ಓದುಗರ ಪತ್ರ

ಓದುಗರ ಪತ್ರ| ಗಂಭೀರ್ ನೇಮಕ ಸೂಕ್ತವಾದದ್ದು

ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ರನ್ನು ನೇಮಕ ಮಾಡಲಾಗಿದೆ.

ಗೌತಮ್ ಗಂಭೀರ್ ಒಬ್ಬ ಆಟಗಾರರಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮದೇ ಆದ ಕೊಡುಗೆ ನೀಡಿದವರು. 2011ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಜತೆಗೆ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ 97 ರನ್ ಗಳಿಸುವ ಮೂಲಕ ಗೆಲುವಿನ ರೂವಾರಿಯಾದರು.

ಐಪಿಎಲ್‌ನಲ್ಲಿಯೂ ಗೌತಮ್ ಗಂಭೀರ್ ಉತ್ತಮ ಆಟಗಾರ ಮತ್ತು ಕೋಚ್ ಅನಿಸಿಕೊಂಡಿದ್ದಾರೆ. ಈ ಬಾರಿ ಅವರ ಕೋಚಿಂಗ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಗಳಿಸಿತು. ಅಲ್ಲದೆ ಇವರ ನಾಯಕತ್ವದಲ್ಲಿ ಎರಡು ಬಾರಿ ಕಪ್ ಗೆದ್ದಿದೆ. ಹೀಗೆ ಅಪಾರ ಅನುಭವಗಳುಳ್ಳ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಭಾರತೀಯ ಕ್ರಿಕೆಟ್ ತಂಡ ಮುಂದುವರಿಯುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡಲಿದೆ ಎಂಬ ವಿಶ್ವಾಸ ಮೂಡಿಸಿದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

17 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

48 mins ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

17 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

20 hours ago