ಎಡಿಟೋರಿಯಲ್

ಓದುಗರ ಪತ್ರ : 07 ಬುಧವಾರ 2022

ಬುದ್ಧ ಧಮ್ಮ ಕೇಂದ್ರ ಮುಂಭಾಗದ ಬಾರ್‌ನಿಂದ ಸಮಸ್ಯೆ

ಯಳಂದೂರು ತಾಲ್ಲೂಕು ಕೇಂದ್ರದ ಹೃದುಂ ಭಾಗದಲ್ಲಿರುವ ಬುದ್ಧ ಧಮ್ಮ ಧ್ಯಾನ ಕೇಂದ್ರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆ ಮತ್ತು ಭವನವಿರುವ ಸ್ಥಳದ ಮುಂಭಾಗದಲ್ಲಿ ಎಸ್‌ಜಿಆರ್ ಬಾರ್ ಅಂಡ್ ರೆಸ್ಟೋರೆಂಟ್‌ನಿಂದಾಗಿ ಅಂಬೇಡ್ಕರ್ ಭವನ ಹಾಗೂ ಅವರ ಪ್ರತಿಮೆಯ ಅಕ್ಕ-ಪಕ್ಕದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಮದ್ಯಸನಿಗಳು ಮದ್ಯದ ಬಾಟಲಿ, ಸೇವಿಸಿದ ಮಾಂಸಹಾರದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬೀಸಾಡಿ ಪರಿಸರವನ್ನು ಹಾಳುವಾಡುತ್ತಿದ್ದಾರೆ. ಈ ಮದ್ಯ ವ್ಯಸನಿಗಳಿಂದಾಗಿ ವಿದ್ಯಾರ್ಥಿಗಳಿಗೆ, ಮಹಿಳೆುಂರಿಗೆ, ಆಟೋ ಚಾಲಕರು ಸೇರದಂತೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಧ್ಯಾನ ಕೇಂದ್ರಕ್ಕೆ ಬರುವ ಬುದ್ಧನ ಅನುಾಂಯಿಗಳಿಗೆ ಹಾಗೂ ಅಂಬೇಡ್ಕರ್ ಅಭಿವಾನಿಗಳಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಎಸ್‌ಜಿಆರ್ ಬಾರ್ ಅನ್ನು ತೆರವುಗೊಳಿಸಿ ಇಲ್ಲಿನ ಪರಿಸರವನ್ನು ಕಾಪಾಡಬೇಕಾಗಿದೆ.

-ಎಸ್.ಸುಂದರ ಕಲಿವೀರ್, ಸಂಚಾಲಕ, ವಾನವ ಬಂಧುತ್ವ ವೇದಿಕೆ, ುಂಳಂದೂರು.


‘ಜಾನಪದ ನಾಡು ಚಾಮರಾಜನಗರಕ್ಕೆ ಸುಸ್ವಾಗತ’ ಎಂಬುದು ಸೂಕ್ತ

ಚಾಮರಾಜನಗರದ ಎಲ್ಲಾ ಕಮಾನು ಗೇಟ್‌ಗಳಲ್ಲಿ ನಗರಸಭೆಯವರು ‘ಜಾನಪದ ಕಲೆಗಳ ತವರೂರು’ ಎಂದು ಬರೆಸಿ ಹಾಕುತ್ತಿರುವುದು ಸಂತೋಷದ ಸಂಗತಿ. ಆದರೆ ಶೀರ್ಷಿಕೆುಂಲ್ಲಿ ಸ್ವಲ್ಪ ಬದಲಾವಣೆ ಮಾಡಿ ‘ಜಾನಪದ ನಾಡು ಚಾಮರಾಜನಗರಕ್ಕೆ ಸುಸ್ವಾಗತ’ ಎಂದೋ ಅಥವಾ ‘ಜಾನಪದ ತವರು ಚಾಮರಾಜನಗರಕ್ಕೆ ಸುಸ್ವಾಗತ’ ಎಂದು ಬರೆಸಿದರೆ ಶೀರ್ಷಿಕೆ ಅರ್ಥ ಪೂರ್ಣವಾಗುತ್ತದೆ.

ಜನಪದ ಎಂದರೆ ಒಂದು ಸಮುದಾಯ, ಜನರ ಗುಂಪು ಎಂದು ಅರ್ಥ ನೀಡುತ್ತದೆ ಅದೇ, ಜಾನಪದ ಎಂಬುದು ಇಡೀ ಸಮುದಾಯ ಒಳಗೊಂಡಿರುವ ಕಲೆ, ಸಾಹಿತ್ಯ, ಮಹಾಕಾವ್ಯ, ನಂಬಿಕೆ, ಸಂಪ್ರದಾಯ, ಆಚಾರ, ಪರಂಪರೆ, ಸಂಸ್ಕೃತಿ, ಜೀವನ ಕ್ರಮ, ಬುಡಕಟ್ಟು ಜೀವನ ಮತ್ತು ಎಲ್ಲಾ ರೀತಿಯ ಜನರ ಜೀವನ ವ್ಯವಸ್ಥೆಯನ್ನು ಒಳಗೊಳ್ಳುತ್ತದೆ. ಹಾಗಾಗಿ ಜಾನಪದ ತವರು, ಜಾನಪದ ನಾಡು ಎಂಬ ಶೀರ್ಷಿಕೆ ಸೂಕ್ತವಾಗಿರುತ್ತದೆ.

– ಡಾ.ಶಿವರಾಮ್ ಅಂಶಿ, ಚಾಮರಾಜನಗರ.


‘ಚಿರತೆ ಹಾವಳಿ; ಇರಲಿ ಜಾಗೃತಿ’

ಇತ್ತೀಚಿನ ದಿನಗಳಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾರ್ವಜನಿಕರು ಭಯಭೀತರಾಗಿ, ಆತಂಕದಲ್ಲಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ಗ್ರಾಮೀಣ ಭಾಗದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ, ರೈತರು ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಕೂಲಿ ಕಾರ್ಮಿಕರು ಇದರ ಹಾವಳಿಯಿಂದ ಹೆದರಿ ಕೂಲಿಗೆ ತೆರಳದೆ ಪರದಾಡುತ್ತಿದ್ದಾರೆ.

ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ನಾಯಿ, ಕೋಳಿ, ಹಸು, ಮನುಷ್ಯನ ಮಾಂಸದ ರುಚಿಯನ್ನು ಸವಿದಿರುವ ಚಿರತೆಯ ಹಾವಳಿ ವಿಪರೀತವಾಗಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಕೂಡ ಅತ್ಯಂತ ಜಾಗರೂಕತೆಯಿಂದ ಇರಬೇಕು. ಮತ್ತೆ ಮನುಷ್ಯರ ಪ್ರಾಣಕ್ಕೆ ತೊಂದರೆಯಾಗುವ ಮೊದಲೇ ಅಧಿಕಾರಿ ವರ್ಗದವರು ಚಿರತೆಯನ್ನು ಸೆರೆ ಹಿಡಿಯಲು ಕ್ರಮಕೈಗೊಳ್ಳಬೇಕು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.


ಮತದಾರರ ಪಟ್ಟಿ ಹೆಸರು ನಾಪತ್ತೆ ಆತಂಕಕಾರಿ

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾದ ಮತದಾರರ ಹೆಸರು ಕಾಣೆಾಂದ ವಾದರಿುಂಂತೆ ಇದೀಗ ಮೈಸೂರು ಜಿಲ್ಲೆುಂಲ್ಲೂ ಅದೇ ರೀತಿಯ ಹಗರಣ ಬೆಳಕಿಗೆ ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ೧,೪೫,೯೦೮ ಮತದಾರರ ಹೆಸರು ಚುನಾವಣೆ ಪಟ್ಟಿಯಿಂದ ಕಾಣೆಯಾಗಿರುವುದು ಆತಂಕವನ್ನುಂಟು ಮಾಡಿದೆ.

ವಿಧಾನಸಭೆ ಚುನಾವಣೆ ಹತ್ತಿರವಿರುವುದರಿಂದ ಇಂತಹ ಪ್ರಕರಣಗಳು ರಾಜ್ಯವ್ಯಾಪಿ ಹರಡುವ ಮುನ್ನ ಕಾಣೆಯಾಗಿರುವ ಹೆಸರುಗಳನ್ನು ಪರಿಶೀಲನೆ ಕೂಡಲೇ ಮರುಸೇರ್ಪಡೆಗೊಳಿಸಬೇಕು. ಜೊತೆಗೆ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಚುನಾವಣಾ ಆಯುಕ್ತರು ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
————————–

andolana

Recent Posts

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

4 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

29 mins ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

37 mins ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

2 hours ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

3 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

4 hours ago