ಓದುಗರ ಪತ್ರ
ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಮಾಡಿದೆ.
ಇಂತಹ ಸುಳ್ಳು ಮಾಹಿತಿಯ ವದಂತಿಗಳನ್ನು ಕೆಲ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ಹಣ ಗಳಿಸುವ ಉದ್ದೇಶದಿಂದ ಪ್ರಚಾರ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇಷ್ಟು ವರ್ಷಗಳಿಂದಲೂ ಇಲ್ಲದ ಇ-ಖಾತೆ ವಿಚಾರ ಈಗ ಏಕಾಏಕಿ ಮುನ್ನಲೆಗೆ ಬಂದಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಕೊನೆಯ ದಿನಾಂಕ ನಿಗದಿಯಾಗಿದೆ ಎಂಬ ಸುಳ್ಳು ಮಾಹಿತಿ ಹೇಗೆ ಪ್ರಚಾರವಾಯಿತು? ಈ ಬಗ್ಗೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದಾಗ ‘ಸಾರ್ವಜನಿಕರು ತಮ್ಮ ಆಸ್ತಿಗೆ ಯಾವಾಗ ಬೇಕಾದರೂ ಇ-ಖಾತೆ ಮಾಡಿಸಿಕೊಳ್ಳಬಹುದು. ಅದಕ್ಕೆ ಯಾವುದೇ ಕೊನೆಯ ದಿನಾಂಕ ಎಂಬುದಿಲ್ಲ. ಆದರೆ ಆಸ್ತಿಯನ್ನು ಮಾರಾಟ ಮಾಡುವಾಗ ಕಡ್ಡಾಯವಾಗಿ ಇ-ಖಾತೆ ಪಡೆದಿರಬೇಕು’ ಎಂಬ ಮಾಹಿತಿ ನೀಡಿದ್ದಾರೆ. ಆದ್ದರಿಂದ ಈಗ ಹರಡಿರುವ ಸುಳ್ಳು ಮಾಹಿತಿಯ ಬಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…