ಎಡಿಟೋರಿಯಲ್

ರೂಪಾಯಿ ಮೌಲ್ಯ ಕುಸಿತದಿಂದ ಆರ್ಥಿಕತೆ ಮೇಲಾಗುವ ದುಷ್ಪರಿಣಾಮಗಳು

ದೇಶದ ಚಾಲ್ತಿ ಖಾತೆ ಕೊರತೆ, ವ್ಯಾಪಾರ ಕೊರತೆ ಮತ್ತು ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ, ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ಪ್ರಮಾಣವೂ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಆರ್ಥಿಕ ಸಂಕಷ್ಟಗಳು ಅಪ್ಪಳಿಸುವ ಮುನ್ಸೂಚನೆಯಾಗಿದೆ. ಈಗಾಗಲೇ ಏರುಹಾದಿಯಲ್ಲಿರುವ ಹಣದುಬ್ಬರ ಮತ್ತಷ್ಟು ಏರಿಕೆಯಾಗಬಹುದು.

ರೂಪಾಯಿ ಡಾಲರ್ ವಿರುದ್ಧ ೮೦ ರೂಪಾಯಿ ಗಡಿ ದಾಟಿದಾಗಲೇ ಅಪಾಯದ ಗಂಟೆ ಬಾರಿಸಿತ್ತು. ಈಗ ಅದು ೮೧ ರೂಪಾಯಿ ಗಡಿದಾಟಿ ೮೧.೨೩ ರೂಪಾಯಿಗಳ ಆಜುಬಾಜಿನಲ್ಲಿ ವಹಿವಾಟಾಗುತ್ತಿದೆ. ಬರುವ ದಿನಗಳಲ್ಲಿ ೮೨ ರೂಪಾಯಿ ಗಡಿದಾಟಲಿದೆ ಎಂಬುದು ಮಾರುಕಟ್ಟೆ ತಜ್ಞರ ಅಂದಾಜು.
ಮೇಲ್ನೋಟಕ್ಕೆ ರೂಪಾಯಿ ಮೌಲ್ಯ ಕುಸಿತದಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರದು ಎಂಬ ನಂಬಿಕೆ ಇದೆ. ಅದಕ್ಕೆ ಕಾರಣ ರೂಪಾಯಿ ಅಪಮೌಲ್ಯದ ಬಗ್ಗೆ ಯಾರೂ ಹೆಚ್ಚಿನ ಗಮನ ಹರಿಸದೇ ಇರುವುದು, ಮತ್ತು ಬಹಳಷ್ಟು ಜನರಿಗೆ ಆರ್ಥಿಕತೆಯ ಬಗ್ಗೆ ನಿರಾಸಕ್ತಿ ಮತ್ತು ನಿರಕ್ಷರತೆಯೂ ಕಾರಣ.
ರೂಪಾಯಿ ಅಪಮೌಲ್ಯದಿಂದ ಜನರ ನಿತ್ಯ ಜೀವನದ ಮೇಲೆ ಖಂಡಿತ ವ್ಯತಿರಿಕ್ತ ಪರಿಣಾಮವಾಗುತ್ತದೆ. ಭಾರತದ ಆಮದು ಪ್ರಮಾಣ ರಫ್ತು ಪ್ರಮಾಣಕ್ಕಿಂತ ದುಪ್ಪಟ್ಟಿರುವುದರಿಂದಾಗಿ ರೂಪಾಯಿ ಮೌಲ್ಯ ಕುಸಿತ ಒಟ್ಟಾರೆ ಆರ್ಥಿಕತೆಯ ಮೇಲೂ ತೀವ್ರ ಪರಿಣಾಮ ಬೀರುತ್ತದೆ.

ನಿಧಾನಗತಿಯಲ್ಲಿ ನಿತ್ಯೋಪಯೋಗಿ ಸರಕುಗಳ ಬೆಲೆ ಏರುತ್ತಲೇ ಇದೆ. ಏರಿದ ಬೆಲೆ ಇಳಿದ ಉದಾಹರಣೆಗಳು ತೀರಾ ಅತ್ಯಲ್ಪ.   ಏರುತ್ತಿರುವ ಬೆಲೆಯಿಂದಾಗಿ ದೈನಂದಿನ ವೆಚ್ಚಗಳೂ ಏರುತ್ತಲೇ ಇರುತ್ತವೆ.  ಜನರ ಗಳಿಕೆ ಮಾತ್ರ ಏರುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಏರಿಕೆಯಾಗುತ್ತಿಲ್ಲ. ಇದರಿಂದಾಗಿ ಜನರ ಖರೀದಿ ಶಕ್ತಿ ನಿಧಾನಗತಿಯಲ್ಲಿ ಕುಸಿಯುತ್ತಿದೆ.

