ಓದುಗರ ಪತ್ರ

ಓದುಗರ ಪತ್ರ: ಅಗೆದ ರಸ್ತೆ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಈ ರಸ್ತೆಯನ್ನು ಅಗೆದು ಹಾಕಲಾಗಿದೆ. ಆದರೆ ಪೈಪ್‌ಲೈನ್ ಅಳವಡಿಸಿದ ಬಳಿಕ ಸ್ಪಲ್ಪ ಪ್ರಮಾಣದಲ್ಲಿ ಮಣ್ಣು ಹಾಕಿ ಮುಚ್ಚಲಾಗಿದ್ದು, ಗುಂಡಿ ನಿರ್ಮಾಣವಾಗಿದೆ. ಇದರಿಂದಾಗಿ ನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇವೆ.

ಈ ರಸ್ತೆ ಮೈಸೂರಿನ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವುದರಿಂದ ನಿತ್ಯ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಇಂತಹ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿರುವ ಪರಿಣಾಮ ಅಪಘಾತಗಳಾಗುವ ಅಪಾಯ ಹೆಚ್ಚಿದೆ. ಒಂದೇ ದಿನ ನಾಲ್ಕು ಅಪಘಾತಗಳು ಸಂಭವಿಸಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೀರಿನ ಸಂಪರ್ಕ ಪಡೆಯುವ ಸಲುವಾಗಿ ರಸ್ತೆ ಅಗೆಯಲು ಮೈಸೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರು 3 -5 ಸಾವಿರ ರೂ. ಶುಲ್ಕ ಪಾವತಿಸುತ್ತಾರೆ. ಆದರೆ, ರಸ್ತೆಯನ್ನು ಅಗೆದು ಸಂಪರ್ಕ ಕಲ್ಪಿಸಿದ ಬಳಿಕ ಮಹಾನಗರ ಪಾಲಿಕೆಯವರು ಅದನ್ನು ಸರಿಯಾಗಿ ಮುಚ್ಚುವ ಗೋಜಿಗೇ ಹೋಗುವುದಿಲ್ಲ. ಮೈಸೂರಿನ ನಾನಾ ಭಾಗಗಳಲ್ಲಿ ಇಂಥ ಸಮಸ್ಯೆ ಇದ್ದು, ಮುಂದಾದರೂ ಪಾಲಿಕೆಯವರು ಎಚ್ಚೆತ್ತುಕೊಂಡು ಅಗೆದ ರಸ್ತೆಗಳನ್ನು ಡಾಂಬರ್‌ನಿಂದ ಮುಚ್ಚಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

6 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

6 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

6 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

6 hours ago