ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.
ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಈ ರಸ್ತೆಯನ್ನು ಅಗೆದು ಹಾಕಲಾಗಿದೆ. ಆದರೆ ಪೈಪ್ಲೈನ್ ಅಳವಡಿಸಿದ ಬಳಿಕ ಸ್ಪಲ್ಪ ಪ್ರಮಾಣದಲ್ಲಿ ಮಣ್ಣು ಹಾಕಿ ಮುಚ್ಚಲಾಗಿದ್ದು, ಗುಂಡಿ ನಿರ್ಮಾಣವಾಗಿದೆ. ಇದರಿಂದಾಗಿ ನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇವೆ.
ಈ ರಸ್ತೆ ಮೈಸೂರಿನ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವುದರಿಂದ ನಿತ್ಯ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಇಂತಹ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿರುವ ಪರಿಣಾಮ ಅಪಘಾತಗಳಾಗುವ ಅಪಾಯ ಹೆಚ್ಚಿದೆ. ಒಂದೇ ದಿನ ನಾಲ್ಕು ಅಪಘಾತಗಳು ಸಂಭವಿಸಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನೀರಿನ ಸಂಪರ್ಕ ಪಡೆಯುವ ಸಲುವಾಗಿ ರಸ್ತೆ ಅಗೆಯಲು ಮೈಸೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರು 3 -5 ಸಾವಿರ ರೂ. ಶುಲ್ಕ ಪಾವತಿಸುತ್ತಾರೆ. ಆದರೆ, ರಸ್ತೆಯನ್ನು ಅಗೆದು ಸಂಪರ್ಕ ಕಲ್ಪಿಸಿದ ಬಳಿಕ ಮಹಾನಗರ ಪಾಲಿಕೆಯವರು ಅದನ್ನು ಸರಿಯಾಗಿ ಮುಚ್ಚುವ ಗೋಜಿಗೇ ಹೋಗುವುದಿಲ್ಲ. ಮೈಸೂರಿನ ನಾನಾ ಭಾಗಗಳಲ್ಲಿ ಇಂಥ ಸಮಸ್ಯೆ ಇದ್ದು, ಮುಂದಾದರೂ ಪಾಲಿಕೆಯವರು ಎಚ್ಚೆತ್ತುಕೊಂಡು ಅಗೆದ ರಸ್ತೆಗಳನ್ನು ಡಾಂಬರ್ನಿಂದ ಮುಚ್ಚಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…