ಎಡಿಟೋರಿಯಲ್

ಓದುಗರ ಪತ್ರ : 07 ಬುಧವಾರ 2022

ಬುದ್ಧ ಧಮ್ಮ ಕೇಂದ್ರ ಮುಂಭಾಗದ ಬಾರ್‌ನಿಂದ ಸಮಸ್ಯೆ

ಯಳಂದೂರು ತಾಲ್ಲೂಕು ಕೇಂದ್ರದ ಹೃದುಂ ಭಾಗದಲ್ಲಿರುವ ಬುದ್ಧ ಧಮ್ಮ ಧ್ಯಾನ ಕೇಂದ್ರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆ ಮತ್ತು ಭವನವಿರುವ ಸ್ಥಳದ ಮುಂಭಾಗದಲ್ಲಿ ಎಸ್‌ಜಿಆರ್ ಬಾರ್ ಅಂಡ್ ರೆಸ್ಟೋರೆಂಟ್‌ನಿಂದಾಗಿ ಅಂಬೇಡ್ಕರ್ ಭವನ ಹಾಗೂ ಅವರ ಪ್ರತಿಮೆಯ ಅಕ್ಕ-ಪಕ್ಕದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಮದ್ಯಸನಿಗಳು ಮದ್ಯದ ಬಾಟಲಿ, ಸೇವಿಸಿದ ಮಾಂಸಹಾರದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬೀಸಾಡಿ ಪರಿಸರವನ್ನು ಹಾಳುವಾಡುತ್ತಿದ್ದಾರೆ. ಈ ಮದ್ಯ ವ್ಯಸನಿಗಳಿಂದಾಗಿ ವಿದ್ಯಾರ್ಥಿಗಳಿಗೆ, ಮಹಿಳೆುಂರಿಗೆ, ಆಟೋ ಚಾಲಕರು ಸೇರದಂತೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಧ್ಯಾನ ಕೇಂದ್ರಕ್ಕೆ ಬರುವ ಬುದ್ಧನ ಅನುಾಂಯಿಗಳಿಗೆ ಹಾಗೂ ಅಂಬೇಡ್ಕರ್ ಅಭಿವಾನಿಗಳಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಎಸ್‌ಜಿಆರ್ ಬಾರ್ ಅನ್ನು ತೆರವುಗೊಳಿಸಿ ಇಲ್ಲಿನ ಪರಿಸರವನ್ನು ಕಾಪಾಡಬೇಕಾಗಿದೆ.

-ಎಸ್.ಸುಂದರ ಕಲಿವೀರ್, ಸಂಚಾಲಕ, ವಾನವ ಬಂಧುತ್ವ ವೇದಿಕೆ, ುಂಳಂದೂರು.


‘ಜಾನಪದ ನಾಡು ಚಾಮರಾಜನಗರಕ್ಕೆ ಸುಸ್ವಾಗತ’ ಎಂಬುದು ಸೂಕ್ತ

ಚಾಮರಾಜನಗರದ ಎಲ್ಲಾ ಕಮಾನು ಗೇಟ್‌ಗಳಲ್ಲಿ ನಗರಸಭೆಯವರು ‘ಜಾನಪದ ಕಲೆಗಳ ತವರೂರು’ ಎಂದು ಬರೆಸಿ ಹಾಕುತ್ತಿರುವುದು ಸಂತೋಷದ ಸಂಗತಿ. ಆದರೆ ಶೀರ್ಷಿಕೆುಂಲ್ಲಿ ಸ್ವಲ್ಪ ಬದಲಾವಣೆ ಮಾಡಿ ‘ಜಾನಪದ ನಾಡು ಚಾಮರಾಜನಗರಕ್ಕೆ ಸುಸ್ವಾಗತ’ ಎಂದೋ ಅಥವಾ ‘ಜಾನಪದ ತವರು ಚಾಮರಾಜನಗರಕ್ಕೆ ಸುಸ್ವಾಗತ’ ಎಂದು ಬರೆಸಿದರೆ ಶೀರ್ಷಿಕೆ ಅರ್ಥ ಪೂರ್ಣವಾಗುತ್ತದೆ.

