ಮಿನಿ ಬಸ್‌ಗಳ ವ್ಯವಸ್ಥೆ ಮಾಡಬಹುದಲ್ಲವೇ?

ಸರಗೂರು ತಾಲ್ಲೂಕಿನ ಕಾಳಿಹುಂಡಿ ಸೇರಿದಂತೆ ಚಿಕ್ಕದೇವಮ್ಮ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ.

ಚಿಕ್ಕದೇವಮ್ಮ ಬೆಟ್ಟ ಒಂದು ಪ್ರವಾಸಿ ತಾಣವಾಗಿದ್ದರೂ ಅದರ ಸುತ್ತಲಿನ ಗ್ರಾಮಗಳು ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಗ್ರಾಮಗಳಿಗೆ ಬೆಳಿಗ್ಗೆ ಮತ್ತು ಸಂಜೆಯ ಸಮಯ ಬಿಟ್ಟರೆ ಇನ್ಯಾವುದೇ ಸಮಯದಲ್ಲಿಯೂ ಬಸ್‌ಗಳಿಲ್ಲ. ಕೆಲ ಗ್ರಾಮಗಳಿಗಂತೂ ಬಸ್‌ಗಳೇ ಇಲ್ಲದೆ, ಅಕ್ಕಪಕ್ಕದ ಊರುಗಳಿಗೆ ಹೋಗಿ ಬಸ್ ಹತ್ತಬೇಕಿದೆ. ಈ ಗ್ರಾಮಗಳ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಅನೇಕ ಮಂದಿ ಶಾಲಾ-ಕಾಲೇಜುಗಳು ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಎಚ್. ಡಿ. ಕೋಟೆ, ಸರಗೂರು ಹಾಗೂ ಮೈಸೂರಿಗೆ ಹೋಗಿಬರಬೇಕಿದೆ. ಆದರೆ ಈ ಗ್ರಾಮಗಳಲ್ಲಿ ಸರಿಯಾದ ಸಮಯಕ್ಕೆ ಬಸ್ ಸಿಗದೆ ಪ್ರಯಾಣಿಕರು ಪರಿತಪಿಸುವಂತಾಗಿದೆ.

ಪರೀಕ್ಷೆಯ ಸಮಯದಲ್ಲಂತೂ ವಿದ್ಯಾರ್ಥಿಗಳ ಪರದಾಟ ಹೇಳತೀರದು. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರೂ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಗ್ರಾಮಗಳ ರಸ್ತೆ ಸರಿಯಿಲ್ಲ, ಕಲೆಕ್ಷನ್ ಕಡಿಮೆ ಇದೆ ಎಂಬ ಕಾರಣ ನೀಡುತ್ತಾರೆ.

ನೆರೆಯ ತಮಿಳುನಾಡಿನಲ್ಲಿ ಕಲೆಕ್ಷನ್ ಕಡಿಮೆ ಇರುವ ಹಾಗೂ ಸಣ್ಣ ರಸ್ತೆಗಳನ್ನು ಹೊಂದಿರುವ ಗ್ರಾಮಗಳಿಗೆ ಮಿನಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯೂ ಕಡಿಮೆ ಯಾಗುವ ಜತೆಗೆ ಸಾರ್ವಜನಿಕರಿಗೂ ಅನುಕೂಲವಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರವೂ ಇಂತಹ ಯೋಜನೆಗಳನ್ನು ಗ್ರಾಮೀಣ ಭಾಗಗಳಿಗೆ ಪರಿಚಯಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.

-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

2 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

6 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

6 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

6 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

6 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

6 hours ago