ಓದುಗರ ಪತ್ರ

ಓದುಗರ ಪತ್ರ | ಆಹಾರದ ಗುಣಮಟ್ಟ ಪರಿಶೀಲಿಸಿ ಹಂಚಿಕೆ ಮಾಡಿ

ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಟಿ.ಕಾಗೇಪುರ ಗ್ರಾಮದಲ್ಲಿ ರಾಜಸ್ಥಾನಿ ಸಮಾಜದವರು ಕಲ್ಯಾಣ ಮಂಟಪವೊಂದರಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದು, ಹೋಟೆಲ್‌ವೊಂದರಿಂದ ಆಹಾರವನ್ನು ತರಿಸಿ ಸೇವನೆ ಮಾಡಿದ್ದಾರೆ. ಬಳಿಕ ಉಳಿದ ಆಹಾರವನ್ನು ಸಮೀಪದಲ್ಲೇ ಇದ್ದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳಿಗೆ ನೀಡಿದ್ದಾರೆ. ಈ ಆಹಾರ ಸೇವಿಸಿದ 50ಕ್ಕೂ ಹೆಚ್ಚು ರಾಜಸ್ಥಾನಿ ಸಮಾಜದವರು ಹಾಗೂ ಗೋಕುಲ ವಿದ್ಯಾಸಂಸ್ಥೆಯ 30 ಮಕ್ಕಳಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಬ್ಬಹರಿದಿನಗಳಲ್ಲಿ ದಾನಿಗಳು ಸಾಮಾನ್ಯವಾಗಿ ಶಾಲೆಗಳಿಗೆ, ಬಡಮಕ್ಕಳಿಗೆ ಉಳಿದ ಆಹಾರವನ್ನು ನೀಡುತ್ತಾರೆ. ಹೀಗೆ ಆಹಾರ ನೀಡುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಹಾಗೆಯೇ ಆಹಾರ ತಯಾರಿಸುವವರು ಬೇಜವಾಬ್ದಾರಿ ತೋರಿ ಗುಣಮಟ್ಟದ ಆಹಾರ ತಯಾರಿಸದಿದ್ದಲ್ಲಿ ಇಂತಹ ದುರಂತಗಳು ಸಂಭವಿಸುತ್ತವೆ.

ಸಾಮೂಹಿಕವಾಗಿ ಆಹಾರ ವಿತರಿಸುವಾಗ ಆಯೋಜಕರು ಅಥವಾ ಒದಗಿಸುವವರು ಮುನ್ನಚ್ಚರಿಕೆಯಿಂದ ಅಡುಗೆಯ ಗುಣಮಟ್ಟವನ್ನು ಹರಿಶೀಲಿಸಿ ನಂತರ ಹಂಚಿಕೆ ಮಾಡಬೇಕಿದೆ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

34 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

43 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

1 hour ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

2 hours ago