ನಾಲ್ಕು ದಿಕ್ಕಿನಿಂದ

ಕಾರಿನಂತೆ ಜೆಸಿಬಿಯನ್ನು ಅಲಂಕಾರ ಮಾಡಿ ವಧುವನ್ನು ಕರೆತಂದ ವರ: ವಿಡಿಯೋ ನೋಡಿ

ರಾಂಚಿ: ಸಾಮಾನ್ಯವಾಗಿ ಮದುವೆಯ ದಿಬ್ಬಣ ನೋಡಿದ್ದೇವೆ. ಅಲಂಕಾರ ಮಾಡಿದ ಕಾರಿನಲ್ಲಿ ಅಥವಾ ಕುದುರೆಯೇರಿ ಮದುವೆ ಮೆರವಣಿಗೆಯಲ್ಲಿ ವರ ಮಂಟಪಕ್ಕೆ  ಬರುತ್ತಾನೆ. ಆದರೆ ಇಲ್ಲೊಬ ವರ ವಿಭಿನ್ನವಾಗಿ ಮಂಟಪಕ್ಕೆ ಬಂದಿರುವುದು ಸುದ್ದಿಯಾಗಿದೆ.

ಜಾರ್ಖಂಡ್‌ ನ ರಾಂಚಿ ಮೂಲದ ರಾಜಾ ಕೃಷ್ಣ ಮಹತೋ ವಿವಾಹ ಇತ್ತೀಚೆಗೆ ನೆರವೇರಿದೆ. ವರ ರಾಜಾ ಕೃಷ್ಣ ಮಹತೋ ಮಂಟಪಕ್ಕೆ ಬಂದಿದ್ದಾರೆ. ಕಾರು ಅಥವಾ ಕುದುರೆಯಲ್ಲಿ ಬಂದಿಲ್ಲ. ಬದಲಾಗಿ ಜೆಸಿಬಿಯಲ್ಲಿ ಬಂದಿದ್ದಾರೆ.!

ವೃತ್ತಿಯಲ್ಲಿ ವಾಹನಗಳಿಗೆ ಹೂವು ಡೆಕೋರೇಟರ್ ಮಾಡುವ ಕಾಯಕವನ್ನು ಮಾಡುವ ರಾಜಾ ಕೃಷ್ಣ ಮಹತೋ ಅವರು ತನ್ನ ಮದುವೆಯ ಮೆರವಣಿಗೆ ಸಾಗಲು ಜೆಸಿಬಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾರಿನ ಹೊರ ಭಾಗದಲ್ಲಿ ಹೇಗೆ ಹೂವುಗಳನ್ನು ಅಲಂಕಾರ ಮಾಡುತ್ತಾರೋ ಹಾಗೆಯೇ ಜೆಸಿಬಿಗೆ ಹೂವಿನ ಅಲಂಕಾರವನ್ನು ಮಾಡಿ ವರನ ಉಡುಗೆ ತೊಟ್ಟು ಮಂಟಪಕ್ಕೆ ಬಂದಿದ್ದಾರೆ.

ಮದುವೆಯ ಬಳಿಕ ಪತ್ನಿಯನ್ನು ಅಲಂಕೃತ ಜೆಸಿಬಿಯಲ್ಲಿ ಕೂರಿಸಿಕೊಂಡು ಬಂದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

andolanait

Share
Published by
andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago