ಓದುಗರ ಪತ್ರ

‘ಕ್ರಮಬದ್ಧ ಜಾತಿ ಗಣತಿ ನಡೆಸಿ’

ಓದುಗರ ಪತ್ರ…

ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿ ಪೂರ್ಣಪ್ರಮಾಣದಲ್ಲಿ ಆಗಿಲ್ಲ. ಸಮೀಕ್ಷೆ ನಡೆಸುವ ಮುನ್ನ ವ್ಯಾಪಕ ಪ್ರಚಾರ ಮಾಡಿ ಜನಜಾಗೃತಿ ಮೂಡಿಸಿ ಯಾವುದೇ ಒಂದು ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಸಮೀಕ್ಷೆ ಮಾಡಬೇಕು. ಪ್ರಸ್ತುತ ಆಗಿರುವ ಜಾತಿ ಸಮೀಕ್ಷೆ ನಾಮಕಾವಸ್ತೆ ಜಾತಿ ಸಮೀಕ್ಷೆ ಆಗಿದೆ. ‘ಬಂದ ಪುಟ್ಟ ಹೋದ ಪುಟ್ಟ’ ಎಂಬಂತಾಗಿದೆ.

ಈ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆ ಕ್ರಮಬದ್ಧವಾಗಿ ಆಗಲಿ, ಈ ಸಮೀಕ್ಷೆಯಿಂದ ಯಾವ ಒಂದು ಕುಟುಂಬವು ಹೊರಗುಳಿಯದಂತೆ ಕಟ್ಟುನಿಟ್ಟಾದ ಸಮೀಕ್ಷೆ ನಡೆಸಿ ತಾಲ್ಲೂಕುವಾರು, ವಲಯವಾರು ಪ್ರಕಟಿಸಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ ನೀಡಬೇಕು. ನಂತರ ಅಂತಿಮವಾಗಿ ಜಾತಿ ಪಟ್ಟಿಯನ್ನು ಬಿಡುಗಡೆ ಮಾಡಬೇಕು. ಬಳಿಕ ಮೀಸಲಾತಿ ಪ್ರಕಟಿಸಬೇಕು. ಯಾವುದೇ ಜಾತಿ, ಯಾವುದೇ ಧರ್ಮಕ್ಕೂ ಅನ್ಯಾಯವಾಗದಂತೆ ಸಾಮಾಜಿಕ ನ್ಯಾಯದಡಿ ಮೀಸಲಾತಿ ನಿಗದಿಪಡಿಸಬೇಕು. ಅಪೂರ್ಣ, ಅವೈಜ್ಞಾನಿಕ ಜಾತಿ ಸಮೀಕ್ಷೆ ವರದಿಯನ್ನು ಸರ್ಕಾರ ಹಿಂಪಡೆಯಬೇಕು.

  • ಬಿ. ಜಿ. ರಂಗೇಗೌಡ, ಮೈಸೂರು.
ಆಂದೋಲನ ಡೆಸ್ಕ್

Recent Posts

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

9 seconds ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

5 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

5 hours ago