ಓದುಗರ ಪತ್ರ

ಓದುಗರ ಪತ್ರ: ಅಗೆದ ರಸ್ತೆ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಈ ರಸ್ತೆಯನ್ನು ಅಗೆದು ಹಾಕಲಾಗಿದೆ. ಆದರೆ ಪೈಪ್‌ಲೈನ್ ಅಳವಡಿಸಿದ ಬಳಿಕ ಸ್ಪಲ್ಪ ಪ್ರಮಾಣದಲ್ಲಿ ಮಣ್ಣು ಹಾಕಿ ಮುಚ್ಚಲಾಗಿದ್ದು, ಗುಂಡಿ ನಿರ್ಮಾಣವಾಗಿದೆ. ಇದರಿಂದಾಗಿ ನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇವೆ.

ಈ ರಸ್ತೆ ಮೈಸೂರಿನ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವುದರಿಂದ ನಿತ್ಯ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಇಂತಹ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿರುವ ಪರಿಣಾಮ ಅಪಘಾತಗಳಾಗುವ ಅಪಾಯ ಹೆಚ್ಚಿದೆ. ಒಂದೇ ದಿನ ನಾಲ್ಕು ಅಪಘಾತಗಳು ಸಂಭವಿಸಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೀರಿನ ಸಂಪರ್ಕ ಪಡೆಯುವ ಸಲುವಾಗಿ ರಸ್ತೆ ಅಗೆಯಲು ಮೈಸೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರು 3 -5 ಸಾವಿರ ರೂ. ಶುಲ್ಕ ಪಾವತಿಸುತ್ತಾರೆ. ಆದರೆ, ರಸ್ತೆಯನ್ನು ಅಗೆದು ಸಂಪರ್ಕ ಕಲ್ಪಿಸಿದ ಬಳಿಕ ಮಹಾನಗರ ಪಾಲಿಕೆಯವರು ಅದನ್ನು ಸರಿಯಾಗಿ ಮುಚ್ಚುವ ಗೋಜಿಗೇ ಹೋಗುವುದಿಲ್ಲ. ಮೈಸೂರಿನ ನಾನಾ ಭಾಗಗಳಲ್ಲಿ ಇಂಥ ಸಮಸ್ಯೆ ಇದ್ದು, ಮುಂದಾದರೂ ಪಾಲಿಕೆಯವರು ಎಚ್ಚೆತ್ತುಕೊಂಡು ಅಗೆದ ರಸ್ತೆಗಳನ್ನು ಡಾಂಬರ್‌ನಿಂದ ಮುಚ್ಚಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

7 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

8 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

8 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

8 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

9 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

9 hours ago