ಎಡಿಟೋರಿಯಲ್

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಸರ್ಕಾರ ಮುಂದಾಗಲಿ

ಅನಿಲ್ ಅಂತರಸಂತೆ

ರಾಜ್ಯದಲ್ಲಿ ಕೃಷಿಯ ನಂತರದ ೨ನೇ ಸ್ಥಾನವನ್ನು ರೈತರ ಬೆನ್ನೆಲುಬಾಗಿರುವ ಹೈನುಗಾರಿಕೆಗೆ ನೀಡಬಹುದಾಗಿದೆ. ಅದರಲ್ಲೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಸನ ಜಿಲ್ಲೆಗಳ ರೈತರು ಹೆಚ್ಚಾಗಿ ಈ ಹೈನುಗಾರಿಕೆ ಉಪಕಸುಬನ್ನೇ ಅವಲಂಬಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಹಾಲು ಮಾರಾಟದ ದರವು ಏರಿಕೆಯಾದ್ದರಿಂದ ರೈತರು ತಮ್ಮ ಆದಾಯ ಮತ್ತಷ್ಟು ಹೆಚ್ಚಳವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಸರ್ಕಾರ ತಾನು ನೀಡಿದ ಭರವಸೆಯಂತೆ ರೈತರಿಗೆ ನೀಡಬೇಕಿರುವ ೫ ರೂ. ಪ್ರೋತ್ಸಾಹಧನವನ್ನು ಮಾತ್ರ ಇನ್ನೂ ಬಾಕಿ ಉಳಿಸಿಕೊಂಡಿದ್ದು, ಸರ್ಕಾರದ ಭರವಸೆ ಹಾಗೆಯೇ ಉಳಿದಿದೆ.

ಹೈನುಗಾರಿಕೆಯನ್ನು ಆಶ್ರಯಿಸಿ ಹಾಲು ಉತ್ಪಾದನೆ ಮಾಡುತ್ತಿರುವ ರೈತರಿಂದ ಮೈಮುಲ್ ಪ್ರತಿ ಲೀಟರ್‌ಗೆ ೩೦ ರೂ. ಬೆಲೆ ನೀಡಿ ಖರೀದಿಸುತ್ತಿತ್ತು. ಆದರೆ ಸರ್ಕಾರ ನಂದಿನಿ ಹಾಲಿನ ದರ ಏರಿಸಿದ್ದರಿಂದ ಮೈಮುಲ್ (ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ)ಕೂಡ ೨ ರೂ. ಏರಿಸಿ, ೩೨ ರೂ.ಗಳನ್ನು ರೈತರಿಗೆ ನೀಡಲು ಮುಂದಾಗಿದೆ.

ಆದರೆ ಈ ಹಿಂದೆ ರೈತರಿಗೆ ಮೈಮುಲ್ ನೀಡುತ್ತಿರುವ ಹಣ ಸಾಕಾಗುತ್ತಿಲ್ಲ ಎಂದಾಗ ೫ ರೂ. ಪ್ರೋತ್ಸಾಹ ಧನ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಆ ಹಣವನ್ನು ಕಳೆದ ೩ ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವುದು, ಸರ್ಕಾರ ಕೇವಲ ಘೋಷಣೆ ಮಾತ್ರ ಮಾಡುತ್ತದೆ ವಿನಾ ಅದನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಪ್ರತಿನಿತ್ಯ ೧೧೫೬ ಸಂಘಗಳಿಂದ ೯೬ ಸಾವಿರ ಹೈನುಗಾರರು ಡೇರಿಗೆ ಸುಮಾರು ೬.೫೦ ಲಕ್ಷ ಲೀ. ಹಾಲು ಹಾಕುತ್ತಿದ್ದು, ಇವರಿಗೆ ಬರಬೇಕಾದ ಮೊತ್ತವೇ ಬರೋಬ್ಬರಿ ತಿಂಗಳಿಗೆ ೩೦ ಕೋಟಿ ರೂ.ಗಳಷ್ಟಿದೆ.

ಇದರೊಂದಿಗೆ ಮಂಡ್ಯದಲ್ಲಿ ೧೨೭೪ ಸಂಘಗಳ ೧,೦೨,೦೦೦ ಸದಸ್ಯರು ಒಟ್ಟು ೯ ಲಕ್ಷ ಲೀ. ಹಾಲು ಡೇರಿಗೆ ಹಾಕುತ್ತಿದ್ದಾರೆ. ಚಾಮರಾಜನಗರದಲ್ಲಿ ೪೬೫ ಸಂಘದ ೩೨ ಸಾವಿರ ಸದಸ್ಯರಿಂದ ೨.೧೦ ಲಕ್ಷ ಲೀ., ಕೊಡಗಿನಿಂದ ೩೮ ಸಂಘದ ೨೭೦೦ ಸದಸ್ಯರಿಂದ ೫೦,೦೦೦ ಲೀ ಹಾಲು ಸಂಗ್ರಹವಾಗುತ್ತಿದೆ.

