ಓದುಗರ ಪತ್ರ
ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಟಿ.ಕಾಗೇಪುರ ಗ್ರಾಮದಲ್ಲಿ ರಾಜಸ್ಥಾನಿ ಸಮಾಜದವರು ಕಲ್ಯಾಣ ಮಂಟಪವೊಂದರಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದು, ಹೋಟೆಲ್ವೊಂದರಿಂದ ಆಹಾರವನ್ನು ತರಿಸಿ ಸೇವನೆ ಮಾಡಿದ್ದಾರೆ. ಬಳಿಕ ಉಳಿದ ಆಹಾರವನ್ನು ಸಮೀಪದಲ್ಲೇ ಇದ್ದ ಗೋಕುಲ ವಿದ್ಯಾಸಂಸ್ಥೆಯ ಮಕ್ಕಳಿಗೆ ನೀಡಿದ್ದಾರೆ. ಈ ಆಹಾರ ಸೇವಿಸಿದ 50ಕ್ಕೂ ಹೆಚ್ಚು ರಾಜಸ್ಥಾನಿ ಸಮಾಜದವರು ಹಾಗೂ ಗೋಕುಲ ವಿದ್ಯಾಸಂಸ್ಥೆಯ 30 ಮಕ್ಕಳಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಬ್ಬಹರಿದಿನಗಳಲ್ಲಿ ದಾನಿಗಳು ಸಾಮಾನ್ಯವಾಗಿ ಶಾಲೆಗಳಿಗೆ, ಬಡಮಕ್ಕಳಿಗೆ ಉಳಿದ ಆಹಾರವನ್ನು ನೀಡುತ್ತಾರೆ. ಹೀಗೆ ಆಹಾರ ನೀಡುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಹಾಗೆಯೇ ಆಹಾರ ತಯಾರಿಸುವವರು ಬೇಜವಾಬ್ದಾರಿ ತೋರಿ ಗುಣಮಟ್ಟದ ಆಹಾರ ತಯಾರಿಸದಿದ್ದಲ್ಲಿ ಇಂತಹ ದುರಂತಗಳು ಸಂಭವಿಸುತ್ತವೆ.
ಸಾಮೂಹಿಕವಾಗಿ ಆಹಾರ ವಿತರಿಸುವಾಗ ಆಯೋಜಕರು ಅಥವಾ ಒದಗಿಸುವವರು ಮುನ್ನಚ್ಚರಿಕೆಯಿಂದ ಅಡುಗೆಯ ಗುಣಮಟ್ಟವನ್ನು ಹರಿಶೀಲಿಸಿ ನಂತರ ಹಂಚಿಕೆ ಮಾಡಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…