ಓದುಗರ ಪತ್ರ

ಓದುಗರ ಪತ್ರ | ಫುಟ್ ಪಾತ್ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಹಾಸಿಗೆ ಅಂಗಡಿಗಳು, ಬೈಕ್ ರಿಪೇರಿ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಅನ್ನು ಅತಿಕ್ರಮಿಸಿದ್ದು, ಪಾದಚಾರಿಗಳು ಫುಟ್‌ಪಾತ್‌ಬಿಟ್ಟು ರಸ್ತೆಯ ಮೇಲೆ ನಡೆಯುವುದು ಅನಿವಾರ್ಯವಾಗಿದೆ.

ಇಲ್ಲಿ ಸುಮಾರು ಏಳೆಂಟು ಹಾಸಿಗೆ ಅಂಗಡಿಗಳಿದ್ದು, ಅಂಗಡಿಗಳವರು ಫುಟ್‌ಪಾತ್ ಮೇಲೆಯೇ ಹಾಸಿಗಳನ್ನು ತಯಾರಿಸುತ್ತಾರೆ. ಈ ಸಂದರ್ಭದಲ್ಲಿ ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತದೆ. ಹಾಸಿಗೆ ತಯಾರಿಸಿದ ನಂತರ ಅದನ್ನು ಸರಿ ಮಾಡಲು ದೊಣ್ಣೆಯಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಯಾರಿಗಾದರೂ ದೊಣ್ಣೆ ಆಕಸ್ಮಿಕವಾಗಿ ತಗುಲಿದರೆ ಪ್ರಾಣಕ್ಕೆ ಎರವಾಗುತ್ತದೆ. ಇನ್ನು ತಾತಯ್ಯ ಸರ್ಕಲ್ ಬಳಿ ಯೂ ಫುಟ್ ಪಾತ್ ಒತ್ತುವರಿಯಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿದೆ. ಸರ್ಕಲ್‌ನಿಂದ ಬಸವೇಶ್ವರ ಸರ್ಕಲ್‌ಗೆ ತೆರಳುವ ಮಾರ್ಗದ ಎಡ ಭಾಗದಲ್ಲಿ ಬೈಕ್ ರಿಪೇರಿ ಅಂಗಡಿಗಳು, ಟೈಲ್ಸ್ ಅಂಗಡಿ, ರೇಡಿಯಂ ಸ್ಟಿಕ್ಕರ್ ಅಂಗಡಿಗಳು ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿದ್ದರೆ ಬಲ ಭಾಗದಲ್ಲಿ ಹೊಸದಾಗಿ ಆರಂಭವಾಗಿರುವ ಐಷಾರಾಮಿ ಹೋಟೆಲ್‌ನವರು ಫುಟ್‌ಪಾತ್ ಮೇಲೆಯೇ ಬೋರ್ಡ್ ನಿರ್ಮಿಸಿದ್ದಾರೆ. ಇದೂ ಸಾಲದೆಂಬಂತೆ ಹೋಟೆಲ್ ಜಾಹೀರಾತು ಫುಲಕಗಳನ್ನು ಅಳವಡಿಸಿದ್ದಾರೆ. ಅಲಂಕಾರಕ್ಕೆ ಇಟ್ಟಿರುವ ಹೂ ಕುಂಡಗಳಿಂದಲೂ ಫುಟ್ ಪಾತ್ ಒತ್ತುವರಿಯಾಗಿದೆ. ಉಪಾಹಾರ ದರ್ಶನಿಗಳು, ಅಂಗಡಿಗಳ ಮಾಲೀಕರಿಂದ ಪಾದಚಾರಿ ಮಾರ್ಗ ಒತ್ತುವರಿಯಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಚುನಾಯಿತ ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದು ೨ ವರ್ಷಗಳು ಕಳೆದಿವೆ. ಪಾಲಿಕೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಗಮನಿಸುತ್ತಿಲ್ಲ. ಹೀಗಾಗಿ ಸಮಸ್ಯೆಯನ್ನು ಯಾರ ಬಳಿ ಹೇಳಬೇಕೆಂಬುದೇ ಸಾರ್ವಜನಿಕರಿಗೆ ತಿಳಿಯುತ್ತಿಲ್ಲ .

– ಎ.ಜಿ. ಚಂದ್ರಲಾ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago