FOOTPATH
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಹಾಸಿಗೆ ಅಂಗಡಿಗಳು, ಬೈಕ್ ರಿಪೇರಿ ಅಂಗಡಿಗಳ ಮಾಲೀಕರು ಫುಟ್ಪಾತ್ಅನ್ನು ಅತಿಕ್ರಮಿಸಿದ್ದು, ಪಾದಚಾರಿಗಳು ಫುಟ್ಪಾತ್ಬಿಟ್ಟು ರಸ್ತೆಯ ಮೇಲೆ ನಡೆಯುವುದು ಅನಿವಾರ್ಯವಾಗಿದೆ.
ಇಲ್ಲಿ ಸುಮಾರು ಏಳೆಂಟು ಹಾಸಿಗೆ ಅಂಗಡಿಗಳಿದ್ದು, ಅಂಗಡಿಗಳವರು ಫುಟ್ಪಾತ್ ಮೇಲೆಯೇ ಹಾಸಿಗಳನ್ನು ತಯಾರಿಸುತ್ತಾರೆ. ಈ ಸಂದರ್ಭದಲ್ಲಿ ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತದೆ. ಹಾಸಿಗೆ ತಯಾರಿಸಿದ ನಂತರ ಅದನ್ನು ಸರಿ ಮಾಡಲು ದೊಣ್ಣೆಯಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಯಾರಿಗಾದರೂ ದೊಣ್ಣೆ ಆಕಸ್ಮಿಕವಾಗಿ ತಗುಲಿದರೆ ಪ್ರಾಣಕ್ಕೆ ಎರವಾಗುತ್ತದೆ. ಇನ್ನು ತಾತಯ್ಯ ಸರ್ಕಲ್ ಬಳಿ ಯೂ ಫುಟ್ ಪಾತ್ ಒತ್ತುವರಿಯಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿದೆ. ಸರ್ಕಲ್ನಿಂದ ಬಸವೇಶ್ವರ ಸರ್ಕಲ್ಗೆ ತೆರಳುವ ಮಾರ್ಗದ ಎಡ ಭಾಗದಲ್ಲಿ ಬೈಕ್ ರಿಪೇರಿ ಅಂಗಡಿಗಳು, ಟೈಲ್ಸ್ ಅಂಗಡಿ, ರೇಡಿಯಂ ಸ್ಟಿಕ್ಕರ್ ಅಂಗಡಿಗಳು ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿದ್ದರೆ ಬಲ ಭಾಗದಲ್ಲಿ ಹೊಸದಾಗಿ ಆರಂಭವಾಗಿರುವ ಐಷಾರಾಮಿ ಹೋಟೆಲ್ನವರು ಫುಟ್ಪಾತ್ ಮೇಲೆಯೇ ಬೋರ್ಡ್ ನಿರ್ಮಿಸಿದ್ದಾರೆ. ಇದೂ ಸಾಲದೆಂಬಂತೆ ಹೋಟೆಲ್ ಜಾಹೀರಾತು ಫುಲಕಗಳನ್ನು ಅಳವಡಿಸಿದ್ದಾರೆ. ಅಲಂಕಾರಕ್ಕೆ ಇಟ್ಟಿರುವ ಹೂ ಕುಂಡಗಳಿಂದಲೂ ಫುಟ್ ಪಾತ್ ಒತ್ತುವರಿಯಾಗಿದೆ. ಉಪಾಹಾರ ದರ್ಶನಿಗಳು, ಅಂಗಡಿಗಳ ಮಾಲೀಕರಿಂದ ಪಾದಚಾರಿ ಮಾರ್ಗ ಒತ್ತುವರಿಯಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಚುನಾಯಿತ ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದು ೨ ವರ್ಷಗಳು ಕಳೆದಿವೆ. ಪಾಲಿಕೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಗಮನಿಸುತ್ತಿಲ್ಲ. ಹೀಗಾಗಿ ಸಮಸ್ಯೆಯನ್ನು ಯಾರ ಬಳಿ ಹೇಳಬೇಕೆಂಬುದೇ ಸಾರ್ವಜನಿಕರಿಗೆ ತಿಳಿಯುತ್ತಿಲ್ಲ .
– ಎ.ಜಿ. ಚಂದ್ರಲಾ, ಮೈಸೂರು
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…