ಓದುಗರ ಪತ್ರ

ಓದುಗರ ಪತ್ರ: ಹನಿಟ್ರ್ಯಾಪ್ ಚರ್ಚೆಯ ವಿಷಯವೇ?

ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ.

ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಆ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸದಿಂದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಮೂಲಸೌಕರ್ಯಗಳ ಕೊರತೆ, ಶಿಕ್ಷಣ, ವೈದ್ಯಕೀಯ ಸೌಲಭ್ಯಗಳ ಕೊರತೆ ಹೀಗೆ ಅನೇಕ ಸಮಸ್ಯೆಗಳ ಕುರಿತು ಅವರು ಸದನದಲ್ಲಿ ಚರ್ಚಿಸಿ ಪರಿಹಾರಗಳನ್ನು
ಹುಡುಕಬೇಕಿತ್ತು.

ಆದರೆ, ಶಾಸಕರು ತಮ್ಮ ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಪ್ರಕರಣ, ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ವಿಚಾರಗಳನ್ನೇ ಚರ್ಚಿಸುತ್ತಾ ಸದನದ ಸಮಯವನ್ನು ಹಾಳು ಮಾಡುವ ಜತೆಗೆ ಕಲಾಪದ ವೇಳೆ ಗದ್ದಲ ಸೃಷ್ಟಿಸುವುದು ಮಾಮೂಲಿಯಾಗಿದೆ.

ಇಂದಿಗೂ ಅನೇಕ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲ. ಕೆಲ ಗ್ರಾಮಗಳಿಗಂತೂ
ಸರಿಯಾದ ರಸ್ತೆಗಳೇ ಇಲ್ಲದೆ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ಇನ್ನು ಮೂಲಭೂತ ಸಮಸ್ಯೆಗಳು ಬಹುತೇಕ ಗ್ರಾಮಗಳ ಜನರನ್ನು ಕಾಡುತ್ತಿವೆ.

ಇಂತಹ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳಾದವರು ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು, ಹನಿಟ್ರ್ಯಾಪ್ ಪ್ರಕರಣವನ್ನೇ ಚರ್ಚಿಸುತ್ತಾ ಕಾಲಹರಣ ಮಾಡಿದ್ದು ವಿಪರ್ಯಾಸ. ಮುಂದಾದರೂ ಶಾಸಕರು ತಮ್ಮ ಜವಾಬ್ದಾರಿಗಳನ್ನು ಅರಿತು, ಯಾವುದರ ಬಗ್ಗೆ ಚರ್ಚಿಸಬೇಕು ಎಂಬುದನ್ನು ತಿಳಿದುಕೊಳ್ಳಲಿ.

-ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

35 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

1 hour ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

2 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

2 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago