಿ ತೀಡಿ ಬುದ್ಧಿ ಹೇಳಬೇಕಾದ ಜವಾಬ್ದಾರಿ ಹೊಂದಿರುವ ಹೆತ್ತವರು ಇತ್ತೀಚಿನ ದಿನಗಳಲ್ಲಿ ಅಂಕಗಳಿಕೆಯ ಹಿಂದೆ ಬಿದ್ದು, ಮಕ್ಕಳನ್ನು ಪುಸ್ತಕದ ಹುಳುವಾಗಿಸುತ್ತಾ ಜೀವನ ಪಾಠವನ್ನು ಕಲಿಸುವುದನ್ನೇ ಮರೆಯುತ್ತಿದ್ದೇವೆ. ಚಿಕ್ಕ ವಯಸ್ಸಿನ ಮಕ್ಕಳಿರುವ ಹಿರಿಯರಿಬ್ಬರು ಸೇರಿದಾಗ ಮಾತುಕತೆ ಮಕ್ಕಳ ಓದಿನ ಕಡೆಗೆ ಹೊರಳಿದರೆ ಮುಗಿಯಿತು. ನನ್ನ ಮಗ/ಮಗಳು ಶಾಲೆಯಲ್ಲಿ ಎಲ್ಲರಿಗಿಂತ ಓದಿನಲ್ಲಿ ಮುಂದು, ಟೆಸ್ಟ್‌ಗಳಲ್ಲೂ ಔಟ್ ಆಫ್ ಔಟ್ ತೇಗಿಯೋದ್ರಿಂದ ಹೋಂ ವರ್ಕ್ ತುಂಬಾ ಇರುತ್ತದೆ ಎನ್ನುವುದರಿಂದ ನಮ್ಮ ಮನೆಯಲ್ಲಿ ಮಕ್ಕಳಿಗೆ ಕೆಳಗೆ ಬಿದ್ದ ಒಂದು ಕಡ್ಡಿಯನ್ನೂ ಎತ್ತಿಡಲೂ ಹೇಳುವುದಿಲ್ಲ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದರಲ್ಲೇ ಸಾರ್ಥಕತೆ ಕಾಣುತ್ತಾರೆ.

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ… ಓದಿನ ಜತೆಗೆ ಎಳವೆಯಲ್ಲೇ ಮಕ್ಕಳನ್ನು ತಿದ್ದಿ ತೀಡಿ, ಸಂಸ್ಕಾರವನ್ನು ಕಲಿಸುವ ಮೂಲಕ ಸಮಾಜದ ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಹೆತ್ತವರದ್ದು. ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು, ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಒಂದಷ್ಟು ಜೀವನ ಪಾಠ, ಸಾಮಾಜಿಕ ಮೌಲ್ಯಗಳನ್ನು ಕಲಿಸಿಕೊಡಬೇಕು. ಆ ಮೂಲಕ ಭವಿಷ್ಯದಲ್ಲಿ ಉತ್ತಮವಾಗಿ ಜೀವನವನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಬೇಕಾಗುತ್ತದೆ. ಆಗ ಮಕ್ಕಳ ಭವಿಷ್ಯವೂ ಉತ್ತಮವಾಗಿ ರೂಪುಗೊಳ್ಳುತ್ತದೆ. ಅದರಲ್ಲೂ ಕೆಲವೊಂದು ವಿಷಯಗಳನ್ನು ಮಕ್ಕಳು ಪ್ರೌಢಾವಸ್ಥೆ ತಲುಪುವ ಮುನ್ನವೇ ಕಲಿಸಿದರೆ ಒಳಿತು.

ಬಾಲ್ಯಾವಸ್ಥೆಯಲ್ಲಿರುವ ಮಕ್ಕಳು ಮಣ್ಣಿನ ಮುದ್ದೆಯಂತೆ ಶಾಲೆಯಲ್ಲಿ ಗುರುಗಳು ಹೇಳಿಕೊಟ್ಟಿದ್ದನ್ನು ಚುರುಕಿನಿಂದ ಕಲಿತುಕೊಳ್ಳುವಂತೆ, ಪೋಷಕರು ಹೇಳಿದ್ದನ್ನೂ ಬಹುಬೇಗ ಗ್ರಹಿಸಿಬಿಡುತ್ತಾರೆ. ಹೀಗಾಗಿ ಹೆತ್ತವರು ತಮ್ಮ ಮಕ್ಕಳಿಗೆ ಯಾವ ರೂಪ ನೀಡುತ್ತಾರೋ ಅದರ ಮೇಲೆ ಮಕ್ಕಳ ಭವಿಷ್ಯ ನಿರ್ಧಾರವಾಗುತ್ತದೆ.

ತಂದೆ ತಾಯಿ ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಶಿಕ್ಷಣದ ಜೊತೆ ಜೊತೆಗೆ ಎಲ್ಲಿ ಹೇಗಿರಬೇಕು ಯಾರ ಮುಂದೆ ಹೇಗೆ ನಡೆದುಕೊಳ್ಳಬೇಕು ಎಂಬ ಒಂದಷ್ಟು ಮಾನವೀಯ ಮೌಲ್ಯಗಳು, ಜೀವನ ಪಾಠವನ್ನು ಕಲಿಸಿದರೆ, ಮುಂದೆ ಆ ಮಕ್ಕಳು ತಂದೆ ತಾಯಿಗೆ ಆದರ್ಶ ಮಕ್ಕಳಾಗಿ, ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳುವುದರಲ್ಲಿ ಸಂದೇಹವೇ ಬೇಡ. ಸಮಯ ನಿರ್ವಹಣೆ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಮಯ ನಿರ್ವಹಣೆಯ ಬಗ್ಗೆ ಕಲಿಸಬೇಕು. ಬೆಳಿಗ್ಗೆ ಬೇಗ ಎದ್ದೇಳುವುದು, ಬೇಗ ಹೋಮ್ ವರ್ಕ್ ಮಾಡಿ ಮುಗಿಸುವುದು, ಸಮಯಕ್ಕೆ ಸರಿಯಾಗಿ ಶಾಲೆಗೆ ಹೊರಡಲು ಸಿದ್ಧರಾಗುವುದು, ತಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮಾಡಿ ಮುಗಿಸುವುದನ್ನು ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ತಿಳಿಸಿದರೆ ಮುಂದೆ ಜೀವನದಲ್ಲಿ ಸಮಯ ಪಾಲನೆಯ ಮಹತ್ವ ಅರಿವಾಗುತ್ತದೆ.

ಎಲ್ಲರನ್ನೂ ಗೌರವಿಸಿ ಹಿರಿಯರು- ಕಿರಿಯರು ಎನ್ನದೆ ಎಲ್ಲರನ್ನೂ ಗೌರವಿ ಸುವುದನ್ನು ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಕಲಿಸಿ ಕೊಡಬೇಕು. ಹಿರಿಯರ ಜೊತೆ ಹೇಗೆ ಮಾತನಾಡಬೇಕು? ತಮಗಿಂತ ಕಿರಿಯರನ್ನೂ ಹೇಗೆ ಗೌರವಯುತವಾಗಿ ಮಾತನಾಡಿಸಬೇಕು? ವಯಸ್ಸಾದವರ ಜೊತೆ ಹೇಗೆ ವರ್ತಿಸುವುದು ಮುಂತಾದ ಸೂಕ್ಷ್ಮ ವಿಚಾರಗಳನ್ನು ಕಲಿಸಬೇಕು. ಇವು ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಹಾಯ ಮಾಡುತ್ತದೆ.

ಶಿಸ್ತು ಮಕ್ಕಳನ್ನು ಕೇವಲ ಮುದ್ದು ಮಾಡಿದರೆ ಸಾಲದು, ಶಿಸ್ತಿನ ಪಾಠವನ್ನೂ ಕಲಿಸಬೇಕು. ಹತ್ತು ವರ್ಷ ತುಂಬುವ ಮೊದಲೇ ಮಗುವಿಗೆ ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಏಳುವುದು, ಬೆಡ್ ಶೀಟ್ ಮಡಚುವುದು, ಸಮಯಕ್ಕೆ ಸರಿ ಯಾಗಿ ತಿಂಡಿ-ಊಟ ಮಾಡುವುದು, ತಮ್ಮ ಆಟಿಕೆಗಳನ್ನು ಅಚ್ಚುಕಟ್ಟಾಗಿ ಜೋಡಿಸುವುದು ಇತ್ಯಾದಿ ಶಿಸ್ತಿನ ಪಾಠವನ್ನು ಪೋಷಕರು ಮಾಡಲೇ ಬೇಕಾಗುತ್ತದೆ. ಜೊತೆಗೆ ಅಚ್ಚುಕಟ್ಟು ತನ ಅಂದರೆ ನೈರ್ಮಲ್ಯದ ಪಾಠವನ್ನೂ ಹೇಳಿ ಕೊಡ ಬೇಕಾಗುತ್ತದೆ. ಹೊರಗಿನಿಂದ ಮನೆಗೆ ಬಂದ ಕೂಡಲೇ ಕೈ ಕಾಲು, ಮುಖ ತೊಳೆಯಬೇಕು, ಕೈ ತೊಳೆಯದೆ ಊಟ ಮಾಡಬಾರದು…ಹೀಗೆ ಒಂದಷ್ಟು ನೈರ್ಮಲ್ಯದ ಬಗ್ಗೆಯೂ ಮಕ್ಕಳಿಗೆ ತಿಳಿ ಹೇಳಬೇಕು.ಗಿಡಗಳಿಗೆ ನೀರು ಹಾಕುವುದನ್ನು ಕಲಿಸಿದರೆ ಮುಂದೆ ಈ ಅಭ್ಯಾಸ ಮಕ್ಕಳಲ್ಲಿ ಪ್ರಕೃತಿ ಪ್ರೇಮವನ್ನು ಬೆಳೆಸಲು ಸಹಕಾರಿಯಾಗಲಿದೆ. ಮಕ್ಕಳು ಹಠ ಮಾಡುತ್ತಾರೆಂದುಅವರು ಕೇಳಿದ್ದನ್ನೆಲ್ಲಾ ಕೊಡಿಸುವ ಬದಲಿಗೆ ಹಣ ಎಷ್ಟು ಮುಖ್ಯ, ಏಕೆ ದುಂದು ವೆಚ್ಚ ಮಾಡಬಾರದು ಎಂದು ಹೇಳಿಕೊಡಬೇಕು.

” ನಿಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಕಲಿಸಿ, ಯಾವುದೇ ಕೆಲಸ ಮಾಡುವ ಮೊದಲು ಎರಡು ಬಾರಿ ಯೋಚಿಸಿ ಸೂಕ್ತ ನಿರ್ಧಾರವನ್ನು ಹೇಗೆ ತೆಗೆದುಕೊಳ್ಳುವುದು ಎಂಬುದರ ಬಗ್ಗೆ ಕಲಿಸಿ. ಇದು ಮಕ್ಕಳಲ್ಲಿ ಆಲೋಚನಾ ಕೌಶಲವನ್ನು ಹೆಚ್ಚಿಸುತ್ತದೆ. ಜೊತೆಗೆ ಅವರಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಲು ಸಹಾಯ ಮಾಡಲಿದೆ.”

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

11 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

12 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

12 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

18 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

18 hours ago