ಜನಪದ ಎಂದರೆ ಒಂದು ಸಮುದಾಯ, ಜನರ ಗುಂಪು ಎಂದು ಅರ್ಥ ನೀಡುತ್ತದೆ ಅದೇ, ಜಾನಪದ ಎಂಬುದು ಇಡೀ ಸಮುದಾಯ ಒಳಗೊಂಡಿರುವ ಕಲೆ, ಸಾಹಿತ್ಯ, ಮಹಾಕಾವ್ಯ, ನಂಬಿಕೆ, ಸಂಪ್ರದಾಯ, ಆಚಾರ, ಪರಂಪರೆ, ಸಂಸ್ಕೃತಿ, ಜೀವನ ಕ್ರಮ, ಬುಡಕಟ್ಟು ಜೀವನ ಮತ್ತು ಎಲ್ಲಾ ರೀತಿಯ ಜನರ ಜೀವನ ವ್ಯವಸ್ಥೆಯನ್ನು ಒಳಗೊಳ್ಳುತ್ತದೆ. ಹಾಗಾಗಿ ಜಾನಪದ ತವರು, ಜಾನಪದ ನಾಡು ಎಂಬ ಶೀರ್ಷಿಕೆ ಸೂಕ್ತವಾಗಿರುತ್ತದೆ.

– ಡಾ.ಶಿವರಾಮ್ ಅಂಶಿ, ಚಾಮರಾಜನಗರ.


‘ಚಿರತೆ ಹಾವಳಿ; ಇರಲಿ ಜಾಗೃತಿ’

ಇತ್ತೀಚಿನ ದಿನಗಳಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾರ್ವಜನಿಕರು ಭಯಭೀತರಾಗಿ, ಆತಂಕದಲ್ಲಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ಗ್ರಾಮೀಣ ಭಾಗದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ, ರೈತರು ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಕೂಲಿ ಕಾರ್ಮಿಕರು ಇದರ ಹಾವಳಿಯಿಂದ ಹೆದರಿ ಕೂಲಿಗೆ ತೆರಳದೆ ಪರದಾಡುತ್ತಿದ್ದಾರೆ.

ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ನಾಯಿ, ಕೋಳಿ, ಹಸು, ಮನುಷ್ಯನ ಮಾಂಸದ ರುಚಿಯನ್ನು ಸವಿದಿರುವ ಚಿರತೆಯ ಹಾವಳಿ ವಿಪರೀತವಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಕೂಡ ಅತ್ಯಂತ ಜಾಗರೂಕತೆಯಿಂದ ಇರಬೇಕು. ಮತ್ತೆ ಮನುಷ್ಯರ ಪ್ರಾಣಕ್ಕೆ ತೊಂದರೆಯಾಗುವ ಮೊದಲೇ ಅಧಿಕಾರಿ ವರ್ಗದವರು ಚಿರತೆಯನ್ನು ಸೆರೆ ಹಿಡಿಯಲು ಕ್ರಮಕೈಗೊಳ್ಳಬೇಕು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.


ಮತದಾರರ ಪಟ್ಟಿ ಹೆಸರು ನಾಪತ್ತೆ ಆತಂಕಕಾರಿ

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾದ ಮತದಾರರ ಹೆಸರು ಕಾಣೆಾಂದ ವಾದರಿುಂಂತೆ ಇದೀಗ ಮೈಸೂರು ಜಿಲ್ಲೆುಂಲ್ಲೂ ಅದೇ ರೀತಿಯ ಹಗರಣ ಬೆಳಕಿಗೆ ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ೧,೪೫,೯೦೮ ಮತದಾರರ ಹೆಸರು ಚುನಾವಣೆ ಪಟ್ಟಿಯಿಂದ ಕಾಣೆಯಾಗಿರುವುದು ಆತಂಕವನ್ನುಂಟು ಮಾಡಿದೆ.

ವಿಧಾನಸಭೆ ಚುನಾವಣೆ ಹತ್ತಿರವಿರುವುದರಿಂದ ಇಂತಹ ಪ್ರಕರಣಗಳು ರಾಜ್ಯವ್ಯಾಪಿ ಹರಡುವ ಮುನ್ನ ಕಾಣೆಯಾಗಿರುವ ಹೆಸರುಗಳನ್ನು ಪರಿಶೀಲನೆ ಕೂಡಲೇ ಮರುಸೇರ್ಪಡೆಗೊಳಿಸಬೇಕು. ಜೊತೆಗೆ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಚುನಾವಣಾ ಆಯುಕ್ತರು ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
————————–

andolana

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

10 mins ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

1 hour ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

2 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

2 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

3 hours ago