ಓದುಗರ ಪತ್ರ
ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್. ಕೆ. ಪಾಟೀಲ್, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಿಗೂ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯಿದೆಗೆ ತಿದ್ದುಪಡಿ ತರಲಾಗುವುದು. ಗುಜರಾತ್ನಲ್ಲಿಯೂ ಇದೇ ವ್ಯವಸ್ಥೆ ಜಾರಿಯಲ್ಲಿದೆ ಎಂದಿದ್ದಾರೆ. ಸದ್ಯ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ರಾಜ್ಯ ಪಾಲರೇ ಕುಲಾಽಪತಿಗಳಾಗಿದ್ದಾರೆ. ಅದು ಅವರ ಸಾಂವಿಧಾನಿಕ ಹುದ್ದೆ ಕೂಡ. ಅಲ್ಲದೆ ಉನ್ನತ ಶಿಕ್ಷಣ ಸಚಿವರು ಸಮ ಕುಲಾಽಪತಿಗಳಾಗಿದ್ದಾರೆ. ರಾಜ್ಯಪಾಲರು ಕುಲಾಧಿಪತಿಗಳಾಗಿರುವುದರಿಂದ ಅವರಿಗೆ ವಿಶ್ವವಿದ್ಯಾನಿಲಯಗಳ ಆಡಳಿತ ವ್ಯವಸ್ಥೆಯಲ್ಲಿ ಕೆಲವೊಂದು ಅಽಕಾರ ಗಳನ್ನು ನೀಡಲಾಗಿದೆ. ಹೀಗಿರುವಾಗ ಏಕಾಏಕಿ ರಾಜ್ಯಪಾಲರ ಅಽಕಾರವನ್ನು ಮೊಟಕುಗೊಳಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ಸರ್ಕಾರಕ್ಕೆ ರಾಜ್ಯಪಾಲರ ಬಗ್ಗೆ ಪೂರ್ವಗ್ರಹ ಭಾವನೆ ಇದೆ ಎಂಬುದನ್ನು ಪುಷ್ಟೀಕರಿಸುತ್ತದೆ.
ಇತ್ತೀಚೆಗೆ ನಡೆದ ಕೆಲವು ರಾಜಕೀಯ ಬೆಳವಣಿಗಗಳನ್ನು ನೋಡಿದರೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಕಟುವಾಗಿದೆಯೇನೋ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಇಂತಹ ಸಮಯದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವುದು ಆ ಅನುಮಾನಕ್ಕೆ ಮತ್ತಷ್ಟು ಇಂಬು ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಯವರನ್ನು ಕುಲಾಧಿಪತಿಯನ್ನಾಗಿ ಮಾಡುವ ಕಾಯಿದೆ ತಿದ್ದುಪಡಿ ಬದಲು ರಾಜ್ಯಪಾಲರೇ ಕುಲಾಽಪತಿಗಳಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…