ಓದುಗರ ಪತ್ರ

ಓದುಗರ ಪತ್ರ | ಇ- ಖಾತೆ ಬಗ್ಗೆ ಪಾಲಿಕೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು

ಮೈಸೂರಿನ ಜನರು ತಮ್ಮ ಸ್ವಂತ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಿಕೊಳ್ಳಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಅಷ್ಟರೊಳಗೆ ಇ-ಖಾತೆ ಮಾಡಿಸಿಕೊಳ್ಳದಿದ್ದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ವದಂತಿಯೊಂದು ಹರಿದಾಡುತ್ತಿದ್ದು, ಗಾಬರಿಗೊಂಡ ಜನರು ಇ- ಖಾತೆ ಮಾಡಿಸಿಕೊಳ್ಳಲು ಮೈಸೂರಿನ ಎಲ್ಲ ವಲಯ ಕಚೇರಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತೆ ಮಾಡಿದೆ.

ಇಂತಹ ಸುಳ್ಳು ಮಾಹಿತಿಯ ವದಂತಿಗಳನ್ನು ಕೆಲ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ಹಣ ಗಳಿಸುವ ಉದ್ದೇಶದಿಂದ ಪ್ರಚಾರ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಇಷ್ಟು ವರ್ಷಗಳಿಂದಲೂ ಇಲ್ಲದ ಇ-ಖಾತೆ ವಿಚಾರ ಈಗ ಏಕಾಏಕಿ ಮುನ್ನಲೆಗೆ ಬಂದಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಕೊನೆಯ ದಿನಾಂಕ ನಿಗದಿಯಾಗಿದೆ ಎಂಬ ಸುಳ್ಳು ಮಾಹಿತಿ ಹೇಗೆ ಪ್ರಚಾರವಾಯಿತು? ಈ ಬಗ್ಗೆ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ವಿಚಾರಿಸಿದಾಗ ‘ಸಾರ್ವಜನಿಕರು ತಮ್ಮ ಆಸ್ತಿಗೆ ಯಾವಾಗ ಬೇಕಾದರೂ ಇ-ಖಾತೆ ಮಾಡಿಸಿಕೊಳ್ಳಬಹುದು. ಅದಕ್ಕೆ ಯಾವುದೇ ಕೊನೆಯ ದಿನಾಂಕ ಎಂಬುದಿಲ್ಲ. ಆದರೆ ಆಸ್ತಿಯನ್ನು ಮಾರಾಟ ಮಾಡುವಾಗ ಕಡ್ಡಾಯವಾಗಿ ಇ-ಖಾತೆ ಪಡೆದಿರಬೇಕು’ ಎಂಬ ಮಾಹಿತಿ ನೀಡಿದ್ದಾರೆ. ಆದ್ದರಿಂದ ಈಗ ಹರಡಿರುವ ಸುಳ್ಳು ಮಾಹಿತಿಯ ಬಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

58 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago