ಓದುಗರ ಪತ್ರ

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವುದು ಸರಿಯಲ್ಲ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್. ಕೆ. ಪಾಟೀಲ್, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಿಗೂ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯಿದೆಗೆ ತಿದ್ದುಪಡಿ ತರಲಾಗುವುದು. ಗುಜರಾತ್‌ನಲ್ಲಿಯೂ ಇದೇ ವ್ಯವಸ್ಥೆ ಜಾರಿಯಲ್ಲಿದೆ ಎಂದಿದ್ದಾರೆ. ಸದ್ಯ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ರಾಜ್ಯ ಪಾಲರೇ ಕುಲಾಽಪತಿಗಳಾಗಿದ್ದಾರೆ. ಅದು ಅವರ ಸಾಂವಿಧಾನಿಕ ಹುದ್ದೆ ಕೂಡ. ಅಲ್ಲದೆ ಉನ್ನತ ಶಿಕ್ಷಣ ಸಚಿವರು ಸಮ ಕುಲಾಽಪತಿಗಳಾಗಿದ್ದಾರೆ. ರಾಜ್ಯಪಾಲರು ಕುಲಾಧಿಪತಿಗಳಾಗಿರುವುದರಿಂದ ಅವರಿಗೆ ವಿಶ್ವವಿದ್ಯಾನಿಲಯಗಳ ಆಡಳಿತ ವ್ಯವಸ್ಥೆಯಲ್ಲಿ ಕೆಲವೊಂದು ಅಽಕಾರ ಗಳನ್ನು ನೀಡಲಾಗಿದೆ. ಹೀಗಿರುವಾಗ ಏಕಾಏಕಿ ರಾಜ್ಯಪಾಲರ ಅಽಕಾರವನ್ನು ಮೊಟಕುಗೊಳಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ಸರ್ಕಾರಕ್ಕೆ ರಾಜ್ಯಪಾಲರ ಬಗ್ಗೆ ಪೂರ್ವಗ್ರಹ ಭಾವನೆ ಇದೆ ಎಂಬುದನ್ನು ಪುಷ್ಟೀಕರಿಸುತ್ತದೆ.

ಇತ್ತೀಚೆಗೆ ನಡೆದ ಕೆಲವು ರಾಜಕೀಯ ಬೆಳವಣಿಗಗಳನ್ನು ನೋಡಿದರೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಕಟುವಾಗಿದೆಯೇನೋ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಇಂತಹ ಸಮಯದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವುದು ಆ ಅನುಮಾನಕ್ಕೆ ಮತ್ತಷ್ಟು ಇಂಬು ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಯವರನ್ನು ಕುಲಾಧಿಪತಿಯನ್ನಾಗಿ ಮಾಡುವ ಕಾಯಿದೆ ತಿದ್ದುಪಡಿ ಬದಲು ರಾಜ್ಯಪಾಲರೇ ಕುಲಾಽಪತಿಗಳಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

10 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

12 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

12 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

12 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

12 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

12 hours ago