ಓದುಗರ ಪತ್ರ
ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್. ಕೆ. ಪಾಟೀಲ್, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಿಗೂ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯಿದೆಗೆ ತಿದ್ದುಪಡಿ ತರಲಾಗುವುದು. ಗುಜರಾತ್ನಲ್ಲಿಯೂ ಇದೇ ವ್ಯವಸ್ಥೆ ಜಾರಿಯಲ್ಲಿದೆ ಎಂದಿದ್ದಾರೆ. ಸದ್ಯ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ರಾಜ್ಯ ಪಾಲರೇ ಕುಲಾಽಪತಿಗಳಾಗಿದ್ದಾರೆ. ಅದು ಅವರ ಸಾಂವಿಧಾನಿಕ ಹುದ್ದೆ ಕೂಡ. ಅಲ್ಲದೆ ಉನ್ನತ ಶಿಕ್ಷಣ ಸಚಿವರು ಸಮ ಕುಲಾಽಪತಿಗಳಾಗಿದ್ದಾರೆ. ರಾಜ್ಯಪಾಲರು ಕುಲಾಧಿಪತಿಗಳಾಗಿರುವುದರಿಂದ ಅವರಿಗೆ ವಿಶ್ವವಿದ್ಯಾನಿಲಯಗಳ ಆಡಳಿತ ವ್ಯವಸ್ಥೆಯಲ್ಲಿ ಕೆಲವೊಂದು ಅಽಕಾರ ಗಳನ್ನು ನೀಡಲಾಗಿದೆ. ಹೀಗಿರುವಾಗ ಏಕಾಏಕಿ ರಾಜ್ಯಪಾಲರ ಅಽಕಾರವನ್ನು ಮೊಟಕುಗೊಳಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ಸರ್ಕಾರಕ್ಕೆ ರಾಜ್ಯಪಾಲರ ಬಗ್ಗೆ ಪೂರ್ವಗ್ರಹ ಭಾವನೆ ಇದೆ ಎಂಬುದನ್ನು ಪುಷ್ಟೀಕರಿಸುತ್ತದೆ.
ಇತ್ತೀಚೆಗೆ ನಡೆದ ಕೆಲವು ರಾಜಕೀಯ ಬೆಳವಣಿಗಗಳನ್ನು ನೋಡಿದರೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಕಟುವಾಗಿದೆಯೇನೋ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಇಂತಹ ಸಮಯದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವುದು ಆ ಅನುಮಾನಕ್ಕೆ ಮತ್ತಷ್ಟು ಇಂಬು ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಯವರನ್ನು ಕುಲಾಧಿಪತಿಯನ್ನಾಗಿ ಮಾಡುವ ಕಾಯಿದೆ ತಿದ್ದುಪಡಿ ಬದಲು ರಾಜ್ಯಪಾಲರೇ ಕುಲಾಽಪತಿಗಳಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…