ನಾಲ್ಕು ದಿಕ್ಕಿನಿಂದ

ಕಾರಿನಂತೆ ಜೆಸಿಬಿಯನ್ನು ಅಲಂಕಾರ ಮಾಡಿ ವಧುವನ್ನು ಕರೆತಂದ ವರ: ವಿಡಿಯೋ ನೋಡಿ

ರಾಂಚಿ: ಸಾಮಾನ್ಯವಾಗಿ ಮದುವೆಯ ದಿಬ್ಬಣ ನೋಡಿದ್ದೇವೆ. ಅಲಂಕಾರ ಮಾಡಿದ ಕಾರಿನಲ್ಲಿ ಅಥವಾ ಕುದುರೆಯೇರಿ ಮದುವೆ ಮೆರವಣಿಗೆಯಲ್ಲಿ ವರ ಮಂಟಪಕ್ಕೆ  ಬರುತ್ತಾನೆ. ಆದರೆ ಇಲ್ಲೊಬ ವರ ವಿಭಿನ್ನವಾಗಿ ಮಂಟಪಕ್ಕೆ ಬಂದಿರುವುದು ಸುದ್ದಿಯಾಗಿದೆ.

ಜಾರ್ಖಂಡ್‌ ನ ರಾಂಚಿ ಮೂಲದ ರಾಜಾ ಕೃಷ್ಣ ಮಹತೋ ವಿವಾಹ ಇತ್ತೀಚೆಗೆ ನೆರವೇರಿದೆ. ವರ ರಾಜಾ ಕೃಷ್ಣ ಮಹತೋ ಮಂಟಪಕ್ಕೆ ಬಂದಿದ್ದಾರೆ. ಕಾರು ಅಥವಾ ಕುದುರೆಯಲ್ಲಿ ಬಂದಿಲ್ಲ. ಬದಲಾಗಿ ಜೆಸಿಬಿಯಲ್ಲಿ ಬಂದಿದ್ದಾರೆ.!

ವೃತ್ತಿಯಲ್ಲಿ ವಾಹನಗಳಿಗೆ ಹೂವು ಡೆಕೋರೇಟರ್ ಮಾಡುವ ಕಾಯಕವನ್ನು ಮಾಡುವ ರಾಜಾ ಕೃಷ್ಣ ಮಹತೋ ಅವರು ತನ್ನ ಮದುವೆಯ ಮೆರವಣಿಗೆ ಸಾಗಲು ಜೆಸಿಬಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾರಿನ ಹೊರ ಭಾಗದಲ್ಲಿ ಹೇಗೆ ಹೂವುಗಳನ್ನು ಅಲಂಕಾರ ಮಾಡುತ್ತಾರೋ ಹಾಗೆಯೇ ಜೆಸಿಬಿಗೆ ಹೂವಿನ ಅಲಂಕಾರವನ್ನು ಮಾಡಿ ವರನ ಉಡುಗೆ ತೊಟ್ಟು ಮಂಟಪಕ್ಕೆ ಬಂದಿದ್ದಾರೆ.

ಮದುವೆಯ ಬಳಿಕ ಪತ್ನಿಯನ್ನು ಅಲಂಕೃತ ಜೆಸಿಬಿಯಲ್ಲಿ ಕೂರಿಸಿಕೊಂಡು ಬಂದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

andolanait

Share
Published by
andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago