ಎಡಿಟೋರಿಯಲ್

ಓದುಗರಿಗೆ ಓಗೊಟ್ಟರು : 13 ಶುಕ್ರವಾರ 2023

ಚರಂಡಿ ನೀರು ನಿಲ್ಲುತ್ತಿದ್ದ ರಸ್ತೆಗೆ ಹೊಸ ಪೈಪ್ ಲೈನ್

ಮೈಸೂರು: ಯುಜಿಡಿ ಸಮಸ್ಯೆಯಿಂದ ಚರಂಡಿಯ ನೀರು ನಿಂತು ದುರ್ವಾಸನೆ ಬೀರುತ್ತಿದ್ದ ರಸ್ತೆಗೆ ಹೊಸ ಪೈಪ್‌ಲೈನ್ ಅಳವಡಿಸುವ ಮೂಲಕ ಶುಚಿತ್ವ ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ನಡೆದರೆ ಸಮಸ್ಯೆ ಬಗೆಹರಿಯಲಿದೆ ಎಂದು ನಗರಪಾಲಿಕೆ ಸದಸ್ಯರಾದ ಶೋಭಾ ಸುನಿಲ್ ಭರವಸೆ ನೀಡಿದರು.

‘ಆಂದೋಲನ’ ದಿನಪತ್ರಿಕೆಯಲ್ಲಿ ಜ.11ರಂದು ‘ಸುಗಮ ಸಂಚಾರಕ್ಕೆ ರಸ್ತೆ ಸರಿಪಡಿಸಿ’ ಶೀರ್ಷಿಕೆಯಡಿ ಪ್ರಕಟವಾಗಿರುವ ಓದುಗರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಶೋಭಾ ಸುನಿಲ್ ಅವರು, ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರಣ್ಯಪುರಂನ 4ನೇ ಮುಖ್ಯ ರಸ್ತೆ, 9ನೇ ಅಡ್ಡರಸ್ತೆಯಲ್ಲಿ ಚರಂಡಿ ನೀರು ನಿಂತು ಸಾರ್ವಜನಿಕರು ಬಹಳಷ್ಟು ತೊಂದರೆ ಅನುಭವಿ ಸುತ್ತಿದ್ದುದನ್ನು ಕಂಡು ಮುತುವರ್ಜಿ ವಹಿಸಿ ಯುಜಿಡಿ ಸಮಸ್ಯೆ ಬಗೆಹರಿಸಿ, ಹೊಸ ಪೈಪ್ ಲೈನ್ ಅಳವಡಿಸಲಾಗಿದೆ. ಮಣ್ಣಿನ ಗುಂಡಿಗಳನ್ನು ಸಮತಟ್ಟುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸ್ವತಃ ನಾನೇ ಸ್ಥಳಕ್ಕೆ ಹೋಗಿ ದೂಳು ಬಾರದಂತೆ ನೀರು ಸಿಂಪಡಿಸಿದ್ದೇನೆ.ರಸ್ತೆ ಡಾಂಬರೀಕರಣ ಕಾಮಗಾರಿ ನಡೆದರೆ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago