ಓದುಗರ ಪತ್ರ

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವುದು ಸರಿಯಲ್ಲ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್. ಕೆ. ಪಾಟೀಲ್, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಿಗೂ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ಮಾಡುವುದಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯಿದೆಗೆ ತಿದ್ದುಪಡಿ ತರಲಾಗುವುದು. ಗುಜರಾತ್‌ನಲ್ಲಿಯೂ ಇದೇ ವ್ಯವಸ್ಥೆ ಜಾರಿಯಲ್ಲಿದೆ ಎಂದಿದ್ದಾರೆ. ಸದ್ಯ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ರಾಜ್ಯ ಪಾಲರೇ ಕುಲಾಽಪತಿಗಳಾಗಿದ್ದಾರೆ. ಅದು ಅವರ ಸಾಂವಿಧಾನಿಕ ಹುದ್ದೆ ಕೂಡ. ಅಲ್ಲದೆ ಉನ್ನತ ಶಿಕ್ಷಣ ಸಚಿವರು ಸಮ ಕುಲಾಽಪತಿಗಳಾಗಿದ್ದಾರೆ. ರಾಜ್ಯಪಾಲರು ಕುಲಾಧಿಪತಿಗಳಾಗಿರುವುದರಿಂದ ಅವರಿಗೆ ವಿಶ್ವವಿದ್ಯಾನಿಲಯಗಳ ಆಡಳಿತ ವ್ಯವಸ್ಥೆಯಲ್ಲಿ ಕೆಲವೊಂದು ಅಽಕಾರ ಗಳನ್ನು ನೀಡಲಾಗಿದೆ. ಹೀಗಿರುವಾಗ ಏಕಾಏಕಿ ರಾಜ್ಯಪಾಲರ ಅಽಕಾರವನ್ನು ಮೊಟಕುಗೊಳಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ಸರ್ಕಾರಕ್ಕೆ ರಾಜ್ಯಪಾಲರ ಬಗ್ಗೆ ಪೂರ್ವಗ್ರಹ ಭಾವನೆ ಇದೆ ಎಂಬುದನ್ನು ಪುಷ್ಟೀಕರಿಸುತ್ತದೆ.

ಇತ್ತೀಚೆಗೆ ನಡೆದ ಕೆಲವು ರಾಜಕೀಯ ಬೆಳವಣಿಗಗಳನ್ನು ನೋಡಿದರೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ಕಟುವಾಗಿದೆಯೇನೋ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಇಂತಹ ಸಮಯದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವುದು ಆ ಅನುಮಾನಕ್ಕೆ ಮತ್ತಷ್ಟು ಇಂಬು ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಯವರನ್ನು ಕುಲಾಧಿಪತಿಯನ್ನಾಗಿ ಮಾಡುವ ಕಾಯಿದೆ ತಿದ್ದುಪಡಿ ಬದಲು ರಾಜ್ಯಪಾಲರೇ ಕುಲಾಽಪತಿಗಳಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. -ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

10 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

10 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

10 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

11 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

11 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

11 hours ago