ಆದರೆ ಸರ್ಕಾರ ಮಾತ್ರ ಇವರಿಗೆ ನೀಡಬೇಕಾದ ೫ ರೂ. ಪ್ರೋತ್ಸಾಹಧನವನ್ನು ಕಳೆದ ೩ ತಿಂಗಳಿನಿಂದ ಬಾಕಿ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಗೇ

೩೫ ಕೋಟಿ ರೂ. ಹಾಗೆಯೇ, ಚಾ.ನಗರ ಮತ್ತು ಕೊಡಗಿನಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಬಾಕಿ ಉಳಿಸಿಕೊಂಡಿದೆ.

ಸದ್ಯ ಈ ಪರಿಸ್ಥಿತಿ ಹೈನುಗಾರಿಕೆಯನ್ನೇ ನಂಬಿರುವ ಗ್ರಾಮೀಣ ಭಾಗದ ಕುಟುಂಬಗಳಿಗೆ ನುಂಗಲಾರದ ತುಪ್ಪವೆನಿಸಿದೆ.

ಬೇಸಾಯವನ್ನು ನಂಬಿ ಸಾಕಷ್ಟು ನಷ್ಟ ಅನುಭವಿಸುತ್ತಿರುವ ಗ್ರಾಮೀಣ ಭಾಗದ ರೈತರು ತಮ್ಮ ಜೀವನೋಪಾಯಕ್ಕಾಗಿ ಹೈನುಗಾರಿಯನ್ನು ಆರಂಭಿಸಿ ಆರ್ಥಿಕವಾಗಿ ಸಫಲತೆ ಕಾಣುವ ಬಯಕೆಯನ್ನು ಹೊಂದಿದ್ದರು. ಇದಕ್ಕಾಗಿ ಸ್ಥಳೀಯ ಬ್ಯಾಂಕುಗಳಿಂದ ಸಾಕಷ್ಟು ಸಾಲ ಮಾಡಿ ಹಸುಗಳನ್ನು ಖರೀದಿಸಿ ಹೈನುಗಾರಿಕೆಯನ್ನು ಆರಂಭಿಸಿದ್ದಾರೆ.

ಈ ನಡುವೆ ಸರ್ಕಾರ ಕೂಡ ಪ್ರೋತ್ಸಾಹ ಧನವನ್ನು ನೀಡುವ ಬಗ್ಗೆ ಭರವಸೆ ನೀಡಿ ಘೋಷಣೆಯನ್ನೂ ಮಾಡಿ ರೈತರಲ್ಲಿ ಆಸೆಯನ್ನು ಚಿಗುರಿಸಿತ್ತು. ಆದರೆ ಇದೀಗ ೩ ತಿಂಗಳ ಹಣ ಬಾಕಿ ಉಳಿಸಿಕೊಂಡಿದೆ. ಅಲ್ಲದೆ ಈ ಪ್ರೋತ್ಸಾಹ ಧನವು ಸಮಯಕ್ಕೆ ಸರಿಯಾಗಿ ಎಂದೂ ಬಂದಿಲ್ಲ ಎಂಬುದು ರೈತರ ಮತ್ತೊಂದು ಆರೋಪವಾಗಿದೆ. ಸರಿಯಾದ ಸಮಯಕ್ಕೆ

ನೀಡಲು ಸಾಧ್ಯವಿಲ್ಲದ ಮೇಲೆ ಸರ್ಕಾರ ಘೋಷಣೆಯನ್ನಾದರೂ ಏಕೆ ಮಾಡಬೇಕು? ಎಂಬುದು ಪ್ರಶ್ನೆಯಾಗಿದೆ. ಇನ್ನಾದರೂ ಸರ್ಕಾರ ಇಂತಹ ಗಂಭೀರ ವಿಚಾರಗಳ ಕುರಿತು ಆಲೋಚನೆ ಮಾಡಬೇಕಿದೆ. ಘೋಷಣೆ ಮಾಡಿ ಬಳಿಕ ಅನುಷ್ಠಾನ ಮಾಡದೆ ಕೇವಲ ಅರೆಬರೆ ಆಶ್ವಾಸನೆಗಳನ್ನು ನೀಡುತ್ತಾ ಮುಂದುವರಿಯುವ ಬದಲು ಯೋಜನೆಯನ್ನು ಯಶಸ್ವಿಯಾಗಿ ರೈತನ ಕೈ ಸೇರುವಂತೆ ಮಾಡಬೇಕಿದೆ.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

3 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

3 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

3 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

4 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

7 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

8 hours ago