ಹೊಸದಿಲ್ಲಿಯ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ನಡೆಸುವುದಾಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರ ಮನೆಯಲ್ಲಿ ಇಷ್ಟು ಪ್ರಮಾಣದ ಹಣ ಬರಲು ಹೇಗೆ ಸಾಧ್ಯ? ಈ ಹಣ ಯಾವ ಮೂಲದಿಂದ ಬಂದಿದೆ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಇದರ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕಿದೆ.
ಪ್ರಸ್ತುತ ದಿನಗಳಲ್ಲಿ ಜನರಿಗೆ ನ್ಯಾಯಾಂಗ ವ್ಯವಸ್ಥೆ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಅಂತಹದ್ದರಲ್ಲಿ ಇಂತಹ ಪ್ರಕರಣಗಳು ಜನರು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತವೆ. ಆದ್ದರಿಂದ ಸರ್ಕಾರ ಇದುವರೆಗೂ ಈ ನ್ಯಾಯಾಧೀಶರು ನೀಡಿರುವ ಎಲ್ಲ ತೀರ್ಪುಗಳನ್ನೂ ಮರು ತನಿಖೆಗೆ ಒಳಪಡಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಸಾರ್ವಜನಿಕರು ಗೌರವ ಮತ್ತು ವಿಶ್ವಾಸ ಹೊಂದಿರುವ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಭ್ರಷ್ಟ್ರಾಚಾರ ಹೆಚ್ಚಾದರೆ ಜನ ಇನ್ನಾರ ಬಳಿ ನ್ಯಾಯ ಕೇಳಬೇಕು? ಈ ಪ್ರಕರಣ ನ್ಯಾಯಾಂಗ ವ್ಯವಸ್ಥೆಗೇ ಕಪ್ಪು ಚುಕ್ಕೆ ಇಟ್ಟಂತಾಗಿದೆ.
–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…