ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ ಭಾರತ ಹಲವು ಬಾರಿ ಫೈನಲ್ ತಲುಪಿರುವುದು ಹೆಮ್ಮೆಯ ವಿಚಾರ. ಅದರಲ್ಲಿಯೂ ಟಿ-೨೦ ವಿಶ್ವಕಪ್ನಲ್ಲಿ ಗೆಲುವು ಸಾಽಸಿತ್ತು. ಈಗ ಚಾಂಪಿಯನ್ ಟ್ರೋಫಿಯನ್ನೂ ಗೆಲ್ಲುವ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಮೊದಲ ತಂಡ ಅನಿಸಿಕೊಂಡಿದೆ.
ಈ ಪಂದ್ಯಾವಳಿಯಲ್ಲಿ ಭಾರತ ಯಾವುದೇ ಪಂದ್ಯವನ್ನೂ ಸೋಲದೆ, ಫೈನಲ್ ತಲುಪಿ ಗೆಲುವು ಸಾಧಿಸಿರುವುದು ಹೆಮ್ಮೆಯ ವಿಚಾರ. ಫೈನಲ್ನಲ್ಲಿ ನಾಯಕ ರೋಹಿತ್ ಶರ್ಮರ ಸ್ಛೋಟಕ ಆರಂಭ, ಕನ್ನಡಿಗ ಕೆ.ಎಲ್.ರಾಹುಲ್ರವರ ವಿಕೆಟ್ ಕೀಪಿಂಗ್ ಹಾಗೂ ಸಮಯೋಚಿತ ಬ್ಯಾಟಿಂಗ್ನಿಂದ ಭಾರತ ತಂಡ ಗೆಲುವಿನ ದಡ ಸೇರಿತು. ಅಲ್ಲದೆ ಸ್ಪಿನ್ ಬೌಲರ್ಸ್ಗಳಾದ ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ರವರ ಉತ್ತಮ ಪ್ರದರ್ಶನವೂ ತಂಡದ ಗೆಲುವಿಗೆ ಕಾರಣವಾಯಿತು.
ಪಂದ್ಯಾವಳಿಯಲ್ಲಿ ಇಡೀ ತಂಡದ ಕೊಡುಗೆಯನ್ನು ಮರೆಯುವಂತಿಲ್ಲ. ಈ ಗೆಲುವಿನ ನಾಗಾಲೋಟ ೨೦೨೭ರ ಏಕದಿನ ವಿಶ್ವಕಪ್ನಲ್ಲೂ ಮುಂದುವರಿಯಲಿ ಎಂಬುದು ಭಾರತೀಯರ ಕನಸು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…