ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗಿದ್ದು,ಜೀ ವನಾಧಾರಕ್ಕೆಂದು ಸಾಲ ಮಾಡಿದ ಜನರು ಮೈಕ್ರೋ ಫೈನಾನ್ಸ್ಗಳ ಸಾಲದ ಸುಳಿಗೆ ಸಿಲುಕಿ ಗ್ರಾಮಗಳನ್ನು ತೊರೆಯುತ್ತಿರುವ, ಆತ್ಮಹತ್ಯೆ ಹಿಡಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಗ್ರಾಮೀಣ ಭಾಗದ ಜನರಿಗೆ ಕೋಟ್ಯಂತರ ರೂ. ಸಾಲ ನೀಡಿದ್ದು, ಎಲ್ಲ ಕಂಪೆನಿಗಳೂ ತರಹೇವಾರಿ ಬಡ್ಡಿ ದರವನ್ನು ವಿಧಿಸಿವೆ. ಕೆಲ ಕಂಪೆನಿಗಳು ವಾರ್ಷಿಕ ಶೇ.19, ಶೇ.20, ಶೇ.25 ಹೀಗೆ ತಮ್ಮ ಮನಸೋಇಚ್ಛೆ ಬಡ್ಡಿದರಗಳನ್ನು ವಿಧಿಸಿವೆ. ಇನ್ನು ಕೆಲ ಕಂಪೆನಿಗಳು ಉದ್ಯಮಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದ್ದು, ಬಡ ಜನರು, ರೈತರಿಂದ ಅಧಿಕ ಪ್ರಮಾಣದ ಬಡ್ಡಿ ವಸೂಲಿ ಮಾಡುತ್ತಿವೆ. ಹೀಗೆ ಒಂದೇ ಕಂಪೆನಿ ವಿವಿಧ ಬಡ್ಡಿದರಗಳಲ್ಲಿ ಸಾಲ ನೀಡುವುದು ಸರಿಯೇ? ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆಯೇ?
ಈ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮನೆ, ಆಸ್ತಿಗಳನ್ನು ಅಡಮಾನವಾಗಿಟ್ಟುಕೊಂಡು, ಅವರ ದುಡಿಮೆಗಿಂತ ಹೆಚ್ಚಿನ ಹಣವನ್ನು ಸಾಲ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಸಾಲ ತೀರಿಸಲಾಗದೆ ಮನೆ ಕಳೆದುಕೊಂಡು ಬೀದಿಗೆ ಬೀಳುವಂತಾಗಿದೆ. ಆದ್ದರಿಂದ ಸರ್ಕಾರ ತುರ್ತಾಗಿ ಎಚ್ಚೆತ್ತುಕೊಂಡು ಫೈನಾನ್ಸ್ ಕಂಪೆನಿಗಳ ಹಾವಳಿಗೆ ಕಡಿವಾಣ ಹಾಕಲಿ.
-ಸುಮಂತ್, ಎಚ್.ಡಿ.ಕೋಟೆ ತಾ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…