ಸರಗೂರು ತಾಲ್ಲೂಕಿನ ಕಾಳಿಹುಂಡಿ ಸೇರಿದಂತೆ ಚಿಕ್ಕದೇವಮ್ಮ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ.
ಚಿಕ್ಕದೇವಮ್ಮ ಬೆಟ್ಟ ಒಂದು ಪ್ರವಾಸಿ ತಾಣವಾಗಿದ್ದರೂ ಅದರ ಸುತ್ತಲಿನ ಗ್ರಾಮಗಳು ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಗ್ರಾಮಗಳಿಗೆ ಬೆಳಿಗ್ಗೆ ಮತ್ತು ಸಂಜೆಯ ಸಮಯ ಬಿಟ್ಟರೆ ಇನ್ಯಾವುದೇ ಸಮಯದಲ್ಲಿಯೂ ಬಸ್ಗಳಿಲ್ಲ. ಕೆಲ ಗ್ರಾಮಗಳಿಗಂತೂ ಬಸ್ಗಳೇ ಇಲ್ಲದೆ, ಅಕ್ಕಪಕ್ಕದ ಊರುಗಳಿಗೆ ಹೋಗಿ ಬಸ್ ಹತ್ತಬೇಕಿದೆ. ಈ ಗ್ರಾಮಗಳ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಅನೇಕ ಮಂದಿ ಶಾಲಾ-ಕಾಲೇಜುಗಳು ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಎಚ್. ಡಿ. ಕೋಟೆ, ಸರಗೂರು ಹಾಗೂ ಮೈಸೂರಿಗೆ ಹೋಗಿಬರಬೇಕಿದೆ. ಆದರೆ ಈ ಗ್ರಾಮಗಳಲ್ಲಿ ಸರಿಯಾದ ಸಮಯಕ್ಕೆ ಬಸ್ ಸಿಗದೆ ಪ್ರಯಾಣಿಕರು ಪರಿತಪಿಸುವಂತಾಗಿದೆ.
ಪರೀಕ್ಷೆಯ ಸಮಯದಲ್ಲಂತೂ ವಿದ್ಯಾರ್ಥಿಗಳ ಪರದಾಟ ಹೇಳತೀರದು. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರೂ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಗ್ರಾಮಗಳ ರಸ್ತೆ ಸರಿಯಿಲ್ಲ, ಕಲೆಕ್ಷನ್ ಕಡಿಮೆ ಇದೆ ಎಂಬ ಕಾರಣ ನೀಡುತ್ತಾರೆ.
ನೆರೆಯ ತಮಿಳುನಾಡಿನಲ್ಲಿ ಕಲೆಕ್ಷನ್ ಕಡಿಮೆ ಇರುವ ಹಾಗೂ ಸಣ್ಣ ರಸ್ತೆಗಳನ್ನು ಹೊಂದಿರುವ ಗ್ರಾಮಗಳಿಗೆ ಮಿನಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯೂ ಕಡಿಮೆ ಯಾಗುವ ಜತೆಗೆ ಸಾರ್ವಜನಿಕರಿಗೂ ಅನುಕೂಲವಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರವೂ ಇಂತಹ ಯೋಜನೆಗಳನ್ನು ಗ್ರಾಮೀಣ ಭಾಗಗಳಿಗೆ ಪರಿಚಯಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…