ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ ಭಾರತ ಹಲವು ಬಾರಿ ಫೈನಲ್ ತಲುಪಿರುವುದು ಹೆಮ್ಮೆಯ ವಿಚಾರ. ಅದರಲ್ಲಿಯೂ ಟಿ-೨೦ ವಿಶ್ವಕಪ್ನಲ್ಲಿ ಗೆಲುವು ಸಾಽಸಿತ್ತು. ಈಗ ಚಾಂಪಿಯನ್ ಟ್ರೋಫಿಯನ್ನೂ ಗೆಲ್ಲುವ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಮೊದಲ ತಂಡ ಅನಿಸಿಕೊಂಡಿದೆ.
ಈ ಪಂದ್ಯಾವಳಿಯಲ್ಲಿ ಭಾರತ ಯಾವುದೇ ಪಂದ್ಯವನ್ನೂ ಸೋಲದೆ, ಫೈನಲ್ ತಲುಪಿ ಗೆಲುವು ಸಾಧಿಸಿರುವುದು ಹೆಮ್ಮೆಯ ವಿಚಾರ. ಫೈನಲ್ನಲ್ಲಿ ನಾಯಕ ರೋಹಿತ್ ಶರ್ಮರ ಸ್ಛೋಟಕ ಆರಂಭ, ಕನ್ನಡಿಗ ಕೆ.ಎಲ್.ರಾಹುಲ್ರವರ ವಿಕೆಟ್ ಕೀಪಿಂಗ್ ಹಾಗೂ ಸಮಯೋಚಿತ ಬ್ಯಾಟಿಂಗ್ನಿಂದ ಭಾರತ ತಂಡ ಗೆಲುವಿನ ದಡ ಸೇರಿತು. ಅಲ್ಲದೆ ಸ್ಪಿನ್ ಬೌಲರ್ಸ್ಗಳಾದ ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ರವರ ಉತ್ತಮ ಪ್ರದರ್ಶನವೂ ತಂಡದ ಗೆಲುವಿಗೆ ಕಾರಣವಾಯಿತು.
ಪಂದ್ಯಾವಳಿಯಲ್ಲಿ ಇಡೀ ತಂಡದ ಕೊಡುಗೆಯನ್ನು ಮರೆಯುವಂತಿಲ್ಲ. ಈ ಗೆಲುವಿನ ನಾಗಾಲೋಟ ೨೦೨೭ರ ಏಕದಿನ ವಿಶ್ವಕಪ್ನಲ್ಲೂ ಮುಂದುವರಿಯಲಿ ಎಂಬುದು ಭಾರತೀಯರ ಕನಸು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…