ಓದುಗರ ಪತ್ರ
ಓದುಗರ ಪತ್ರ…
ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿ ಪೂರ್ಣಪ್ರಮಾಣದಲ್ಲಿ ಆಗಿಲ್ಲ. ಸಮೀಕ್ಷೆ ನಡೆಸುವ ಮುನ್ನ ವ್ಯಾಪಕ ಪ್ರಚಾರ ಮಾಡಿ ಜನಜಾಗೃತಿ ಮೂಡಿಸಿ ಯಾವುದೇ ಒಂದು ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಸಮೀಕ್ಷೆ ಮಾಡಬೇಕು. ಪ್ರಸ್ತುತ ಆಗಿರುವ ಜಾತಿ ಸಮೀಕ್ಷೆ ನಾಮಕಾವಸ್ತೆ ಜಾತಿ ಸಮೀಕ್ಷೆ ಆಗಿದೆ. ‘ಬಂದ ಪುಟ್ಟ ಹೋದ ಪುಟ್ಟ’ ಎಂಬಂತಾಗಿದೆ.
ಈ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆ ಕ್ರಮಬದ್ಧವಾಗಿ ಆಗಲಿ, ಈ ಸಮೀಕ್ಷೆಯಿಂದ ಯಾವ ಒಂದು ಕುಟುಂಬವು ಹೊರಗುಳಿಯದಂತೆ ಕಟ್ಟುನಿಟ್ಟಾದ ಸಮೀಕ್ಷೆ ನಡೆಸಿ ತಾಲ್ಲೂಕುವಾರು, ವಲಯವಾರು ಪ್ರಕಟಿಸಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ ನೀಡಬೇಕು. ನಂತರ ಅಂತಿಮವಾಗಿ ಜಾತಿ ಪಟ್ಟಿಯನ್ನು ಬಿಡುಗಡೆ ಮಾಡಬೇಕು. ಬಳಿಕ ಮೀಸಲಾತಿ ಪ್ರಕಟಿಸಬೇಕು. ಯಾವುದೇ ಜಾತಿ, ಯಾವುದೇ ಧರ್ಮಕ್ಕೂ ಅನ್ಯಾಯವಾಗದಂತೆ ಸಾಮಾಜಿಕ ನ್ಯಾಯದಡಿ ಮೀಸಲಾತಿ ನಿಗದಿಪಡಿಸಬೇಕು. ಅಪೂರ್ಣ, ಅವೈಜ್ಞಾನಿಕ ಜಾತಿ ಸಮೀಕ್ಷೆ ವರದಿಯನ್ನು ಸರ್ಕಾರ ಹಿಂಪಡೆಯಬೇಕು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…