ಓದುಗರ ಪತ್ರ

ಓದುಗರ ಪತ್ರ | ಆಹಾರದ ಗುಣಮಟ್ಟ ಪರಿಶೀಲಿಸಿ ಹಂಚಿಕೆ ಮಾಡಿ

ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಟಿ.ಕಾಗೇಪುರ ಗ್ರಾಮದಲ್ಲಿ ರಾಜಸ್ಥಾನಿ ಸಮಾಜದವರು ಕಲ್ಯಾಣ ಮಂಟಪವೊಂದರಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದು, ಹೋಟೆಲ್‌ವೊಂದರಿಂದ ಆಹಾರವನ್ನು ತರಿಸಿ ಸೇವನೆ ಮಾಡಿದ್ದಾರೆ. ಬಳಿಕ ಉಳಿದ ಆಹಾರವನ್ನು ಸಮೀಪದಲ್ಲೇ ಇದ್ದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳಿಗೆ ನೀಡಿದ್ದಾರೆ. ಈ ಆಹಾರ ಸೇವಿಸಿದ 50ಕ್ಕೂ ಹೆಚ್ಚು ರಾಜಸ್ಥಾನಿ ಸಮಾಜದವರು ಹಾಗೂ ಗೋಕುಲ ವಿದ್ಯಾಸಂಸ್ಥೆಯ 30 ಮಕ್ಕಳಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಬ್ಬಹರಿದಿನಗಳಲ್ಲಿ ದಾನಿಗಳು ಸಾಮಾನ್ಯವಾಗಿ ಶಾಲೆಗಳಿಗೆ, ಬಡಮಕ್ಕಳಿಗೆ ಉಳಿದ ಆಹಾರವನ್ನು ನೀಡುತ್ತಾರೆ. ಹೀಗೆ ಆಹಾರ ನೀಡುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಹಾಗೆಯೇ ಆಹಾರ ತಯಾರಿಸುವವರು ಬೇಜವಾಬ್ದಾರಿ ತೋರಿ ಗುಣಮಟ್ಟದ ಆಹಾರ ತಯಾರಿಸದಿದ್ದಲ್ಲಿ ಇಂತಹ ದುರಂತಗಳು ಸಂಭವಿಸುತ್ತವೆ.

ಸಾಮೂಹಿಕವಾಗಿ ಆಹಾರ ವಿತರಿಸುವಾಗ ಆಯೋಜಕರು ಅಥವಾ ಒದಗಿಸುವವರು ಮುನ್ನಚ್ಚರಿಕೆಯಿಂದ ಅಡುಗೆಯ ಗುಣಮಟ್ಟವನ್ನು ಹರಿಶೀಲಿಸಿ ನಂತರ ಹಂಚಿಕೆ ಮಾಡಬೇಕಿದೆ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

21 mins ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

54 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago