ಓದುಗರ ಪತ್ರ
ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಮಾಡಿದೆ.
ಇಂತಹ ಸುಳ್ಳು ಮಾಹಿತಿಯ ವದಂತಿಗಳನ್ನು ಕೆಲ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ಹಣ ಗಳಿಸುವ ಉದ್ದೇಶದಿಂದ ಪ್ರಚಾರ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇಷ್ಟು ವರ್ಷಗಳಿಂದಲೂ ಇಲ್ಲದ ಇ-ಖಾತೆ ವಿಚಾರ ಈಗ ಏಕಾಏಕಿ ಮುನ್ನಲೆಗೆ ಬಂದಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಕೊನೆಯ ದಿನಾಂಕ ನಿಗದಿಯಾಗಿದೆ ಎಂಬ ಸುಳ್ಳು ಮಾಹಿತಿ ಹೇಗೆ ಪ್ರಚಾರವಾಯಿತು? ಈ ಬಗ್ಗೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದಾಗ ‘ಸಾರ್ವಜನಿಕರು ತಮ್ಮ ಆಸ್ತಿಗೆ ಯಾವಾಗ ಬೇಕಾದರೂ ಇ-ಖಾತೆ ಮಾಡಿಸಿಕೊಳ್ಳಬಹುದು. ಅದಕ್ಕೆ ಯಾವುದೇ ಕೊನೆಯ ದಿನಾಂಕ ಎಂಬುದಿಲ್ಲ. ಆದರೆ ಆಸ್ತಿಯನ್ನು ಮಾರಾಟ ಮಾಡುವಾಗ ಕಡ್ಡಾಯವಾಗಿ ಇ-ಖಾತೆ ಪಡೆದಿರಬೇಕು’ ಎಂಬ ಮಾಹಿತಿ ನೀಡಿದ್ದಾರೆ. ಆದ್ದರಿಂದ ಈಗ ಹರಡಿರುವ ಸುಳ್ಳು ಮಾಹಿತಿಯ ಬಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…