ಓದುಗರ ಪತ್ರ

ಓದುಗರ ಪತ್ರ | ಇ- ಖಾತೆ ಬಗ್ಗೆ ಪಾಲಿಕೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು

ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಮಾಡಿದೆ.

ಇಂತಹ ಸುಳ್ಳು ಮಾಹಿತಿಯ ವದಂತಿಗಳನ್ನು ಕೆಲ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ಹಣ ಗಳಿಸುವ ಉದ್ದೇಶದಿಂದ ಪ್ರಚಾರ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಇಷ್ಟು ವರ್ಷಗಳಿಂದಲೂ ಇಲ್ಲದ ಇ-ಖಾತೆ ವಿಚಾರ ಈಗ ಏಕಾಏಕಿ ಮುನ್ನಲೆಗೆ ಬಂದಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಕೊನೆಯ ದಿನಾಂಕ ನಿಗದಿಯಾಗಿದೆ ಎಂಬ ಸುಳ್ಳು ಮಾಹಿತಿ ಹೇಗೆ ಪ್ರಚಾರವಾಯಿತು? ಈ ಬಗ್ಗೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದಾಗ ‘ಸಾರ್ವಜನಿಕರು ತಮ್ಮ ಆಸ್ತಿಗೆ ಯಾವಾಗ ಬೇಕಾದರೂ ಇ-ಖಾತೆ ಮಾಡಿಸಿಕೊಳ್ಳಬಹುದು. ಅದಕ್ಕೆ ಯಾವುದೇ ಕೊನೆಯ ದಿನಾಂಕ ಎಂಬುದಿಲ್ಲ. ಆದರೆ ಆಸ್ತಿಯನ್ನು ಮಾರಾಟ ಮಾಡುವಾಗ ಕಡ್ಡಾಯವಾಗಿ ಇ-ಖಾತೆ ಪಡೆದಿರಬೇಕು’ ಎಂಬ ಮಾಹಿತಿ ನೀಡಿದ್ದಾರೆ. ಆದ್ದರಿಂದ ಈಗ ಹರಡಿರುವ ಸುಳ್ಳು ಮಾಹಿತಿಯ ಬಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

3 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

3 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

3 hours ago