ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಈ ರಸ್ತೆಯನ್ನು ಅಗೆದು ಹಾಕಲಾಗಿದೆ. ಆದರೆ ಪೈಪ್ಲೈನ್ ಅಳವಡಿಸಿದ ಬಳಿಕ ಸ್ಪಲ್ಪ ಪ್ರಮಾಣದಲ್ಲಿ ಮಣ್ಣು ಹಾಕಿ ಮುಚ್ಚಲಾಗಿದ್ದು, ಗುಂಡಿ ನಿರ್ಮಾಣವಾಗಿದೆ. ಇದರಿಂದಾಗಿ ನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇವೆ.
ಈ ರಸ್ತೆ ಮೈಸೂರಿನ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವುದರಿಂದ ನಿತ್ಯ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಇಂತಹ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿರುವ ಪರಿಣಾಮ ಅಪಘಾತಗಳಾಗುವ ಅಪಾಯ ಹೆಚ್ಚಿದೆ. ಒಂದೇ ದಿನ ನಾಲ್ಕು ಅಪಘಾತಗಳು ಸಂಭವಿಸಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನೀರಿನ ಸಂಪರ್ಕ ಪಡೆಯುವ ಸಲುವಾಗಿ ರಸ್ತೆ ಅಗೆಯಲು ಮೈಸೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರು 3 -5 ಸಾವಿರ ರೂ. ಶುಲ್ಕ ಪಾವತಿಸುತ್ತಾರೆ. ಆದರೆ, ರಸ್ತೆಯನ್ನು ಅಗೆದು ಸಂಪರ್ಕ ಕಲ್ಪಿಸಿದ ಬಳಿಕ ಮಹಾನಗರ ಪಾಲಿಕೆಯವರು ಅದನ್ನು ಸರಿಯಾಗಿ ಮುಚ್ಚುವ ಗೋಜಿಗೇ ಹೋಗುವುದಿಲ್ಲ. ಮೈಸೂರಿನ ನಾನಾ ಭಾಗಗಳಲ್ಲಿ ಇಂಥ ಸಮಸ್ಯೆ ಇದ್ದು, ಮುಂದಾದರೂ ಪಾಲಿಕೆಯವರು ಎಚ್ಚೆತ್ತುಕೊಂಡು ಅಗೆದ ರಸ್ತೆಗಳನ್ನು ಡಾಂಬರ್ನಿಂದ ಮುಚ್ಚಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…