ಕಳೆದ ವರ್ಷ ಪ್ರತಿ ಕೆಜಿಗೆ ೫೦ ರೂಪಾಯಿ ಆಜುಬಾಜಿನಲ್ಲಿದ್ದ ಅಕ್ಕಿ ಬೆಲೆ ಈಗ ೬೦ ರೂಪಾಯಿಗೆ ಏರಿಕೆಯಾಗಿದೆ.  ಕಳೆದ ವರ್ಷ ಒಂದು ಸಾವಿರ ರೂಪಾಯಿಗೆ ೨೦ ಕೆಜಿ ಅಕ್ಕಿಯನ್ನು ಖರೀದಿಸಬಹುದಿತ್ತು. ಆದರೀಗ ಒಂದು ಸಾವಿರ ರೂಪಾಯಿ ಮೊತ್ತಕ್ಕೆ ೧೬ ಕೆಜಿಯಷ್ಟು ಮಾತ್ರ ಅಕ್ಕಿಯನ್ನು ಖರೀದಿಸಲು ಸಾಧ್ಯ. ಜನರ ಖರೀದಿ ಶಕ್ತಿ ಶೇ.೨೦ರಷ್ಟು ಕುಗ್ಗಿದಂತಾಗಿದೆ. ಅಕ್ಕಿ ಖರೀದಿಯು ಸಾಂಕೇತಿಕ ಉದಾಹರಣೆಯಷ್ಟೇ. ನಿತ್ಯೋಪಯೋಗಿ ವಸ್ತುಗಳು, ನೀರು, ವಿದ್ಯುತ್, ಡಿಟಿಎಚ್, ಮೊಬೈಲ್ ಶುಲ್ಕಗಳು ಸಹ ವರ್ಷದಿಂದ ವರ್ಷಕ್ಕೆ ಏರುತ್ತಲೇ ಇವೆ. ಆದರೆ, ಬೆಲೆ ಏರಿಕೆಗೆ ಪೂರಕವಾಗಿ ವೇತನವಾಗಲೀ, ಸಂಪಾದನೆಯಾಗಲಿ, ಗಳಿಕೆಯಾಗಲಿ ಹೆಚ್ಚಾಗುತ್ತಿಲ್ಲ.  ಹೀಗಾಗಿ ಜನರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ.

ಇದು ವೈಯಕ್ತಿಕ ನೆಲೆಯಲ್ಲಾಗುವ ಆರ್ಥಿಕ ದುಷ್ಪರಿಣಾಮ.
ರೂಪಾಯಿ ಮೌಲ್ಯ ಕುಸಿತ ದೇಶದ ಒಟ್ಟಾರೆ ಆರ್ಥಿಕತೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೂಪಾಯಿ ಮೌಲ್ಯ ಕುಸಿತ ಹೆಚ್ಚಿದಂತೆ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ತಮ್ಮ ಹೂಡಿಕೆಗಳನ್ನು ವಾಪಾಸು ಪಡೆಯುತ್ತಾರೆ. ಇದರ ಪರಿಣಾಮ ನೇರವಾಗಿ ಷೇರು ಮಾರುಕಟ್ಟೆ ಮತ್ತು ಹಣಕಾಸು ಮಾರುಕಟ್ಟೆ ಮೇಲಾಗುತ್ತದೆ. ಸಲೀಸಾಗಿ ಹರಿದು ಬರುತ್ತಿದ್ದ ಡಾಲರ್ ರೂಪದ ಹೂಡಿಕೆಯು ತಗ್ಗಿದರೆ, ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೂ ಒತ್ತಡ ಹೆಚ್ಚುತ್ತದೆ.

