ಓದುಗರ ಪತ್ರ
ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದ ಕಲಾಪದಲ್ಲಿ ಜನಹಿತಕ್ಕೆ ಸಂಬಂಧಿಸಿದ ವಿಚಾರಗಳಿಗಿಂತಲೂ ಹೆಚ್ಚಾಗಿ ಹನಿಟ್ರ್ಯಾಪ್ನಂತಹ ವ್ಯಕ್ತಿ
ನೆಲೆಯ ವಿಷಯಗಳು ಹೆಚ್ಚು ಚರ್ಚೆಗೊಳಪಟ್ಟು ಧರಣಿ ಮತ್ತು ಗದ್ದಲ ಉಂಟು ಮಾಡಿತು.
ರಾಜ್ಯದ 48ಕ್ಕೂ ಹೆಚ್ಚು ಮಂದಿ ಶಾಸಕರು, ಗಣ್ಯರು ಮತ್ತು ಪ್ರಭಾವಿ ರಾಜಕಾರಣಿಗಳು ಹನಿಟ್ರ್ಯಾಪ್ನಲ್ಲಿ ಸಿಲುಕಿದ್ದಾರೆ ಎಂದು ಸಹಕಾರ
ಸಚಿವರು ಹೇಳಿದ್ದು, ಕಲಾಪದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಹನಿಟ್ರ್ಯಾಪ್ ಜಾಲದಲ್ಲಿ ಕೆಲವು ಪ್ರಮುಖ ರಾಜಕಾರಣಿಗಳು ಸಿಲುಕಿ ಕೊಂಡಿರುವುದು ನಾಚಿಕೆಗೇಡಿನ ಸಂಗತಿ.
ಈ ಪ್ರಕರಣದಲ್ಲಿ ಕೆಲವು ಸಚಿವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಇದರ ಹಿಂದಿರುವ ಜಾಲವನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆ ಮೂಲಕ ದೇಶದಲ್ಲಿ ರಾಜ್ಯದ ಗೌರವವನ್ನು ಕಾಪಾಡುವ ಕೆಲಸವಾಗಬೇಕಿದೆ.
-ಲಾವಣ್ಯ, ಕಿತ್ತೂರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…