ಓದುಗರ ಪತ್ರ

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವುದು ಸರಿಯಲ್ಲ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್. ಕೆ. ಪಾಟೀಲ್, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಿಗೂ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯಿದೆಗೆ ತಿದ್ದುಪಡಿ ತರಲಾಗುವುದು. ಗುಜರಾತ್‌ನಲ್ಲಿಯೂ ಇದೇ ವ್ಯವಸ್ಥೆ ಜಾರಿಯಲ್ಲಿದೆ ಎಂದಿದ್ದಾರೆ. ಸದ್ಯ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ರಾಜ್ಯ ಪಾಲರೇ ಕುಲಾಽಪತಿಗಳಾಗಿದ್ದಾರೆ. ಅದು ಅವರ ಸಾಂವಿಧಾನಿಕ ಹುದ್ದೆ ಕೂಡ. ಅಲ್ಲದೆ ಉನ್ನತ ಶಿಕ್ಷಣ ಸಚಿವರು ಸಮ ಕುಲಾಽಪತಿಗಳಾಗಿದ್ದಾರೆ. ರಾಜ್ಯಪಾಲರು ಕುಲಾಧಿಪತಿಗಳಾಗಿರುವುದರಿಂದ ಅವರಿಗೆ ವಿಶ್ವವಿದ್ಯಾನಿಲಯಗಳ ಆಡಳಿತ ವ್ಯವಸ್ಥೆಯಲ್ಲಿ ಕೆಲವೊಂದು ಅಽಕಾರ ಗಳನ್ನು ನೀಡಲಾಗಿದೆ. ಹೀಗಿರುವಾಗ ಏಕಾಏಕಿ ರಾಜ್ಯಪಾಲರ ಅಽಕಾರವನ್ನು ಮೊಟಕುಗೊಳಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ಸರ್ಕಾರಕ್ಕೆ ರಾಜ್ಯಪಾಲರ ಬಗ್ಗೆ ಪೂರ್ವಗ್ರಹ ಭಾವನೆ ಇದೆ ಎಂಬುದನ್ನು ಪುಷ್ಟೀಕರಿಸುತ್ತದೆ.

ಇತ್ತೀಚೆಗೆ ನಡೆದ ಕೆಲವು ರಾಜಕೀಯ ಬೆಳವಣಿಗಗಳನ್ನು ನೋಡಿದರೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಕಟುವಾಗಿದೆಯೇನೋ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಇಂತಹ ಸಮಯದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವುದು ಆ ಅನುಮಾನಕ್ಕೆ ಮತ್ತಷ್ಟು ಇಂಬು ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಯವರನ್ನು ಕುಲಾಧಿಪತಿಯನ್ನಾಗಿ ಮಾಡುವ ಕಾಯಿದೆ ತಿದ್ದುಪಡಿ ಬದಲು ರಾಜ್ಯಪಾಲರೇ ಕುಲಾಽಪತಿಗಳಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

1 hour ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

1 hour ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago