ಓದುಗರ ಪತ್ರ

ಓದುಗರ ಪತ್ರ | 2027ರ ವಿಶ್ವಕಪ್‌ನಲ್ಲೂ ಗೆಲುವು ನಮ್ಮದಾಗಲಿ

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್‌ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ ಭಾರತ ಹಲವು ಬಾರಿ ಫೈನಲ್ ತಲುಪಿರುವುದು ಹೆಮ್ಮೆಯ ವಿಚಾರ. ಅದರಲ್ಲಿಯೂ ಟಿ-೨೦ ವಿಶ್ವಕಪ್‌ನಲ್ಲಿ ಗೆಲುವು ಸಾಽಸಿತ್ತು. ಈಗ ಚಾಂಪಿಯನ್ ಟ್ರೋಫಿಯನ್ನೂ ಗೆಲ್ಲುವ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಮೊದಲ ತಂಡ ಅನಿಸಿಕೊಂಡಿದೆ. ‌

ಈ ಪಂದ್ಯಾವಳಿಯಲ್ಲಿ ಭಾರತ ಯಾವುದೇ ಪಂದ್ಯವನ್ನೂ ಸೋಲದೆ, ಫೈನಲ್ ತಲುಪಿ ಗೆಲುವು ಸಾಧಿಸಿರುವುದು ಹೆಮ್ಮೆಯ ವಿಚಾರ. ಫೈನಲ್‌ನಲ್ಲಿ ನಾಯಕ ರೋಹಿತ್ ಶರ್ಮರ ಸ್ಛೋಟಕ ಆರಂಭ, ಕನ್ನಡಿಗ ಕೆ.ಎಲ್.ರಾಹುಲ್‌ರವರ ವಿಕೆಟ್ ಕೀಪಿಂಗ್ ಹಾಗೂ ಸಮಯೋಚಿತ ಬ್ಯಾಟಿಂಗ್‌ನಿಂದ ಭಾರತ ತಂಡ ಗೆಲುವಿನ ದಡ ಸೇರಿತು. ಅಲ್ಲದೆ ಸ್ಪಿನ್ ಬೌಲರ‍್ಸ್‌ಗಳಾದ ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್‌ರವರ ಉತ್ತಮ ಪ್ರದರ್ಶನವೂ ತಂಡದ ಗೆಲುವಿಗೆ ಕಾರಣವಾಯಿತು.

ಪಂದ್ಯಾವಳಿಯಲ್ಲಿ ಇಡೀ ತಂಡದ ಕೊಡುಗೆಯನ್ನು ಮರೆಯುವಂತಿಲ್ಲ. ಈ ಗೆಲುವಿನ ನಾಗಾಲೋಟ ೨೦೨೭ರ ಏಕದಿನ ವಿಶ್ವಕಪ್‌ನಲ್ಲೂ ಮುಂದುವರಿಯಲಿ ಎಂಬುದು ಭಾರತೀಯರ ಕನಸು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

4 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

4 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

4 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

4 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

5 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

5 hours ago