ರೂಪಾಯಿ ಕುಸಿತವನ್ನು ತಡೆಯುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಆಗಾಗ್ಗೆ ಮಾರುಕಟ್ಟೆ ಪ್ರವೇಶಿಸಿ ವಿದೇಶಿ ವಿನಿಮಯ ಮೀಸಲು ನಿಧಿಯಿಂದ ಡಾಲರ್‌ಗಳನ್ನು ಮಾರಾಟ ಮಾಡುತ್ತಿದೆ. ಆರ್‌ಬಿಐನ ಈ ಮಧ್ಯಪ್ರವೇಶದಿಂದ ರೂಪಾಯಿ ಕುಸಿತವು ತಾತ್ಕಾಲಿಕವಾಗಿ ನಿಲ್ಲುತ್ತದೆ. ಆದರೆ, ದೀರ್ಘಕಾಲದಲ್ಲಿ ರೂಪಾಯಿ ಮೌಲ್ಯ ಕುಸಿತ ತಡೆಯುವುದು ಸಾಧ್ಯವಾಗುವುದಿಲ್ಲ. ತಾತ್ಕಾಲಿಕವಾಗಿ ರೂಪಾಯಿ ಮೌಲ್ಯ ಕುಸಿತ ತಡೆಯುವ ಆರ್‌ಬಿಐ ಪ್ರಯತ್ನದಿಂದಾಗಿ ಈಗಾಗಲೇ ವಿದೇಶಿ ಮೀಸಲು ನಿಧಿ ದೊಡ್ಡ ಪ್ರಮಾಣದಲ್ಲಿ ಕರಗಿ ಹೋಗಿದೆ. ೨೦೨೨ ರಲ್ಲಿ ರೂಪಾಯಿ ಕುಸಿತ ತಡೆಯುವ ಸಲುವಾಗಿ ಆರ್‌ಬಿಐ ಸುಮಾರು ೮೩ ಬಿಲಿಯನ್ ಡಾಲರ್‌ಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ ೧೦ ಬಿಲಿಯನ್ ಡಾಲರ್ ಮಾರಾಟ ಮಾಡಿದೆ. ಸೆಪ್ಟೆಂಬರ್ ೯ ರಂದು ಇದ್ದಂತೆ ಭಾರತದ ವಿದೇಶಿ ವಿನಿಮಯ ಮೀಸಲು ನಿಧಿಯು ೫೫೦.೮ ಬಿಲಿಯನ್ ಡಾಲರ್‌ಗಳಿಗೆ ಕುಸಿದಿದೆ. ಕಳೆದ ವರ್ಷ ೬೪೨.೪ ಬಿಲಿಯನ್ ಡಾಲರ್‌ಗಳಷ್ಟಿತ್ತು.

ವಿದೇಶಿ ವಿನಿಮಯ ಮೀಸಲು ಕುಸಿತವು ನಮ್ಮ ಆರ್ಥಿಕತೆಯ ಕುಸಿತವನ್ನು ಸಂಕೇತಿಸುತ್ತದೆ. ಮೀಸಲು ಪ್ರಮಾಣ ಕುಸಿದಷ್ಟು ನಮ್ಮ ಆಮದು ಬಿಲ್ಲುಗಳನ್ನು ಪಾವತಿಸುವ ಸಾಮರ್ಥ್ಯವು ಕುಸಿಯುತ್ತದೆ. ನೆರೆಯ ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳು ದುಸ್ಥಿತಿ ತಲುಪಿರುವುದು ವಿದೇಶಿ ವಿನಿಮಯ ಮೀಸಲು ನಿಧಿ ಶೂನ್ಯ ಮಟ್ಟಕ್ಕೆ ತಲುಪಿರುವುದರಿಂದಲೇ. ಭಾರತದ ಪರಿಸ್ಥಿತಿ ನೆರೆಯ ದೇಶಗಳಷ್ಟು ಹೀನಾಯವಾಗಿಲ್ಲ. ಆದರೆ, ಮೀಸಲು ನಿಧಿಯ ಕುಸಿತದ ವೇಗ ಮಾತ್ರ ಆತಂಕ ತರುವಂತಾದ್ದು.

ರೂಪಾಯಿ ಮೂಲಕವೇ ರಷ್ಯಾದೊಂದಿಗೆ ವ್ಯವಹಾರ ನಡೆಸುವ ನಿಟ್ಟಿನಲ್ಲಿ ನಡೆದಿರುವ ಪ್ರಯತ್ನಗಳು ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲಿನ ಒತ್ತಡವನ್ನು ತಗ್ಗಿಸುತ್ತವೆ. ರಷ್ಯಾದೊಂದಿಗೆ ವ್ಯಾಪಾರ ನಡೆಸುವುದರಿಂದ ದೀರ್ಘಕಾಲದಲ್ಲಿ ಆಗುವ ವ್ಯತಿರಿಕ್ತ ಪರಿಣಾಮಗಳನ್ನೂ ನಾವು ಗಮನದಲ್ಲಿಟ್ಟುಕೊಂಡು ಮುಂದಡಿ ಇಡಬೇಕಿದೆ.

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

3 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

3 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

4 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

4 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

4 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

4 hours ago