ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ ಭಾರತ ಹಲವು ಬಾರಿ ಫೈನಲ್ ತಲುಪಿರುವುದು ಹೆಮ್ಮೆಯ ವಿಚಾರ. ಅದರಲ್ಲಿಯೂ ಟಿ-೨೦ ವಿಶ್ವಕಪ್ನಲ್ಲಿ ಗೆಲುವು ಸಾಽಸಿತ್ತು. ಈಗ ಚಾಂಪಿಯನ್ ಟ್ರೋಫಿಯನ್ನೂ ಗೆಲ್ಲುವ ಮೂಲಕ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಮೊದಲ ತಂಡ ಅನಿಸಿಕೊಂಡಿದೆ.
ಈ ಪಂದ್ಯಾವಳಿಯಲ್ಲಿ ಭಾರತ ಯಾವುದೇ ಪಂದ್ಯವನ್ನೂ ಸೋಲದೆ, ಫೈನಲ್ ತಲುಪಿ ಗೆಲುವು ಸಾಧಿಸಿರುವುದು ಹೆಮ್ಮೆಯ ವಿಚಾರ. ಫೈನಲ್ನಲ್ಲಿ ನಾಯಕ ರೋಹಿತ್ ಶರ್ಮರ ಸ್ಛೋಟಕ ಆರಂಭ, ಕನ್ನಡಿಗ ಕೆ.ಎಲ್.ರಾಹುಲ್ರವರ ವಿಕೆಟ್ ಕೀಪಿಂಗ್ ಹಾಗೂ ಸಮಯೋಚಿತ ಬ್ಯಾಟಿಂಗ್ನಿಂದ ಭಾರತ ತಂಡ ಗೆಲುವಿನ ದಡ ಸೇರಿತು. ಅಲ್ಲದೆ ಸ್ಪಿನ್ ಬೌಲರ್ಸ್ಗಳಾದ ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ರವರ ಉತ್ತಮ ಪ್ರದರ್ಶನವೂ ತಂಡದ ಗೆಲುವಿಗೆ ಕಾರಣವಾಯಿತು.
ಪಂದ್ಯಾವಳಿಯಲ್ಲಿ ಇಡೀ ತಂಡದ ಕೊಡುಗೆಯನ್ನು ಮರೆಯುವಂತಿಲ್ಲ. ಈ ಗೆಲುವಿನ ನಾಗಾಲೋಟ ೨೦೨೭ರ ಏಕದಿನ ವಿಶ್ವಕಪ್ನಲ್ಲೂ ಮುಂದುವರಿಯಲಿ ಎಂಬುದು ಭಾರತೀಯರ ಕನಸು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…