ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗಿದ್ದು,ಜೀ ವನಾಧಾರಕ್ಕೆಂದು ಸಾಲ ಮಾಡಿದ ಜನರು ಮೈಕ್ರೋ ಫೈನಾನ್ಸ್ಗಳ ಸಾಲದ ಸುಳಿಗೆ ಸಿಲುಕಿ ಗ್ರಾಮಗಳನ್ನು ತೊರೆಯುತ್ತಿರುವ, ಆತ್ಮಹತ್ಯೆ ಹಿಡಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಗ್ರಾಮೀಣ ಭಾಗದ ಜನರಿಗೆ ಕೋಟ್ಯಂತರ ರೂ. ಸಾಲ ನೀಡಿದ್ದು, ಎಲ್ಲ ಕಂಪೆನಿಗಳೂ ತರಹೇವಾರಿ ಬಡ್ಡಿ ದರವನ್ನು ವಿಧಿಸಿವೆ. ಕೆಲ ಕಂಪೆನಿಗಳು ವಾರ್ಷಿಕ ಶೇ.19, ಶೇ.20, ಶೇ.25 ಹೀಗೆ ತಮ್ಮ ಮನಸೋಇಚ್ಛೆ ಬಡ್ಡಿದರಗಳನ್ನು ವಿಧಿಸಿವೆ. ಇನ್ನು ಕೆಲ ಕಂಪೆನಿಗಳು ಉದ್ಯಮಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದ್ದು, ಬಡ ಜನರು, ರೈತರಿಂದ ಅಧಿಕ ಪ್ರಮಾಣದ ಬಡ್ಡಿ ವಸೂಲಿ ಮಾಡುತ್ತಿವೆ. ಹೀಗೆ ಒಂದೇ ಕಂಪೆನಿ ವಿವಿಧ ಬಡ್ಡಿದರಗಳಲ್ಲಿ ಸಾಲ ನೀಡುವುದು ಸರಿಯೇ? ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆಯೇ?
ಈ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮನೆ, ಆಸ್ತಿಗಳನ್ನು ಅಡಮಾನವಾಗಿಟ್ಟುಕೊಂಡು, ಅವರ ದುಡಿಮೆಗಿಂತ ಹೆಚ್ಚಿನ ಹಣವನ್ನು ಸಾಲ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಸಾಲ ತೀರಿಸಲಾಗದೆ ಮನೆ ಕಳೆದುಕೊಂಡು ಬೀದಿಗೆ ಬೀಳುವಂತಾಗಿದೆ. ಆದ್ದರಿಂದ ಸರ್ಕಾರ ತುರ್ತಾಗಿ ಎಚ್ಚೆತ್ತುಕೊಂಡು ಫೈನಾನ್ಸ್ ಕಂಪೆನಿಗಳ ಹಾವಳಿಗೆ ಕಡಿವಾಣ ಹಾಕಲಿ.
-ಸುಮಂತ್, ಎಚ್.ಡಿ.ಕೋಟೆ ತಾ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…