ಹೊಸದಿಲ್ಲಿಯ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ನಡೆಸುವುದಾಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರ ಮನೆಯಲ್ಲಿ ಇಷ್ಟು ಪ್ರಮಾಣದ ಹಣ ಬರಲು ಹೇಗೆ ಸಾಧ್ಯ? ಈ ಹಣ ಯಾವ ಮೂಲದಿಂದ ಬಂದಿದೆ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಇದರ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕಿದೆ.
ಪ್ರಸ್ತುತ ದಿನಗಳಲ್ಲಿ ಜನರಿಗೆ ನ್ಯಾಯಾಂಗ ವ್ಯವಸ್ಥೆ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಅಂತಹದ್ದರಲ್ಲಿ ಇಂತಹ ಪ್ರಕರಣಗಳು ಜನರು ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತವೆ. ಆದ್ದರಿಂದ ಸರ್ಕಾರ ಇದುವರೆಗೂ ಈ ನ್ಯಾಯಾಧೀಶರು ನೀಡಿರುವ ಎಲ್ಲ ತೀರ್ಪುಗಳನ್ನೂ ಮರು ತನಿಖೆಗೆ ಒಳಪಡಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಸಾರ್ವಜನಿಕರು ಗೌರವ ಮತ್ತು ವಿಶ್ವಾಸ ಹೊಂದಿರುವ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಭ್ರಷ್ಟ್ರಾಚಾರ ಹೆಚ್ಚಾದರೆ ಜನ ಇನ್ನಾರ ಬಳಿ ನ್ಯಾಯ ಕೇಳಬೇಕು? ಈ ಪ್ರಕರಣ ನ್ಯಾಯಾಂಗ ವ್ಯವಸ್ಥೆಗೇ ಕಪ್ಪು ಚುಕ್ಕೆ ಇಟ್ಟಂತಾಗಿದೆ.
–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…